25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ: ಉಚಿತ ನೇತ್ರ ಚಿಕಿತ್ಸಾ ಶಿಬಿರ

ಅಳದಂಗಡಿ: ಪ್ರಾಥಮಿಕ ಆರೋಗ್ಯ ಕೇಂದ್ರ ಅಳದಂಗಡಿ “ಆರೋಗ್ಯವಂತ ಕಣ್ಣುಗಳು ಮನುಷ್ಯನ ಅತ್ಯಮೂಲ್ಯ ಆಸ್ತಿ”. ಆರೋಗ್ಯವಂತ ಕಣ್ಣುಗಳು ಮನುಷ್ಯ ಜೀವನದ ಅತ್ಯಮೂಲ್ಯ ಆಸ್ತಿಯೆಂದು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಕಣ್ಣು ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಅನಿಲ್ ರಾವ್ ತಿಳಿಸಿದರು.

ಅವರು ಅಳದಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ನೇತ್ರ ತಪಾಸಣೆ ಮತ್ತು ಚಿಕಿತ್ಸಾ ಶಿಬಿರದ ಉದ್ಘಾಟನೆಯನ್ನು ನೆರವೇರಿಸಿ ಶಿಬಿರಕ್ಕೆ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಅಳದಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸೌಮ್ಯ ಹರಿಪ್ರಸಾದ್, ಸುಲ್ಕೇರಿ ಲಯನ್ಸ್ ಕ್ಲಬ್ ಅಧ್ಯಕ್ಷ ರವಿ ಶೆಟ್ಟಿ ಶುಭ ಹಾರೈಸಿದರು. ಸಭೆಯಲ್ಲಿ ಅಳದಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅರ್ಜುನ್, ಆಡಳಿತಾಧಿಕಾರಿ ಡಾ. ಸಂಜತ್, ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗ, ಆಶಾ ಕಾರ್ಯಕರ್ತೆಯರು, ಲಯನ್ಸ್ ಕ್ಲಬ್ ಸದಸ್ಯರುಗಳು ಭಾಗವಹಿಸಿದ್ದರು.

125ಕ್ಕೂ ಹೆಚ್ಚು ಶಿಬಿರಾರ್ಥಿಗಳು ಈ ಶಿಬಿರದ ಸದುಪಯೋಗ ಪಡೆದರು. ಸುಲ್ಕೇರಿ ಲಯನ್ಸ್ ಕ್ಲಬ್ ಸದಸ್ಯ ವಿಶ್ವನಾಥ್ ಶೆಟ್ಟಿ ಸ್ವಾಗತಿಸಿ, ಕಾರ್ಯದರ್ಶಿ ಸುರೇಶ್ ಭಟ್ ಧನ್ಯವಾದವಿತ್ತರು.

Related posts

ಬಂದಾರು : ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಸನ್: ಅತ್ಯುತ್ತಮ ವಲಯ ಪ್ರಶಸ್ತಿಯಲ್ಲಿ ಬೆಳ್ತಂಗಡಿ ವಲಯ ತೃತೀಯ ಸ್ಥಾನ

Suddi Udaya

ನೆರಿಯ, ಕೊಕ್ಕಡದಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ ನಾಯಕರು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಿಜೆಪಿ ಯುವಮೋರ್ಚಾ ರಾಜ್ಯಾಧ್ಯಕ್ಷ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜ್ ಭೇಟಿ

Suddi Udaya

ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಪ್ರಥಮ ಬಹುಮಾನ

Suddi Udaya

ಬೆಳ್ತಂಗಡಿ ಸರಕಾರಿ ಪ.ಪೂ. ಕಾಲೇಜಿನಲ್ಲಿ ವೈದ್ಯಕೀಯ ತಪಾಸಣಾ ಶಿಬಿರ

Suddi Udaya
error: Content is protected !!