24.4 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಸುಧೀರ್ ಜೈನ್ ಬಳಂಜ

ಬೆಳ್ತಂಗಡಿ: ಬೆಳ್ತಂಗಡಿಯ ಯುವ ಉದ್ಯಮಿ ಕಳೆದ ಎರಡು ವರ್ಷಗಳಿಂದ ಬೆಳೆಸಿದ ತನ್ನ ತಲೆಕೂದಲನ್ನು ಕ್ಯಾನ್ಸರ್‌ ಪೀಡಿತರಿಗೆ ದಾನ ಮಾಡುವ ಮೂಲಕ ಮಾದರಿಯಾಗಿದ್ದಾರೆ.

ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಯಾನ್ಸ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯ ಮಾಲಕ ಬಳಂಜದ ಯುವಕ, ಯುವ ಉದ್ಯಮಿ ಸುಧೀರ್ ಜೈನ್ ಕೇಶದಾನ ಮಾಡಿ ಎಲ್ಲರ ಮೆಚ್ಚುಗೆ ಗಳಿಸಿದ್ದಾರೆ.

ಎರಡು ವರ್ಷಗಳ ಕಾಲ ಬೆಳೆಸಿದ ಕೂದಲನ್ನು ಶೃಂಗಾರ್ ಮಾಸ್ಟರ್ ಕಟ್ಸ್ ಸಂಸ್ಥೆಯ ಅಭಿಷೇಕ್ ರವರ ಮೂಲಕ ಮಂಗಳೂರಿಗೆ ಮುಟ್ಟಿಸಿ ಚೆನ್ನೈ ಸಂಸ್ಥೆಯೊಂದಕ್ಕೆ ತಲುಪಿಸಿ ಕ್ಯಾನ್ಸರ್‌ ಪೀಡಿತರಿಗೆ ಹಸ್ತಾಂತರಿಸಿದ್ದಾರೆ.

ಇದೀಗ ಸುಧೀರ್ ಜೈನ್ ರವರು ಮುಂದಿನ ಬಾರಿ ಕೂಡ ಕ್ಯಾನ್ಸರ್ ಪೀಡಿತರಿಗೆ ನೆರವಾಗುವ ದೃಷ್ಟಿಯಿಂದ ತಲೆ ಕೂದಲನ್ನು ಬಿಟ್ಡಿದ್ದಾರೆ. ಪ್ರತಿ ವರ್ಷ ಕ್ಯಾನ್ಸರ್ ಪೀಡಿತರಿಗೆ ತಲೆ ಕೂದಲನ್ನು ನೀಡುವ ಸಂಕಲ್ಪ ಮಾಡಿದ್ದು ಸಮಾಜಕ್ಕೆ ಮಾದರಿಯಾಗಿದ್ದಾರೆ.

Related posts

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಕಾರ್ಯತಂತ್ರ ಯೋಜನೆ ತರಬೇತಿ ಕಾರ್ಯಾಗಾರ

Suddi Udaya

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲಾ ವಾರ್ಷಿಕೋತ್ಸವ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲ ಚುನಾವಣೆ

Suddi Udaya

ಉಜಿರೆಯ ಲಾಡ್ಜ್ ಗೆ ಪೊಲೀಸ್ ದಾಳಿ: ವೇಶ್ಯಾವಾಟಿಕೆ‌ ನಿರತರಾಗಿದ್ದ‌ಮೂವರ ಬಂಧನ

Suddi Udaya

ವೇಣೂರು ಭಗವಾನ್ ಶ್ರೀ ಬಾಹುಬಲಿಗೆ ಮಹಾ ಮಸ್ತಕಾಭಿಷೇಕ: ಶ್ರೀ ಧ.ಮಂ. ಐಟಿಐ ವಿದ್ಯಾರ್ಥಿಗಳಿಂದ ಸ್ವಚ್ಚತಾ ಕಾರ್ಯ

Suddi Udaya

ಶಿಬಾಜೆ: ರಸ್ತೆಗೆ ಅಡ್ಡಲಾಗಿ ಇಟ್ಟಿಗೆ ಇಟ್ಟ ಪರಿಣಾಮ ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕನಿಗೆ ಗಾಯ ಆರೋಪಿ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!