September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಸುಧೀರ್ ಜೈನ್ ಬಳಂಜ

ಬೆಳ್ತಂಗಡಿ: ಬೆಳ್ತಂಗಡಿಯ ಯುವ ಉದ್ಯಮಿ ಕಳೆದ ಎರಡು ವರ್ಷಗಳಿಂದ ಬೆಳೆಸಿದ ತನ್ನ ತಲೆಕೂದಲನ್ನು ಕ್ಯಾನ್ಸರ್‌ ಪೀಡಿತರಿಗೆ ದಾನ ಮಾಡುವ ಮೂಲಕ ಮಾದರಿಯಾಗಿದ್ದಾರೆ.

ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಯಾನ್ಸ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯ ಮಾಲಕ ಬಳಂಜದ ಯುವಕ, ಯುವ ಉದ್ಯಮಿ ಸುಧೀರ್ ಜೈನ್ ಕೇಶದಾನ ಮಾಡಿ ಎಲ್ಲರ ಮೆಚ್ಚುಗೆ ಗಳಿಸಿದ್ದಾರೆ.

ಎರಡು ವರ್ಷಗಳ ಕಾಲ ಬೆಳೆಸಿದ ಕೂದಲನ್ನು ಶೃಂಗಾರ್ ಮಾಸ್ಟರ್ ಕಟ್ಸ್ ಸಂಸ್ಥೆಯ ಅಭಿಷೇಕ್ ರವರ ಮೂಲಕ ಮಂಗಳೂರಿಗೆ ಮುಟ್ಟಿಸಿ ಚೆನ್ನೈ ಸಂಸ್ಥೆಯೊಂದಕ್ಕೆ ತಲುಪಿಸಿ ಕ್ಯಾನ್ಸರ್‌ ಪೀಡಿತರಿಗೆ ಹಸ್ತಾಂತರಿಸಿದ್ದಾರೆ.

ಇದೀಗ ಸುಧೀರ್ ಜೈನ್ ರವರು ಮುಂದಿನ ಬಾರಿ ಕೂಡ ಕ್ಯಾನ್ಸರ್ ಪೀಡಿತರಿಗೆ ನೆರವಾಗುವ ದೃಷ್ಟಿಯಿಂದ ತಲೆ ಕೂದಲನ್ನು ಬಿಟ್ಡಿದ್ದಾರೆ. ಪ್ರತಿ ವರ್ಷ ಕ್ಯಾನ್ಸರ್ ಪೀಡಿತರಿಗೆ ತಲೆ ಕೂದಲನ್ನು ನೀಡುವ ಸಂಕಲ್ಪ ಮಾಡಿದ್ದು ಸಮಾಜಕ್ಕೆ ಮಾದರಿಯಾಗಿದ್ದಾರೆ.

Related posts

ಮರುಮೌಲ್ಯ ಮಾಪನದಲ್ಲಿ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಕು. ಅನನ್ಯ ರಾಜ್ಯಕ್ಕೆ 9ನೇ ರ‍್ಯಾಂಕ್

Suddi Udaya

ಮುಂಡಾಜೆ ಹಿ. ಪ್ರಾ. ಶಾಲಾ ವಿದ್ಯಾರ್ಥಿನಿ ದ್ವಿಷಾ ಯು.ಡಿ. ರಿಗೆ ರಾಷ್ಟ್ರ ಮಟ್ಟದ ಗೋಲ್ಡನ್ ಆರೋ ಪ್ರಶಸ್ತಿ

Suddi Udaya

ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

Suddi Udaya

ಮಂಗಳೂರಿನಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಚುನಾವಣೆಯಲ್ಲಿ ಅಭೂತ ಪೂರ್ವ ವಿಜಯಕ್ಕಾಗಿ ಶ್ರಮಿಸಿದ ಕಾರ್ಯಕರ್ತರಿಗೆ ಹಾಗೂ ನೂತನ ನಿದೇ೯ಶಕರುಗಳಿಗೆ ಅಭಿನಂದನೆ

Suddi Udaya

ಎಸ್.ಡಿ.ಎಮ್ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!