23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಸುಧೀರ್ ಜೈನ್ ಬಳಂಜ

ಬೆಳ್ತಂಗಡಿ: ಬೆಳ್ತಂಗಡಿಯ ಯುವ ಉದ್ಯಮಿ ಕಳೆದ ಎರಡು ವರ್ಷಗಳಿಂದ ಬೆಳೆಸಿದ ತನ್ನ ತಲೆಕೂದಲನ್ನು ಕ್ಯಾನ್ಸರ್‌ ಪೀಡಿತರಿಗೆ ದಾನ ಮಾಡುವ ಮೂಲಕ ಮಾದರಿಯಾಗಿದ್ದಾರೆ.

ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಯಾನ್ಸ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯ ಮಾಲಕ ಬಳಂಜದ ಯುವಕ, ಯುವ ಉದ್ಯಮಿ ಸುಧೀರ್ ಜೈನ್ ಕೇಶದಾನ ಮಾಡಿ ಎಲ್ಲರ ಮೆಚ್ಚುಗೆ ಗಳಿಸಿದ್ದಾರೆ.

ಎರಡು ವರ್ಷಗಳ ಕಾಲ ಬೆಳೆಸಿದ ಕೂದಲನ್ನು ಶೃಂಗಾರ್ ಮಾಸ್ಟರ್ ಕಟ್ಸ್ ಸಂಸ್ಥೆಯ ಅಭಿಷೇಕ್ ರವರ ಮೂಲಕ ಮಂಗಳೂರಿಗೆ ಮುಟ್ಟಿಸಿ ಚೆನ್ನೈ ಸಂಸ್ಥೆಯೊಂದಕ್ಕೆ ತಲುಪಿಸಿ ಕ್ಯಾನ್ಸರ್‌ ಪೀಡಿತರಿಗೆ ಹಸ್ತಾಂತರಿಸಿದ್ದಾರೆ.

ಇದೀಗ ಸುಧೀರ್ ಜೈನ್ ರವರು ಮುಂದಿನ ಬಾರಿ ಕೂಡ ಕ್ಯಾನ್ಸರ್ ಪೀಡಿತರಿಗೆ ನೆರವಾಗುವ ದೃಷ್ಟಿಯಿಂದ ತಲೆ ಕೂದಲನ್ನು ಬಿಟ್ಡಿದ್ದಾರೆ. ಪ್ರತಿ ವರ್ಷ ಕ್ಯಾನ್ಸರ್ ಪೀಡಿತರಿಗೆ ತಲೆ ಕೂದಲನ್ನು ನೀಡುವ ಸಂಕಲ್ಪ ಮಾಡಿದ್ದು ಸಮಾಜಕ್ಕೆ ಮಾದರಿಯಾಗಿದ್ದಾರೆ.

Related posts

ಸುರತ್ಕಲ್ ನಲ್ಲಿ ದ.ಕ. ಜಿಲ್ಲೆಯ ಒಂಭತ್ತನೆಯ ಗಮಕ ಕಲಾ ಸಮ್ಮೇಳನ: ಸಮ್ಮೇಳನದ ಸರ್ವಾಧ್ಯಕ್ಷರಾಗಿ ಗಮಕಿ ಯಜ್ಞೇಶ್ ಆಚಾರ್ ಸುರತ್ಕಲ್ ಆಯ್ಕೆ

Suddi Udaya

ಪುದುವೆಟ್ಟು ಶ್ರೀಧ.ಮಂ.ಅನುದಾನಿತ ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಇತಿಹಾಸ ಪ್ರಸಿದ್ದ ನಿಡಿಗಲ್ ಸಿರಿಜಾತ್ರಾ ಮಹೋತ್ಸವದ ಅಧ್ಯಕ್ಷರಾಗಿ ಯಶೋಧರ ಗೌಡ ಗುರಿಪಳ್ಳ ಆಯ್ಕೆ

Suddi Udaya

ಮಡಂತ್ಯಾರುನಲ್ಲಿ ಚರಂಡಿಗೆ ಬಿದ್ದ ಕಾರು

Suddi Udaya

ವಿಧಾನ ಪರಿಷತ್ತು ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ರವರಿಂದ ನಾಮಪತ್ರ ಸಲ್ಲಿಕೆ

Suddi Udaya

ಉಜಿರೆ: ಕುಂಜರ್ಪದಲ್ಲಿ 4ನೇ ವರ್ಷದ ದುರ್ಗಾಪೂಜೆ

Suddi Udaya
error: Content is protected !!