25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ ಗ್ರಾ.ಪಂ.ನಲ್ಲಿ ಕಾವಲು ಸಮಿತಿ ಸಭೆ

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಕಾವಲು ಸಮಿತಿಯ ಸಭೆ ಅಧ್ಯಕ್ಷೆ ಶ್ರೀಮತಿ ಸುಭಾಷಿಣಿ ಕೆ.ರವರ ಅಧ್ಯಕ್ಷತೆಯಲ್ಲಿ ಜರಗಿತು.

ಗ್ರಾಮ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರು, ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಸರ್ಕಾರಿ ಶಾಲೆಗಳ ಮುಖ್ಯಸ್ಥರು, ಕಳಿಯ ಆರೋಗ್ಯ ಸಹಾಯಕರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತರು, ಸಿಬ್ಬಂದಿಗಳು ಭಾಗವಹಿಸಿದ್ದರು.

ಸಭೆಯಲ್ಲಿ ಗಾಂಜಾ ಮಾದಕ ಪದಾರ್ಥ ಸೇವನೆಯ ಬಗ್ಗೆ ಜಾಗೃತಿ ಮೂಡಿಸಲು ಚರ್ಚಿಸಲಾಯಿತು. ಆರೋಗ್ಯ ಇಲಾಖೆಯ ಡಾ .ನಾಗರಾಜ್ ಮಳೆಗಾಲದಲ್ಲಿ ಡೆಂಗ್ಯೂ, ಮಲೇರಿಯಾ ಮುಂತಾದ ರೋಗ ಹರಡದಂತೆ ಮನೆಯ ಸುತ್ತಮುತ್ತ ಸ್ವಚ್ಛತೆಯನ್ನು ಕಾಪಾಡಲು ಸಾರ್ವಜನಿಕರಿಗೆ ಮಾಹಿತಿ ನೀಡುವಂತೆ ತಿಳಿಸಿ ಆರೋಗ್ಯ ಇಲಾಖೆಯ ಕರಪತ್ರ ಹಂಚಿದರು. ಪಂಚಾಯತ್ ವ್ಯಾಪ್ತಿಯಲ್ಲಿ ಬಾಲ್ಯ ವಿವಾಹವನ್ನು ಕಟ್ಟುನಿಟ್ಟಾಗಿ ತಡೆಗಟ್ಟಲು ಸೂಕ್ತ ಕ್ರಮವನ್ನು ವಹಿಸಲು ನಿರ್ಣಯಿಸಲಾಯಿತು.

ಕಾರ್ಯದರ್ಶಿ ಕುಂಞ ಕೆ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಜು.25: ಹಾಲು ಹೆಚ್ಚಳ ಮತ್ತು ಹೈನುಗಾರಿಕಾ ಮಾಹಿತಿ ಕಾರ್ಯಕ್ರಮ

Suddi Udaya

ಬಸದಿ ಸ್ವಚ್ಛತಾ ತಂಡದಿಂದ ವನಮಹೋತ್ಸವದ ಅಂಗವಾಗಿ ಪಕ್ಷಿ ಸಂಕುಲದ ರಕ್ಷಣೆಗಾಗಿ ಬೀಜಬಿತ್ತನೆ

Suddi Udaya

ಇಳಂತಿಲ : ಈಶ್ವರಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ನೆಲ್ಯಾಡಿ ಲಾವತಡ್ಕದಲ್ಲಿ ಕಾರು ಪಲ್ಟಿ : 6 ಮಂದಿಗೆ ಗಂಭೀರ ಗಾಯ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಧನುಶ್ರೀ ಎಸ್ ಕುಲಾಲ್ ತೃತೀಯ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ಖಂಡಿಸಿ ನಾವೂರು ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya
error: Content is protected !!