23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ ಗ್ರಾ.ಪಂ.ನಲ್ಲಿ ಕಾವಲು ಸಮಿತಿ ಸಭೆ

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಕಾವಲು ಸಮಿತಿಯ ಸಭೆ ಅಧ್ಯಕ್ಷೆ ಶ್ರೀಮತಿ ಸುಭಾಷಿಣಿ ಕೆ.ರವರ ಅಧ್ಯಕ್ಷತೆಯಲ್ಲಿ ಜರಗಿತು.

ಗ್ರಾಮ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರು, ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಸರ್ಕಾರಿ ಶಾಲೆಗಳ ಮುಖ್ಯಸ್ಥರು, ಕಳಿಯ ಆರೋಗ್ಯ ಸಹಾಯಕರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತರು, ಸಿಬ್ಬಂದಿಗಳು ಭಾಗವಹಿಸಿದ್ದರು.

ಸಭೆಯಲ್ಲಿ ಗಾಂಜಾ ಮಾದಕ ಪದಾರ್ಥ ಸೇವನೆಯ ಬಗ್ಗೆ ಜಾಗೃತಿ ಮೂಡಿಸಲು ಚರ್ಚಿಸಲಾಯಿತು. ಆರೋಗ್ಯ ಇಲಾಖೆಯ ಡಾ .ನಾಗರಾಜ್ ಮಳೆಗಾಲದಲ್ಲಿ ಡೆಂಗ್ಯೂ, ಮಲೇರಿಯಾ ಮುಂತಾದ ರೋಗ ಹರಡದಂತೆ ಮನೆಯ ಸುತ್ತಮುತ್ತ ಸ್ವಚ್ಛತೆಯನ್ನು ಕಾಪಾಡಲು ಸಾರ್ವಜನಿಕರಿಗೆ ಮಾಹಿತಿ ನೀಡುವಂತೆ ತಿಳಿಸಿ ಆರೋಗ್ಯ ಇಲಾಖೆಯ ಕರಪತ್ರ ಹಂಚಿದರು. ಪಂಚಾಯತ್ ವ್ಯಾಪ್ತಿಯಲ್ಲಿ ಬಾಲ್ಯ ವಿವಾಹವನ್ನು ಕಟ್ಟುನಿಟ್ಟಾಗಿ ತಡೆಗಟ್ಟಲು ಸೂಕ್ತ ಕ್ರಮವನ್ನು ವಹಿಸಲು ನಿರ್ಣಯಿಸಲಾಯಿತು.

ಕಾರ್ಯದರ್ಶಿ ಕುಂಞ ಕೆ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಭಜನಾ ಮಂಗಲೋತ್ಸವ ಹಾಗೂ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಕಡಿರುದ್ಯಾವರದಲ್ಲಿ ಒಂಟಿ ಸಲಗದ ಹಾವಳಿ: ಅಪಾರ ಅಡಿಕೆ ಗಿಡ, ಬಾಳೆ ಗಿಡಗಳಿಗೆ ಹಾನಿ

Suddi Udaya

ಆದಿವಾಸಿ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ರವರಿಗೆ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕಶೇಖರ್ ಲಾಯಿಲ ಅವರಿಂದಮನವಿ

Suddi Udaya

ಅಗ್ರಿಲೀಫ್ ಸಂಸ್ಥೆಯಲ್ಲಿ ಅಪರಾಧ ತಡೆ ಮತ್ತು ಮಾದಕ ದ್ರವ್ಯಗಳ ವ್ಯಸನದ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ: ಅಲ್-ಅಮೀನ್ ಯಂಗ್-ಮೆನ್ಸ್ ಹಳೆಪೇಟೆ ಇದರ ವತಿಯಿಂದ ಸುನ್ನತ್ (ಮುಂಜಿ) ಕಾರ್ಯಕ್ರಮ

Suddi Udaya

ವೇಣೂರು: ಕರಿಮಣೇಲು ದಡ್ಡು ಫಾರ್ಮ್ಸನ ಬಾಲಕೃಷ್ಣ ಭಟ್ ನಿಧನ

Suddi Udaya
error: Content is protected !!