September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಳೆಂಜ: ಮಳೆ ನೀರಿನಿಂದ ಹರಡುವ ರೋಗಗಳ ಬಗ್ಗೆ ಮಾಹಿತಿ

ಕಳೆಂಜ: ದಕ್ಷಿಣ ಕನ್ನಡ ರೂರಲ್ ಡೆವಲಪ್ಮೆಂಟ್ ಸೊಸೈಟಿ (ರಿ) ಬೆಳ್ತಂಗಡಿ (ಡಿ.ಕೆ.ಆರ್.ಡಿ.ಎಸ್) ಮಹಿಳಾ ಸಬಲೀಕರಣ ಯೋಜನೆಯ ಅಂಗವಾಗಿ ಕಳೆಂಜದ ಸರ್ವಶ್ರೀ ಮಹಾ ಸಂಘದ ಸದಸ್ಯರಿಗೆ ಮಳೆ ನೀರಿನಿಂದ ಹರಡುವ ವಿವಿಧ ಖಾಯಿಲೆಗಳ ಬಗ್ಗೆ ಮಾಹಿತಿ ಕಾರ್ಯಗಾರವು ಜು. 18 ರಂದು ಕಾಯರ್ತಡ್ಕ ಸೈಂಟ್ ಸೆಬಾಸ್ಟಿಯನ್ ಚರ್ಚ್ ಸಭಾಭವನದಲ್ಲಿ ನಡೆಯಿತು.

ಕಾಯರ್ತಡ್ಕ ವಲಯದ ಆಶಾ ಕಾರ್ಯಕರ್ತೆಯಾದ ಶ್ರೀಮತಿ ದೇವಕಿರವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಡೆಂಗ್ಯೂ ಜ್ವರ, ಮಲೇರಿಯಾ, ಇಲಿ ಜ್ವರ, ಚಿಕುನ್ ಗುನ್ಯಾ ಮುಂತಾದ ರೋಗಗಳ ಬಗ್ಗೆ ಮಾಹಿತಿ ನೀಡಿದರು. ಸರ್ವಶ್ರೀ ಮಹಾ ಸಂಘದ ಸದಸ್ಯರಾದ ಶ್ರೀಮತಿ ತ್ರೇಸಿಯಾರವರು ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ್ದರು. ಸೌಭಾಗ್ಯ ಸಂಘದ ಸದಸ್ಯೆ ಶ್ರೀಮತಿ ಸಿಲ್ವಿ ಎ.ಟಿ ಸ್ವಾಗತಿಸಿ, ಸ್ನೇಹ ಸಂಘದ ಸದಸ್ಯೆ ಶ್ರೀಮತಿ ಶಾಲಿರವರು ಧನ್ಯವಾದವಿತ್ತರು. ಕಾರ್ಯಕರ್ತರಾದ ಮಾರ್ಕ್ ಡಿ ಸೋಜಾರವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಒಟ್ಟು 25 ಮಂದಿ ಉಪಸ್ಥಿತರಿದ್ದರು.

Related posts

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಜಿಲ್ಲಾವಾರು ಉತ್ತಮ ಸಂಘ ಪ್ರಶಸ್ತಿ ಪ್ರಧಾನ

Suddi Udaya

ಶ್ರಮದಾನದ ಮೂಲಕ ಐತನಡ್ಕ ಸೇತುವೆ ಪರಿಸರ ಸ್ವಚ್ಛಗೊಳಿಸಿದ ಗ್ರಾಮಸ್ಥರು-ಪೊದೆಗಳಿಂದ ಸಂಚಾರಕ್ಕೆ ಉಂಟಾಗಿದ್ದ ತೊಂದರೆ ನಿವಾರಣೆ-ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ಗುರುವಾಯನಕೆರೆ: ಪಣೆಜಾಲಿನ ನಿವಾಸಿ ಪ್ರವೀಣ್ ಪ್ರಭು ನಿಧನ

Suddi Udaya

ಸೋಣoದೂರು: ಗಾಣದಕೊಟ್ಯ ನಿವಾಸಿ ಅಪ್ಪಿ ನಿಧನ

Suddi Udaya

ಪದ್ಮುಂಜ ಸ.ಪ್ರೌ. ಶಾಲೆಯಲ್ಲಿ ಸಮಾಜ ವಿಜ್ಞಾನ ವಿಷಯ ವೇದಿಕೆಯ ಸಮಾಲೋಚನಾ ಸಭೆ

Suddi Udaya

ಮೆಲ್ಕಾರು ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಇದರ ಕೇಂದ್ರೀಯ ಸಮಿತಿಯ ಸಭೆ

Suddi Udaya
error: Content is protected !!