July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಲವಂತಿಗೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

ಮಲವಂತಿಗೆ : ಮಲವಂತಿಗೆ ಗ್ರಾಮ ಪಂಚಾಯತಿನ 2023-24 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಜು.19 ರಂದು ಮಲವಂತಿಗೆ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯಿತು.

ಅಕ್ಷರದಾಸೋಹ ಸಹಾಯಕ ನಿರ್ದೇಶಕಿ ತಾರಾಕೇಶ್ವರಿ ಮಾರ್ಗದರ್ಶಿ ಅಧಿಕಾರಿಯಾಗಿದ್ದರು.

ಅಧ್ಯಕ್ಷತೆಯನ್ನು ಗ್ರಾ.ಪಂ. ಅಧ್ಯಕ್ಷತೆ ಅನಿತಾ ಕೆ ವಹಿಸಿದ್ದರು.

ಪಂಚಾಯತು ಅಭಿವೃದ್ಧಿ ಅಧಿಕಾರಿ ರಶ್ಮಿ ಬಿ.ಪಿ ಸ್ವಾಗತ, ವರದಿ ಲೆಕ್ಕಪತ್ರ ಮಂಡಿಸಿದರು.

ಪ್ರಾರಂಭದಲ್ಲಿ ಮಲವಂತಿಗೆ ಗ್ರಾಮದ ಮಂಟಮೆ ಬಾಲಕೃಷ್ಣರವರು 8ನೇ ತರಗತಿ ವಿದ್ಯಾರ್ಥಿ ಮನೆಯಲ್ಲಿ ಆಟವಾಡುತ್ತಿದ್ದ ಸಂದರ್ಭ ಉಯ್ಯಾಲೆಯ ಹಗ್ಗ ಕುತ್ತಿಗೆ ಸಿಲುಕಿ ಸಾವನ್ನಪ್ಪಿದ ಶ್ರೀಶ ಇವರ ಆತ್ಮಶಾಂತಿಗಾಗಿ ಒಂದು ನಿಮಿಷ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.

ಮೆಸ್ಕಾಂ, ಕಂದಾಯ, ಮಹಿಳಾ ಮತ್ತು ಕಲ್ಯಾಣ ಇಲಾಖೆ, ಕೃಷಿ, ಆರೋಗ್ಯ, ಅರಣ್ಯ ಇಲಾಖೆ, ಪ್ರಾದೇಶಿಕ ಅರಣ್ಯ ಇಲಾಖೆ ಇವರು ತಮ್ಮ ತಮ್ಮ ಇಲಾಖಾ ಮಾಹಿತಿ ನೀಡಿದರು.

ಚರ್ಚಿತ ವಿಷಯಗಳು: ರಸ್ತೆ ದುರಸ್ತಿ, ದಾರಿದೀಪ ನಿರ್ವಹಣೆ, ಕಾಡು ಪ್ರಾಣಿಗಳಿಂದ ಬೆಳೆನಾಶ, ನವಿಲು, ಕೋತಿಗಳ ಉಪಟಲ, ಆರೋಗ್ಯ ಕೇಂದ್ರ, ಅಂಗನವಾಡಿ, ಪ್ರವಾಸಿಗರಿಂದ ಪರಿಸರ ಮಾಲಿನ್ಯ ವಿಷಯಗಳು ಪ್ರತಿಧ್ವನಿಸಿದವು.

ಉಪಾಧ್ಯಕ್ಷ ದಿನೇಶ್ ಗೌಡ, ಪಂಚಾಯತು ಸದಸ್ಯರು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಭ್ರಮದ ಕೋರಿಜಾತ್ರೆ

Suddi Udaya

ನಾರಾವಿ ತುಳು ಶಿವಳ್ಳಿ ವಲಯದ ಆಟಿಡೊಂಜಿ ದಿನ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್, ಪದವಿ ಪೂರ್ವ ಹಾಗೂ ಪ್ರೌಢಶಾಲಾ ವಿಭಾಗದ ಜಂಟಿ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ವರ್ತಕರ ಸಂಘದ ವತಿಯಿಂದ ಹೂವಿನ ವ್ಯಾಪಾರಿ ಶಿವರಾಮ್ ರವರಿಗೆ ಆರ್ಥಿಕ ಸಹಾಯ

Suddi Udaya

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಸಮಾಲೋಚನೆ ಸಭೆ

Suddi Udaya

ಕಂಬಳ ಸ್ಪರ್ಧೆಗೆ ಸುಪ್ರೀಂಕೋರ್ಟ್ ಅನುಮತಿ

Suddi Udaya
error: Content is protected !!