22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ ಗ್ರಾ.ಪಂ.ನಲ್ಲಿ ಕಾವಲು ಸಮಿತಿ ಸಭೆ

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಕಾವಲು ಸಮಿತಿಯ ಸಭೆ ಅಧ್ಯಕ್ಷೆ ಶ್ರೀಮತಿ ಸುಭಾಷಿಣಿ ಕೆ.ರವರ ಅಧ್ಯಕ್ಷತೆಯಲ್ಲಿ ಜರಗಿತು.

ಗ್ರಾಮ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರು, ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಸರ್ಕಾರಿ ಶಾಲೆಗಳ ಮುಖ್ಯಸ್ಥರು, ಕಳಿಯ ಆರೋಗ್ಯ ಸಹಾಯಕರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತರು, ಸಿಬ್ಬಂದಿಗಳು ಭಾಗವಹಿಸಿದ್ದರು.

ಸಭೆಯಲ್ಲಿ ಗಾಂಜಾ ಮಾದಕ ಪದಾರ್ಥ ಸೇವನೆಯ ಬಗ್ಗೆ ಜಾಗೃತಿ ಮೂಡಿಸಲು ಚರ್ಚಿಸಲಾಯಿತು. ಆರೋಗ್ಯ ಇಲಾಖೆಯ ಡಾ .ನಾಗರಾಜ್ ಮಳೆಗಾಲದಲ್ಲಿ ಡೆಂಗ್ಯೂ, ಮಲೇರಿಯಾ ಮುಂತಾದ ರೋಗ ಹರಡದಂತೆ ಮನೆಯ ಸುತ್ತಮುತ್ತ ಸ್ವಚ್ಛತೆಯನ್ನು ಕಾಪಾಡಲು ಸಾರ್ವಜನಿಕರಿಗೆ ಮಾಹಿತಿ ನೀಡುವಂತೆ ತಿಳಿಸಿ ಆರೋಗ್ಯ ಇಲಾಖೆಯ ಕರಪತ್ರ ಹಂಚಿದರು. ಪಂಚಾಯತ್ ವ್ಯಾಪ್ತಿಯಲ್ಲಿ ಬಾಲ್ಯ ವಿವಾಹವನ್ನು ಕಟ್ಟುನಿಟ್ಟಾಗಿ ತಡೆಗಟ್ಟಲು ಸೂಕ್ತ ಕ್ರಮವನ್ನು ವಹಿಸಲು ನಿರ್ಣಯಿಸಲಾಯಿತು.

ಕಾರ್ಯದರ್ಶಿ ಕುಂಞ ಕೆ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಅಳದಂಗಡಿ ಶ್ರೀ‌ ಸತ್ಯಸಾರಮುಪ್ಪಣ್ಯ ದೈವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ

Suddi Udaya

ಉಜಿರೆ: ಶ್ರೀ ಧ. ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನಿಂದ ರೂ.2 ಲಕ್ಷ ದೇಣಿಗೆ

Suddi Udaya

ಸುಲ್ಕೇರಿ: ಎಸ್.ಡಿ.ಎಂ ಸ್ನಾತಕೋತ್ತರ ಪದವಿ ಕೇಂದ್ರ ಮತ್ತು ಗ್ರಾ.ಪಂ ವತಿಯಿಂದ ಗ್ರಾಮ‌ ಸಮೀಕ್ಷೆ ಕಾರ್ಯಕ್ರಮ

Suddi Udaya

ಸವಣಾಲು ಅ. ಹಿ.ಪ್ರಾ. ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಮಾಗಮ ಮತ್ತು ಪ್ರತಿಭಾ ಪುರಸ್ಕಾರ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯ ವಿದ್ಯಾರ್ಥಿ ಅಮಿತ್ ಪ್ರಥಮ ಸ್ಥಾನ

Suddi Udaya
error: Content is protected !!