April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಳೆಂಜ: ಮಳೆ ನೀರಿನಿಂದ ಹರಡುವ ರೋಗಗಳ ಬಗ್ಗೆ ಮಾಹಿತಿ

ಕಳೆಂಜ: ದಕ್ಷಿಣ ಕನ್ನಡ ರೂರಲ್ ಡೆವಲಪ್ಮೆಂಟ್ ಸೊಸೈಟಿ (ರಿ) ಬೆಳ್ತಂಗಡಿ (ಡಿ.ಕೆ.ಆರ್.ಡಿ.ಎಸ್) ಮಹಿಳಾ ಸಬಲೀಕರಣ ಯೋಜನೆಯ ಅಂಗವಾಗಿ ಕಳೆಂಜದ ಸರ್ವಶ್ರೀ ಮಹಾ ಸಂಘದ ಸದಸ್ಯರಿಗೆ ಮಳೆ ನೀರಿನಿಂದ ಹರಡುವ ವಿವಿಧ ಖಾಯಿಲೆಗಳ ಬಗ್ಗೆ ಮಾಹಿತಿ ಕಾರ್ಯಗಾರವು ಜು. 18 ರಂದು ಕಾಯರ್ತಡ್ಕ ಸೈಂಟ್ ಸೆಬಾಸ್ಟಿಯನ್ ಚರ್ಚ್ ಸಭಾಭವನದಲ್ಲಿ ನಡೆಯಿತು.

ಕಾಯರ್ತಡ್ಕ ವಲಯದ ಆಶಾ ಕಾರ್ಯಕರ್ತೆಯಾದ ಶ್ರೀಮತಿ ದೇವಕಿರವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಡೆಂಗ್ಯೂ ಜ್ವರ, ಮಲೇರಿಯಾ, ಇಲಿ ಜ್ವರ, ಚಿಕುನ್ ಗುನ್ಯಾ ಮುಂತಾದ ರೋಗಗಳ ಬಗ್ಗೆ ಮಾಹಿತಿ ನೀಡಿದರು. ಸರ್ವಶ್ರೀ ಮಹಾ ಸಂಘದ ಸದಸ್ಯರಾದ ಶ್ರೀಮತಿ ತ್ರೇಸಿಯಾರವರು ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ್ದರು. ಸೌಭಾಗ್ಯ ಸಂಘದ ಸದಸ್ಯೆ ಶ್ರೀಮತಿ ಸಿಲ್ವಿ ಎ.ಟಿ ಸ್ವಾಗತಿಸಿ, ಸ್ನೇಹ ಸಂಘದ ಸದಸ್ಯೆ ಶ್ರೀಮತಿ ಶಾಲಿರವರು ಧನ್ಯವಾದವಿತ್ತರು. ಕಾರ್ಯಕರ್ತರಾದ ಮಾರ್ಕ್ ಡಿ ಸೋಜಾರವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಒಟ್ಟು 25 ಮಂದಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ದಿ| ದೇವಪ್ಪ ಗೌಡ ಉಜಿರೆ ರವರಿಗೆ ಶ್ರದ್ಧಾಂಜಲಿ

Suddi Udaya

ಪದ್ಮುಂಜ ಮುಗೇರಡಿ ನಿವಾಸಿ ಸುಶೀಲ ಶೆಟ್ಟಿ ನಿಧನ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿಗೆ ಶೇ. 98.8 ಫಲಿತಾಂಶ

Suddi Udaya

ತಣ್ಣೀರುಪಂತ: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಪ್ರತಿಷ್ಠಾ ದಿನ ಹಾಗೂ ವಾರ್ಷಿಕ ಜಾತ್ರೋತ್ಸವ

Suddi Udaya

ವೇಣೂರಿನಲ್ಲಿ ಪ್ರಥಮ ದರ್ಜೆ ಕಾಲೇಜನ್ನು ಆರಂಭಿಸಲು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಶಾಸಕ ಹರೀಶ್ ಪೂಂಜ

Suddi Udaya

ಮಚ್ಚಿನ: ಕುಕ್ಕಿಲದಲ್ಲಿ ಗುಡ್ಡ ಕುಸಿದು ಮನೆ ಹಾಗೂ ಹಟ್ಟಿಗೆ ಸಂಪೂರ್ಣ ಹಾನಿ

Suddi Udaya
error: Content is protected !!