23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಳೆಂಜ: ಮಳೆ ನೀರಿನಿಂದ ಹರಡುವ ರೋಗಗಳ ಬಗ್ಗೆ ಮಾಹಿತಿ

ಕಳೆಂಜ: ದಕ್ಷಿಣ ಕನ್ನಡ ರೂರಲ್ ಡೆವಲಪ್ಮೆಂಟ್ ಸೊಸೈಟಿ (ರಿ) ಬೆಳ್ತಂಗಡಿ (ಡಿ.ಕೆ.ಆರ್.ಡಿ.ಎಸ್) ಮಹಿಳಾ ಸಬಲೀಕರಣ ಯೋಜನೆಯ ಅಂಗವಾಗಿ ಕಳೆಂಜದ ಸರ್ವಶ್ರೀ ಮಹಾ ಸಂಘದ ಸದಸ್ಯರಿಗೆ ಮಳೆ ನೀರಿನಿಂದ ಹರಡುವ ವಿವಿಧ ಖಾಯಿಲೆಗಳ ಬಗ್ಗೆ ಮಾಹಿತಿ ಕಾರ್ಯಗಾರವು ಜು. 18 ರಂದು ಕಾಯರ್ತಡ್ಕ ಸೈಂಟ್ ಸೆಬಾಸ್ಟಿಯನ್ ಚರ್ಚ್ ಸಭಾಭವನದಲ್ಲಿ ನಡೆಯಿತು.

ಕಾಯರ್ತಡ್ಕ ವಲಯದ ಆಶಾ ಕಾರ್ಯಕರ್ತೆಯಾದ ಶ್ರೀಮತಿ ದೇವಕಿರವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಡೆಂಗ್ಯೂ ಜ್ವರ, ಮಲೇರಿಯಾ, ಇಲಿ ಜ್ವರ, ಚಿಕುನ್ ಗುನ್ಯಾ ಮುಂತಾದ ರೋಗಗಳ ಬಗ್ಗೆ ಮಾಹಿತಿ ನೀಡಿದರು. ಸರ್ವಶ್ರೀ ಮಹಾ ಸಂಘದ ಸದಸ್ಯರಾದ ಶ್ರೀಮತಿ ತ್ರೇಸಿಯಾರವರು ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ್ದರು. ಸೌಭಾಗ್ಯ ಸಂಘದ ಸದಸ್ಯೆ ಶ್ರೀಮತಿ ಸಿಲ್ವಿ ಎ.ಟಿ ಸ್ವಾಗತಿಸಿ, ಸ್ನೇಹ ಸಂಘದ ಸದಸ್ಯೆ ಶ್ರೀಮತಿ ಶಾಲಿರವರು ಧನ್ಯವಾದವಿತ್ತರು. ಕಾರ್ಯಕರ್ತರಾದ ಮಾರ್ಕ್ ಡಿ ಸೋಜಾರವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಒಟ್ಟು 25 ಮಂದಿ ಉಪಸ್ಥಿತರಿದ್ದರು.

Related posts

ನಾಪತ್ತೆಯಾಗಿದ್ದ ಬೆಳಾಲಿನ ಯುವಕ ಬಲಿಪೆ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆ

Suddi Udaya

ಉಜಿರೆ ಶುಭ ಜ್ಯುವೆಲ್ಲರ್ಸ್ & ವರ್ಕ್ಸ್ ನಲ್ಲಿ “ಶುಭ-ಗೋಲ್ಡ್” ಸ್ಕೀಮ್ ಪ್ರಾರಂಭ: ಸಂಸ್ಥೆಯ ನೂತನ ರಾಯಭಾರಿ ಚಲನಚಿತ್ರ ನಟಿ ಸಿಂಚನ ಪಿ ರಾವ್ ರಿಂದ ಪೋಸ್ಟರ್ ಅನಾವರಣ

Suddi Udaya

ಬಟ್ಲಡ್ಕ ಜುಮಾ ಮಸೀದಿ ಉರೂಸ್ ಕಾರ್ಯಕ್ರಮದ 2ನೇ ದಿನ

Suddi Udaya

ಕಳಿಯ : ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಪೂರ್ವಭಾವಿ ಸಭೆ ಹಾಗೂ ಸಮಿತಿ ರಚನೆ

Suddi Udaya

ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ವಿಶೇಷ ಸಭೆ

Suddi Udaya

ಮಾಲಾಡಿಯಲ್ಲಿ ಮನೆ ಕಳ್ಳತಕ್ಕೆ ಹೊಂಚು ಹಾಕುತ್ತಿದ್ದ ಕುಖ್ಯಾತ ಕಳ್ಳನ ಸೆರೆ

Suddi Udaya
error: Content is protected !!