22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಳೆಂಜ: ಮಳೆ ನೀರಿನಿಂದ ಹರಡುವ ರೋಗಗಳ ಬಗ್ಗೆ ಮಾಹಿತಿ

ಕಳೆಂಜ: ದಕ್ಷಿಣ ಕನ್ನಡ ರೂರಲ್ ಡೆವಲಪ್ಮೆಂಟ್ ಸೊಸೈಟಿ (ರಿ) ಬೆಳ್ತಂಗಡಿ (ಡಿ.ಕೆ.ಆರ್.ಡಿ.ಎಸ್) ಮಹಿಳಾ ಸಬಲೀಕರಣ ಯೋಜನೆಯ ಅಂಗವಾಗಿ ಕಳೆಂಜದ ಸರ್ವಶ್ರೀ ಮಹಾ ಸಂಘದ ಸದಸ್ಯರಿಗೆ ಮಳೆ ನೀರಿನಿಂದ ಹರಡುವ ವಿವಿಧ ಖಾಯಿಲೆಗಳ ಬಗ್ಗೆ ಮಾಹಿತಿ ಕಾರ್ಯಗಾರವು ಜು. 18 ರಂದು ಕಾಯರ್ತಡ್ಕ ಸೈಂಟ್ ಸೆಬಾಸ್ಟಿಯನ್ ಚರ್ಚ್ ಸಭಾಭವನದಲ್ಲಿ ನಡೆಯಿತು.

ಕಾಯರ್ತಡ್ಕ ವಲಯದ ಆಶಾ ಕಾರ್ಯಕರ್ತೆಯಾದ ಶ್ರೀಮತಿ ದೇವಕಿರವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಡೆಂಗ್ಯೂ ಜ್ವರ, ಮಲೇರಿಯಾ, ಇಲಿ ಜ್ವರ, ಚಿಕುನ್ ಗುನ್ಯಾ ಮುಂತಾದ ರೋಗಗಳ ಬಗ್ಗೆ ಮಾಹಿತಿ ನೀಡಿದರು. ಸರ್ವಶ್ರೀ ಮಹಾ ಸಂಘದ ಸದಸ್ಯರಾದ ಶ್ರೀಮತಿ ತ್ರೇಸಿಯಾರವರು ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ್ದರು. ಸೌಭಾಗ್ಯ ಸಂಘದ ಸದಸ್ಯೆ ಶ್ರೀಮತಿ ಸಿಲ್ವಿ ಎ.ಟಿ ಸ್ವಾಗತಿಸಿ, ಸ್ನೇಹ ಸಂಘದ ಸದಸ್ಯೆ ಶ್ರೀಮತಿ ಶಾಲಿರವರು ಧನ್ಯವಾದವಿತ್ತರು. ಕಾರ್ಯಕರ್ತರಾದ ಮಾರ್ಕ್ ಡಿ ಸೋಜಾರವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಒಟ್ಟು 25 ಮಂದಿ ಉಪಸ್ಥಿತರಿದ್ದರು.

Related posts

ಶಿಶಿಲ ಸ.ಹಿ.ಪ್ರಾ. ಶಾಲಾ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ವತಿಯಿಂದ ರೂ.1.50ಲಕ್ಷ ಸಹಾಯಧನ

Suddi Udaya

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲೆಗೆ ಹಿದಾಯತುಲ್ಲಾ ಗೇರುಕಟ್ಟೆ ರವರಿಂದ ಮಿಕ್ಸರ್ ಗ್ರೈಂಡರ್ ಕೊಡುಗೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ಶಂಕರ್ ರಾವ್ ಜೆಸಿ ಭಾರತದ ರಾಷ್ಟ್ರೀಯ ಸಂಯೋಜಕರಾಗಿ ಆಯ್ಕೆ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಸಾಮಾಜಿಕ ಭದ್ರತಾ ಯೋಜನೆಗಳ ಸಂಪೂರ್ಣತಾ ಅಭಿಯಾನ ಕಾರ್ಯಕ್ರಮ

Suddi Udaya

ಬಂದಾರು : ಮುರ್ತಾಜೆ ಯಲ್ಲಿ ಕಾಂಕ್ರೀಟ್ ರಸ್ತೆ ಹಾಗೂ ಸೋಲಾರ್ ಲೈಟ್ ಉದ್ಘಾಟನೆ

Suddi Udaya

ಶಿವಕುಮಾರ್ ಕೆ.ಎಸ್. ರವರು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಯಾಗಿ ಭಡ್ತಿಗೊಂಡು ಮಂಗಳೂರಿಗೆ ವರ್ಗಾವಣೆ, ಬಿಳ್ಕೋಡುಗೆ ಸಮಾರಂಭ

Suddi Udaya
error: Content is protected !!