23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಲವಂತಿಗೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

ಮಲವಂತಿಗೆ : ಮಲವಂತಿಗೆ ಗ್ರಾಮ ಪಂಚಾಯತಿನ 2023-24 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಜು.19 ರಂದು ಮಲವಂತಿಗೆ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯಿತು.

ಅಕ್ಷರದಾಸೋಹ ಸಹಾಯಕ ನಿರ್ದೇಶಕಿ ತಾರಾಕೇಶ್ವರಿ ಮಾರ್ಗದರ್ಶಿ ಅಧಿಕಾರಿಯಾಗಿದ್ದರು.

ಅಧ್ಯಕ್ಷತೆಯನ್ನು ಗ್ರಾ.ಪಂ. ಅಧ್ಯಕ್ಷತೆ ಅನಿತಾ ಕೆ ವಹಿಸಿದ್ದರು.

ಪಂಚಾಯತು ಅಭಿವೃದ್ಧಿ ಅಧಿಕಾರಿ ರಶ್ಮಿ ಬಿ.ಪಿ ಸ್ವಾಗತ, ವರದಿ ಲೆಕ್ಕಪತ್ರ ಮಂಡಿಸಿದರು.

ಪ್ರಾರಂಭದಲ್ಲಿ ಮಲವಂತಿಗೆ ಗ್ರಾಮದ ಮಂಟಮೆ ಬಾಲಕೃಷ್ಣರವರು 8ನೇ ತರಗತಿ ವಿದ್ಯಾರ್ಥಿ ಮನೆಯಲ್ಲಿ ಆಟವಾಡುತ್ತಿದ್ದ ಸಂದರ್ಭ ಉಯ್ಯಾಲೆಯ ಹಗ್ಗ ಕುತ್ತಿಗೆ ಸಿಲುಕಿ ಸಾವನ್ನಪ್ಪಿದ ಶ್ರೀಶ ಇವರ ಆತ್ಮಶಾಂತಿಗಾಗಿ ಒಂದು ನಿಮಿಷ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.

ಮೆಸ್ಕಾಂ, ಕಂದಾಯ, ಮಹಿಳಾ ಮತ್ತು ಕಲ್ಯಾಣ ಇಲಾಖೆ, ಕೃಷಿ, ಆರೋಗ್ಯ, ಅರಣ್ಯ ಇಲಾಖೆ, ಪ್ರಾದೇಶಿಕ ಅರಣ್ಯ ಇಲಾಖೆ ಇವರು ತಮ್ಮ ತಮ್ಮ ಇಲಾಖಾ ಮಾಹಿತಿ ನೀಡಿದರು.

ಚರ್ಚಿತ ವಿಷಯಗಳು: ರಸ್ತೆ ದುರಸ್ತಿ, ದಾರಿದೀಪ ನಿರ್ವಹಣೆ, ಕಾಡು ಪ್ರಾಣಿಗಳಿಂದ ಬೆಳೆನಾಶ, ನವಿಲು, ಕೋತಿಗಳ ಉಪಟಲ, ಆರೋಗ್ಯ ಕೇಂದ್ರ, ಅಂಗನವಾಡಿ, ಪ್ರವಾಸಿಗರಿಂದ ಪರಿಸರ ಮಾಲಿನ್ಯ ವಿಷಯಗಳು ಪ್ರತಿಧ್ವನಿಸಿದವು.

ಉಪಾಧ್ಯಕ್ಷ ದಿನೇಶ್ ಗೌಡ, ಪಂಚಾಯತು ಸದಸ್ಯರು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಉಜಿರೆ ಹಳೆಪೇಟೆ ಶಾಲೆಯಲ್ಲಿ ಎಸ್‌ಡಿಎಂ ಆಸ್ಪತ್ರೆ ವತಿಯಿಂದ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಹಿಂದೂ ಜನಜಾಗೃತಿ ಸಮಿತಿಯಿಂದ ಹಿಂದೂ ರಾಷ್ಟ್ರ ಸ್ಥಾಪನೆಗೆ ಕರೆ

Suddi Udaya

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ : ಇಬ್ಬರು ವಿದ್ಯಾರ್ಥಿಗಳು Quest Global ಸಂಸ್ಥೆಯ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya

ಮಚ್ಚಿನ: ಅಂಗನವಾಡಿ ಶಾಲಾ ಮಕ್ಕಳಿಗೆ ಭಜನೆ ಪುಸ್ತಕ ವಿತರಣೆ

Suddi Udaya

ನಾಲ್ಕೂರು: ಪೆರ್ಮುಡ- ಅಟ್ಟೆಮಾರು ರಸ್ತೆ ಕಾಂಕ್ರೀಟಿಕರಣ: ರಸ್ತೆ ಅಭಿವೃದ್ಧಿಯಿಂದ ಸಾರ್ವಜನಿಕರಿಗೆ ಅನುಕೂಲ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಕಾರ್ಯಾಲಯ ಹಾಗೂ ಭಜನೋತ್ಸವ ಸಮಿತಿಯ ಸಮಾಲೋಚನಾ ಸಭೆ

Suddi Udaya
error: Content is protected !!