25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಲವಂತಿಗೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

ಮಲವಂತಿಗೆ : ಮಲವಂತಿಗೆ ಗ್ರಾಮ ಪಂಚಾಯತಿನ 2023-24 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಜು.19 ರಂದು ಮಲವಂತಿಗೆ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯಿತು.

ಅಕ್ಷರದಾಸೋಹ ಸಹಾಯಕ ನಿರ್ದೇಶಕಿ ತಾರಾಕೇಶ್ವರಿ ಮಾರ್ಗದರ್ಶಿ ಅಧಿಕಾರಿಯಾಗಿದ್ದರು.

ಅಧ್ಯಕ್ಷತೆಯನ್ನು ಗ್ರಾ.ಪಂ. ಅಧ್ಯಕ್ಷತೆ ಅನಿತಾ ಕೆ ವಹಿಸಿದ್ದರು.

ಪಂಚಾಯತು ಅಭಿವೃದ್ಧಿ ಅಧಿಕಾರಿ ರಶ್ಮಿ ಬಿ.ಪಿ ಸ್ವಾಗತ, ವರದಿ ಲೆಕ್ಕಪತ್ರ ಮಂಡಿಸಿದರು.

ಪ್ರಾರಂಭದಲ್ಲಿ ಮಲವಂತಿಗೆ ಗ್ರಾಮದ ಮಂಟಮೆ ಬಾಲಕೃಷ್ಣರವರು 8ನೇ ತರಗತಿ ವಿದ್ಯಾರ್ಥಿ ಮನೆಯಲ್ಲಿ ಆಟವಾಡುತ್ತಿದ್ದ ಸಂದರ್ಭ ಉಯ್ಯಾಲೆಯ ಹಗ್ಗ ಕುತ್ತಿಗೆ ಸಿಲುಕಿ ಸಾವನ್ನಪ್ಪಿದ ಶ್ರೀಶ ಇವರ ಆತ್ಮಶಾಂತಿಗಾಗಿ ಒಂದು ನಿಮಿಷ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.

ಮೆಸ್ಕಾಂ, ಕಂದಾಯ, ಮಹಿಳಾ ಮತ್ತು ಕಲ್ಯಾಣ ಇಲಾಖೆ, ಕೃಷಿ, ಆರೋಗ್ಯ, ಅರಣ್ಯ ಇಲಾಖೆ, ಪ್ರಾದೇಶಿಕ ಅರಣ್ಯ ಇಲಾಖೆ ಇವರು ತಮ್ಮ ತಮ್ಮ ಇಲಾಖಾ ಮಾಹಿತಿ ನೀಡಿದರು.

ಚರ್ಚಿತ ವಿಷಯಗಳು: ರಸ್ತೆ ದುರಸ್ತಿ, ದಾರಿದೀಪ ನಿರ್ವಹಣೆ, ಕಾಡು ಪ್ರಾಣಿಗಳಿಂದ ಬೆಳೆನಾಶ, ನವಿಲು, ಕೋತಿಗಳ ಉಪಟಲ, ಆರೋಗ್ಯ ಕೇಂದ್ರ, ಅಂಗನವಾಡಿ, ಪ್ರವಾಸಿಗರಿಂದ ಪರಿಸರ ಮಾಲಿನ್ಯ ವಿಷಯಗಳು ಪ್ರತಿಧ್ವನಿಸಿದವು.

ಉಪಾಧ್ಯಕ್ಷ ದಿನೇಶ್ ಗೌಡ, ಪಂಚಾಯತು ಸದಸ್ಯರು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಕಾಲೇಜಿನ ಸಹಪ್ರಾಧ್ಯಾಪಕ ಈಶ್ವರ ಗೌಡ ಪಿ. ಅವರಿಗೆ ಪಿ. ಎಚ್.ಡಿ ಪದವಿ ಪ್ರದಾನ

Suddi Udaya

ಉರುವಾಲು ಮಹಮ್ಮಾಯಿ ಭೈರವ ಗುಡಿಯ ಶಿಲಾನ್ಯಾಸ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಚಾರ್ಮಾಡಿ: ಸಂಚರಿಸುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ ಸಂಪೂರ್ಣ ಸುಟ್ಟು ಹೋದ ಮೆಕ್ಕೆಜೋಳದ ಲಾರಿ

Suddi Udaya

ಕೊಯ್ಯೂರು ಶ್ರೀ ಪಂಚದುರ್ಗ ಪರಮೇಶ್ವರಿ ಯಕ್ಷಗಾನ ಸಂಘ ಹಾಗೂ ದಿ. ಹೊನ್ನಪ್ಪ ಗೌಡರ ಅಭಿಮಾನಿ ಬಳಗದಿಂದ ಯಕ್ಷಗಾನ ತಾಳಮದ್ದಳೆ ಮತ್ತು ನುಡಿ ನಮನ ಕಾರ್ಯಕ್ರಮ

Suddi Udaya
error: Content is protected !!