ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಲವಂತಿಗೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

ಮಲವಂತಿಗೆ : ಮಲವಂತಿಗೆ ಗ್ರಾಮ ಪಂಚಾಯತಿನ 2023-24 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಜು.19 ರಂದು ಮಲವಂತಿಗೆ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯಿತು.

ಅಕ್ಷರದಾಸೋಹ ಸಹಾಯಕ ನಿರ್ದೇಶಕಿ ತಾರಾಕೇಶ್ವರಿ ಮಾರ್ಗದರ್ಶಿ ಅಧಿಕಾರಿಯಾಗಿದ್ದರು.

ಅಧ್ಯಕ್ಷತೆಯನ್ನು ಗ್ರಾ.ಪಂ. ಅಧ್ಯಕ್ಷತೆ ಅನಿತಾ ಕೆ ವಹಿಸಿದ್ದರು.

ಪಂಚಾಯತು ಅಭಿವೃದ್ಧಿ ಅಧಿಕಾರಿ ರಶ್ಮಿ ಬಿ.ಪಿ ಸ್ವಾಗತ, ವರದಿ ಲೆಕ್ಕಪತ್ರ ಮಂಡಿಸಿದರು.

ಪ್ರಾರಂಭದಲ್ಲಿ ಮಲವಂತಿಗೆ ಗ್ರಾಮದ ಮಂಟಮೆ ಬಾಲಕೃಷ್ಣರವರು 8ನೇ ತರಗತಿ ವಿದ್ಯಾರ್ಥಿ ಮನೆಯಲ್ಲಿ ಆಟವಾಡುತ್ತಿದ್ದ ಸಂದರ್ಭ ಉಯ್ಯಾಲೆಯ ಹಗ್ಗ ಕುತ್ತಿಗೆ ಸಿಲುಕಿ ಸಾವನ್ನಪ್ಪಿದ ಶ್ರೀಶ ಇವರ ಆತ್ಮಶಾಂತಿಗಾಗಿ ಒಂದು ನಿಮಿಷ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.

ಮೆಸ್ಕಾಂ, ಕಂದಾಯ, ಮಹಿಳಾ ಮತ್ತು ಕಲ್ಯಾಣ ಇಲಾಖೆ, ಕೃಷಿ, ಆರೋಗ್ಯ, ಅರಣ್ಯ ಇಲಾಖೆ, ಪ್ರಾದೇಶಿಕ ಅರಣ್ಯ ಇಲಾಖೆ ಇವರು ತಮ್ಮ ತಮ್ಮ ಇಲಾಖಾ ಮಾಹಿತಿ ನೀಡಿದರು.

ಚರ್ಚಿತ ವಿಷಯಗಳು: ರಸ್ತೆ ದುರಸ್ತಿ, ದಾರಿದೀಪ ನಿರ್ವಹಣೆ, ಕಾಡು ಪ್ರಾಣಿಗಳಿಂದ ಬೆಳೆನಾಶ, ನವಿಲು, ಕೋತಿಗಳ ಉಪಟಲ, ಆರೋಗ್ಯ ಕೇಂದ್ರ, ಅಂಗನವಾಡಿ, ಪ್ರವಾಸಿಗರಿಂದ ಪರಿಸರ ಮಾಲಿನ್ಯ ವಿಷಯಗಳು ಪ್ರತಿಧ್ವನಿಸಿದವು.

ಉಪಾಧ್ಯಕ್ಷ ದಿನೇಶ್ ಗೌಡ, ಪಂಚಾಯತು ಸದಸ್ಯರು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಬಾರ್ಯ: ಸರಳಿಕಟ್ಟೆ ಮೆಗಿನ ಪುಯಿಲದಲ್ಲಿ ತುಂಡಾಗಿ ಬೀಳುತ್ತಿರುವ ವಿದ್ಯುತ್ ತಂತಿಗಳು: ಅನಾಹುತ ಸಂಭವಿಸುವ ಮುನ್ನ ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಗುರುವಾಯನಕೆರೆ ಸ. ಹಿ. ಪ್ರಾ. ಶಾಲೆಗೆ ಪುತ್ತೂರು ಸಹಾಯಕ ಆಯುಕ್ತ ಶ್ರವಣ್ ಕುಮಾರ್ ಭೇಟಿ

Suddi Udaya

ಕಾಯರ್ತಡ್ಕ: ಭಾರತ್ ಸ್ಟೋರ್ಸ್ ಗೆ ನುಗ್ಗಿದ ಕಳ್ಳರು: ನಗದು ಜೊತೆಗೆ ಇನ್ನಿತರ ವಸ್ತುಗಳನ್ನು ದೋಚಿ ಪರಾರಿ

Suddi Udaya

ಸೌಜನ್ಯಳ ಅತ್ಯಾಚಾರ, ಕೊಲೆ ಪ್ರಕರಣದ ಎಸ್ .ಐ.ಟಿ ತನಿಖೆಗೆ ಆಗ್ರಹ: ಬೆಳ್ತಂಗಡಿ ತಾಲೂಕು ಕಚೇರಿ ಎದುರು ಮಹಾಧರಣಿ ಆರಂಭ

Suddi Udaya

ಜ.31-ಫೆ1: ನಾವೂರು ಶ್ರೀ ಗೋಪಾಲಕೃಷ್ಣ ದೇವರ ಪ್ರತಿಷ್ಠಾ ವಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಇಂದಿನಿಂದ ದ.ಕ ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆಗೆ ನಾಮಪತ್ರಗಳ ಸ್ವೀಕಾರ ಆರಂಭ: ಜಿಲ್ಲಾಧಿಕಾರಿ

Suddi Udaya
error: Content is protected !!