July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಲವಂತಿಗೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

ಮಲವಂತಿಗೆ : ಮಲವಂತಿಗೆ ಗ್ರಾಮ ಪಂಚಾಯತಿನ 2023-24 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಜು.19 ರಂದು ಮಲವಂತಿಗೆ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯಿತು.

ಅಕ್ಷರದಾಸೋಹ ಸಹಾಯಕ ನಿರ್ದೇಶಕಿ ತಾರಾಕೇಶ್ವರಿ ಮಾರ್ಗದರ್ಶಿ ಅಧಿಕಾರಿಯಾಗಿದ್ದರು.

ಅಧ್ಯಕ್ಷತೆಯನ್ನು ಗ್ರಾ.ಪಂ. ಅಧ್ಯಕ್ಷತೆ ಅನಿತಾ ಕೆ ವಹಿಸಿದ್ದರು.

ಪಂಚಾಯತು ಅಭಿವೃದ್ಧಿ ಅಧಿಕಾರಿ ರಶ್ಮಿ ಬಿ.ಪಿ ಸ್ವಾಗತ, ವರದಿ ಲೆಕ್ಕಪತ್ರ ಮಂಡಿಸಿದರು.

ಪ್ರಾರಂಭದಲ್ಲಿ ಮಲವಂತಿಗೆ ಗ್ರಾಮದ ಮಂಟಮೆ ಬಾಲಕೃಷ್ಣರವರು 8ನೇ ತರಗತಿ ವಿದ್ಯಾರ್ಥಿ ಮನೆಯಲ್ಲಿ ಆಟವಾಡುತ್ತಿದ್ದ ಸಂದರ್ಭ ಉಯ್ಯಾಲೆಯ ಹಗ್ಗ ಕುತ್ತಿಗೆ ಸಿಲುಕಿ ಸಾವನ್ನಪ್ಪಿದ ಶ್ರೀಶ ಇವರ ಆತ್ಮಶಾಂತಿಗಾಗಿ ಒಂದು ನಿಮಿಷ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.

ಮೆಸ್ಕಾಂ, ಕಂದಾಯ, ಮಹಿಳಾ ಮತ್ತು ಕಲ್ಯಾಣ ಇಲಾಖೆ, ಕೃಷಿ, ಆರೋಗ್ಯ, ಅರಣ್ಯ ಇಲಾಖೆ, ಪ್ರಾದೇಶಿಕ ಅರಣ್ಯ ಇಲಾಖೆ ಇವರು ತಮ್ಮ ತಮ್ಮ ಇಲಾಖಾ ಮಾಹಿತಿ ನೀಡಿದರು.

ಚರ್ಚಿತ ವಿಷಯಗಳು: ರಸ್ತೆ ದುರಸ್ತಿ, ದಾರಿದೀಪ ನಿರ್ವಹಣೆ, ಕಾಡು ಪ್ರಾಣಿಗಳಿಂದ ಬೆಳೆನಾಶ, ನವಿಲು, ಕೋತಿಗಳ ಉಪಟಲ, ಆರೋಗ್ಯ ಕೇಂದ್ರ, ಅಂಗನವಾಡಿ, ಪ್ರವಾಸಿಗರಿಂದ ಪರಿಸರ ಮಾಲಿನ್ಯ ವಿಷಯಗಳು ಪ್ರತಿಧ್ವನಿಸಿದವು.

ಉಪಾಧ್ಯಕ್ಷ ದಿನೇಶ್ ಗೌಡ, ಪಂಚಾಯತು ಸದಸ್ಯರು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಆ.19: ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ ಸಮಾರಂಭ

Suddi Udaya

ಉಜಿರೆ ಎಸ್‌.ಡಿ.ಎಂ. ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಸ್ಕಾರ್ಫ್ ದಿನಾಚರಣೆ

Suddi Udaya

ಎಕ್ಸೆಲ್ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ಮಕ್ಕಳಿಂದ ಶೈಕ್ಷಣಿಕ ಭೇಟಿ ಕಾರ್ಯಕ್ರಮ

Suddi Udaya

ಮಚ್ಚಿನ: ಕಲ್ಲಗುಡ್ಡೆ ರಸ್ತೆಯಲ್ಲಿ ತುಂಬಿದ ನೀರು

Suddi Udaya

ಬಿಎಂಎಸ್ ಸಂಘದ ದಕ್ಷಿಣ ಮತ್ತು ದಕ್ಷಿಣ ಮಧ್ಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ವಿ. ರಾಧಾಕೃಷ್ಣನ್ ದ.ಕ. ಜಿಲ್ಲೆಗೆ ಆಗಮನ

Suddi Udaya

ಬಾನಾಡಿಗಳ ಬಾಯಾರಿಕೆ ಇಂಗಿಸಲು ಎಸ್ ಡಿ ಎಮ್ ನಲ್ಲಿ ವಿಶೇಷ ಯೋಜನೆ

Suddi Udaya
error: Content is protected !!