July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.25: ಹಾಲು ಹೆಚ್ಚಳ ಮತ್ತು ಹೈನುಗಾರಿಕಾ ಮಾಹಿತಿ ಕಾರ್ಯಕ್ರಮ

ಶಿರ್ಲಾಲು : ದ.ಕ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಹಾಗೂ ಶಿರ್ಲಾಲು ಹಾಲು ಉತ್ಪಾದಕರ ಸಹಕಾರಿ ಸಂಘ ಶಿರ್ಲಾಲು ಇವರ ಸಹಭಾಗಿತ್ವದಲ್ಲಿ ಹಾಲು ಹೆಚ್ಚಳ ಮತ್ತು ಹೈನುಗಾರಿಕಾ ಮಾಹಿತಿ ಕಾರ್ಯಕ್ರಮವು ಜು.25 ರಂದು ಪೂರ್ವಾಹ್ನ ಗಂಟೆ 10.00 ರಿಂದ ಸುಲ್ಕೇರಿಮೊಗ್ರು ಸಿ.ಎ ಬ್ಯಾಂಕ್ ನ ನವೋದಯ ಸಭಾಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಮಂಗಳೂರು ದ.ಕ.ಜಿ.ಸ.ಹಾ.ಉ.ಒ.ನಿ ನಿರ್ದೇಶಕ ಬಿ. ನಿರಂಜನ್ ಉದ್ಘಾಟಿಸಲಿದ್ದಾರೆ.

ಅಧ್ಯಕ್ಷತೆಯನ್ನು ಶಿರ್ಲಾಲು ಹಾ.ಉ.ಸ.ಸಂ.ನಿ ಅಧ್ಯಕ್ಷ ಮಾಧವ ವಹಿಸಲಿದ್ದಾರೆ.

ಸಂಪನ್ಮೂಲ ವ್ಯಕ್ತಿಗಳಾಗಿ ಮಂಗಳೂರು ದ.ಕ.ಜಿ.ಸ.ಹಾ.ಉ.ಒ.ನಿ. ನಿವೃತ್ತ ಪ್ರದಾನ ವ್ಯವಸ್ಥಾಪಕ ಡಾ| ನಿತ್ಯಾನಂದ ಭಕ್ತ ಭಾಗವಹಿಸಲಿರುವರು.

ಮುಖ್ಯ ಅತಿಥಿಗಳಾಗಿ ಮಂಗಳೂರು ದ.ಕ.ಜಿ.ಸ.ಹಾ.ಉ.ಒ.ನಿ ನಿರ್ದೇಶಕ ಪದ್ಮನಾಭ ಶೆಟ್ಟಿ ಅರ್ಕಜೆ, ಮಂಗಳೂರು ದ.ಕ.ಜಿ.ಸ.ಹಾ.ಉ.ಒ.ನಿ. ಸಹಾಯಕ ವ್ಯವಸ್ಥಾಪಕರು ಡಾ| ಪೂಜಾ, ಮಂಗಳೂರು ದ.ಕ.ಜಿ.ಸ.ಹಾ.ಉ.ಒ.ನಿ. ವಿಸ್ತರಣಾಧಿಕಾರಿ ಶ್ರೀಮತಿ ಸುಚಿತ್ರಾ, ಶಿರ್ಲಾಲು ಗ್ರಾ.ಪಂ. ಅಧ್ಯಕ್ಷ ತಾರಾನಾಥ ಗೌಡ, ಶಿರ್ಲಾಲು ಸಿ.ಎ ಬ್ಯಾಂಕ್ ಅಧ್ಯಕ್ಷ ನವೀನ್ ಕೆ ಸಾಮಾನಿ ಭಾಗವಹಿಸಲಿದ್ದಾರೆ.

Related posts

ಕಸ್ತೂರಿರಂಗನ್ ವರದಿ ವಿರುದ್ಧವಾಗಿ ಚಾರ್ಮಾಡಿ ಗ್ರಾಮದಲ್ಲಿ ಹೋರಾಟ ಸಮಿತಿ ರಚನೆ

Suddi Udaya

ಮಾ:29: ನಿಡ್ಲೆ ಪ್ರೌಢಶಾಲಾ ಕೊಠಡಿಗಳ ಹಸ್ತಾಂತರ ಹಾಗೂ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಉಚಿತ ಯೋಗ ಶಿಬಿರಕ್ಕೆ ಚಾಲನೆ

Suddi Udaya

ಪೆರ್ಲ: ಮುಂಡತ್ತೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜೋತ್ಸವ ಆಚರಣೆ

Suddi Udaya

ಗೇರುಕಟ್ಟೆ: ರೇಷ್ಮೆ ರೋಡ್ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ

Suddi Udaya

ದ.ಕ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣಗೊಳಿಸಲು ಸದನದಲ್ಲಿ ಶಾಸಕ ಹರೀಶ್ ಪೂಂಜ ಒತ್ತಾಯ

Suddi Udaya
error: Content is protected !!