24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸ. ಪ್ರೌ. ಶಾಲಾ ಮಕ್ಕಳ ಮಾಸಿಕ ಪತ್ರಿಕೆ ‘ಮಕ್ಕಳ ವಾಣಿ’ ಬಿಡುಗಡೆ

ನಡ : ಮಕ್ಕಳ ಓದು ಹಾಗೂ ಬರಹವನ್ನು ಉತ್ತೇಜಿಸುವ ಉದ್ದೇಶದಿಂದ ಸರಕಾರಿ ಪ್ರೌಢಶಾಲೆ ನಡ ಇಲ್ಲಿನ ಮಕ್ಕಳ ಸೃಜನಶೀಲತೆಯ ಪ್ರತೀಕವಾಗಿ “ಮಕ್ಕಳ ವಾಣಿ” ಮಾಸಿಕ ಪತ್ರಿಕೆಯ ಬಿಡುಗಡೆಯನ್ನು ಬೆಳ್ತಂಗಡಿಯ ಹಿರಿಯ ಪತ್ರಕರ್ತ ಶಿಬಿ ಧರ್ಮಸ್ಥಳ ರವರು ಜು.19 ರಂದು ಬಿಡುಗಡೆಗೊಳಿಸಿದರು.

ಸರಕಾರಿ ಪ್ರೌಢಶಾಲೆ ನಡದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದ ಶಿಬಿ ಧರ್ಮಸ್ಥಳ ಇವರು “ಮಕ್ಕಳು ಓದುವ ಅಭ್ಯಾಸ ರೂಢಿಸಿಕೊಂಡಾಗ, ಬರೆಯಲು ಸಾಧ್ಯ. ಓದುವ ಮೂಲಕ ಶಬ್ಧ ಭಂಡಾರವನ್ನು ಹೆಚ್ಚಿಸಿಕೊಳ್ಳಬಹುದು. ಇದರಿಂದ ಬರವಣಿಗೆಯ ಕಲೆ ಉತ್ತಮಪಡಿಸಬಹುದು” ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಶಾಲಾ ಪತ್ರಿಕೆಯನ್ನು ಮುಕ್ತ ಕಂಠದಿಂದ ಪ್ರಶಂಸಿಸಿದ ಶಿಬಿ ಧರ್ಮಸ್ಥಳ ಅವರು ನಡ ಪ್ರೌಢಶಾಲೆಯ ಸಾಧನೆ ರಾಜ್ಯಕ್ಕೇ ಮಾದರಿಯಾಗಿದೆ ಎಂದರು. ಶಾಲಾ ಮುಖ್ಯಶಿಕ್ಷಕ ಯಾಕೂಬ್ ಎಸ್. ಮಾತಾಡಿ ಮಕ್ಕಳ ಸೃಜನಶೀಲತೆಗೆ ಪ್ರೋತ್ಸಾಹ ನೀಡುವ ಉದ್ದೇಶಕ್ಕಾಗಿ ಇದೊಂದು ವಿನೂತನ ಪ್ರಯೋಗವಾಗಿದೆ ಎಂದರು. ಸಭೆಯ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ. ಉಪಾಧ್ಯಕ್ಷರಾದ ಸುಧಾಕರ ಇವರು ವಹಿಸಿದ್ದು ಇದೊಂದು ಮಾದರಿ ಪ್ರಯೋಗವಾಗಿದೆ ಎಂದರು.

ಸಮಾರಂಭದಲ್ಲಿ ಮಾತಾಡಿ ಪತ್ರಿಕೆಯ ಹಿಂದಿರುವ ಶ್ರಮದ ಬಗ್ಗೆ ಶಿಕ್ಷಕರಾದ ಶಿವಪುತ್ರ ಸುಣಗಾರ ವಿವರಿಸಿದರು. ಶಿಕ್ಷಕ ಮೋಹನ ಬಾಬು ಹಾಗೂ ಶಿಕ್ಷಕಿಯರುಗಳಾದ ಶ್ರೀಮತಿ ಸುಜಯ ಬಿ, ಶ್ರೀಮತಿ ಶೋಭಾ ಎಸ್, ಶ್ರೀಮತಿ ಜಯಂತಿ ಸ್ಟ್ರೆಲ್ಲಾ ಹಾಗೂ ಕುಮಾರಿ ಫಾತಿಮತ್ ಮಿಶ್ರಿಯಾ ಉಪಸ್ಥಿತರಿದ್ದರು.

ಶಾಲಾ ಉಪನಾಯಕ ಹೃತಿಕ್ ಸ್ವಾಗತಿಸಿ, ಕುಮಾರಿ ಸಾನ್ವಿ ಧನ್ಯವಾದವಿತ್ತರು.

Related posts

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸತ್ಯರ್ಥ ಎಸ್. ಜೈನ್ ಪ್ರಥಮ ಸ್ಥಾನ

Suddi Udaya

ವರ್ಗಾವಣೆಗೊಂಡ ಶಿಕ್ಷಕ ಸುರೇಶ್ ಶೆಟ್ಟಿಯವರಿಗೆ ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ವತಿಯಿಂದ ಬಿಳ್ಕೋಡುಗೆ ಸಮಾರಂಭ

Suddi Udaya

ಬಳಂಜ ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಪರಿವಾರ ಶಕ್ತಿಗಳ ಕ್ಷೇತ್ರ ಬೊಂಟ್ರೋಟ್ಟುಗುತ್ತು ಬಳಂಜ ಡಿ.28-31 ಮಹಾಚಂಡಿಕಾಯಾಗ,ದೈವಗಳ ಪ್ರತಿಷ್ಠಾ ಕಲಶಾಭಿಷೇಕ, ನೇಮೋತ್ಸವ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಾಲಿಬಾಲ್ ಪಂದ್ಯಾಟ: ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿಗಳು ಹಾಗೂ ಪದ್ಮುಂಜ ಪ್ರೌಢಶಾಲಾ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಎರಡು ತಂಡಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಹತ್ಯಡ್ಕ ಸಹಕಾರಿ ಸಂಘದ ಚುನಾವಣೆ :ಸಹಕಾರ ಭಾರತೀಯ ಅಭ್ಯರ್ಥಿಗಳ ‘ಮಹಾಭಿಯಾನ’ ಪ್ರಚಾರಕ್ಕೆ ಅರುಣ್ ಕುಮಾರ್ ಪುತ್ತಿಲರಿಂದ ಚಾಲನೆ

Suddi Udaya

ಬಳಂಜ: ಅಟ್ಲಾಜೆ ಅಂಗನವಾಡಿ ಶಿಕ್ಷಕಿ ಜಾನಕಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!