38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಲವಂತಿಗೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

ಮಲವಂತಿಗೆ : ಮಲವಂತಿಗೆ ಗ್ರಾಮ ಪಂಚಾಯತಿನ 2023-24 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಜು.19 ರಂದು ಮಲವಂತಿಗೆ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯಿತು.

ಅಕ್ಷರದಾಸೋಹ ಸಹಾಯಕ ನಿರ್ದೇಶಕಿ ತಾರಾಕೇಶ್ವರಿ ಮಾರ್ಗದರ್ಶಿ ಅಧಿಕಾರಿಯಾಗಿದ್ದರು.

ಅಧ್ಯಕ್ಷತೆಯನ್ನು ಗ್ರಾ.ಪಂ. ಅಧ್ಯಕ್ಷತೆ ಅನಿತಾ ಕೆ ವಹಿಸಿದ್ದರು.

ಪಂಚಾಯತು ಅಭಿವೃದ್ಧಿ ಅಧಿಕಾರಿ ರಶ್ಮಿ ಬಿ.ಪಿ ಸ್ವಾಗತ, ವರದಿ ಲೆಕ್ಕಪತ್ರ ಮಂಡಿಸಿದರು.

ಪ್ರಾರಂಭದಲ್ಲಿ ಮಲವಂತಿಗೆ ಗ್ರಾಮದ ಮಂಟಮೆ ಬಾಲಕೃಷ್ಣರವರು 8ನೇ ತರಗತಿ ವಿದ್ಯಾರ್ಥಿ ಮನೆಯಲ್ಲಿ ಆಟವಾಡುತ್ತಿದ್ದ ಸಂದರ್ಭ ಉಯ್ಯಾಲೆಯ ಹಗ್ಗ ಕುತ್ತಿಗೆ ಸಿಲುಕಿ ಸಾವನ್ನಪ್ಪಿದ ಶ್ರೀಶ ಇವರ ಆತ್ಮಶಾಂತಿಗಾಗಿ ಒಂದು ನಿಮಿಷ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.

ಮೆಸ್ಕಾಂ, ಕಂದಾಯ, ಮಹಿಳಾ ಮತ್ತು ಕಲ್ಯಾಣ ಇಲಾಖೆ, ಕೃಷಿ, ಆರೋಗ್ಯ, ಅರಣ್ಯ ಇಲಾಖೆ, ಪ್ರಾದೇಶಿಕ ಅರಣ್ಯ ಇಲಾಖೆ ಇವರು ತಮ್ಮ ತಮ್ಮ ಇಲಾಖಾ ಮಾಹಿತಿ ನೀಡಿದರು.

ಚರ್ಚಿತ ವಿಷಯಗಳು: ರಸ್ತೆ ದುರಸ್ತಿ, ದಾರಿದೀಪ ನಿರ್ವಹಣೆ, ಕಾಡು ಪ್ರಾಣಿಗಳಿಂದ ಬೆಳೆನಾಶ, ನವಿಲು, ಕೋತಿಗಳ ಉಪಟಲ, ಆರೋಗ್ಯ ಕೇಂದ್ರ, ಅಂಗನವಾಡಿ, ಪ್ರವಾಸಿಗರಿಂದ ಪರಿಸರ ಮಾಲಿನ್ಯ ವಿಷಯಗಳು ಪ್ರತಿಧ್ವನಿಸಿದವು.

ಉಪಾಧ್ಯಕ್ಷ ದಿನೇಶ್ ಗೌಡ, ಪಂಚಾಯತು ಸದಸ್ಯರು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಪದ್ಮುಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕದ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಕಾರಿನಲ್ಲಿ ಮಲಗಿದ್ದವರ ಮೇಲೆ ಕಿಡಿಗೇಡಿಗಳಿಂದ ಹಲ್ಲೆ : ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದ ಘಟನೆ: ಗಾಯಗೊಂಡ ಮಿತ್ತಬಾಗಿಲು ಸಂಶುದ್ದೀನ್ ಮಂಗಳೂರು ಆಸ್ಪತ್ರೆಯಲ್ಲಿ ದಾಖಲು

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಮೇಘಾಲಯ ರಾಜ್ಯದ ಸಹಕಾರ ಇಲಾಖೆಯ ಅಧಿಕಾರಿಗಳಿಂದ ಅಧ್ಯಯನ ಪ್ರವಾಸ

Suddi Udaya

ಬ್ಯೂಟಿಪಾರ್ಲರ್ ಎಸೋಸಿಯೇಶನ್ ವತಿಯಿಂದ ಮಹಿಳಾ ದಿನಾಚರಣೆ

Suddi Udaya

ಮೇ 21 : ಮಾಜಿ ಶಾಸಕ ಕೆ.ವಸಂತ ಬಂಗೇರ ಅವರ ಉತ್ತರಕ್ರಿಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳ್ತಂಗಡಿಗೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕದಿಂದ ತರಬೇತಿ ಕಾರ್ಯಕ್ರಮ

Suddi Udaya
error: Content is protected !!