July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಲವಂತಿಗೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

ಮಲವಂತಿಗೆ : ಮಲವಂತಿಗೆ ಗ್ರಾಮ ಪಂಚಾಯತಿನ 2023-24 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಜು.19 ರಂದು ಮಲವಂತಿಗೆ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯಿತು.

ಅಕ್ಷರದಾಸೋಹ ಸಹಾಯಕ ನಿರ್ದೇಶಕಿ ತಾರಾಕೇಶ್ವರಿ ಮಾರ್ಗದರ್ಶಿ ಅಧಿಕಾರಿಯಾಗಿದ್ದರು.

ಅಧ್ಯಕ್ಷತೆಯನ್ನು ಗ್ರಾ.ಪಂ. ಅಧ್ಯಕ್ಷತೆ ಅನಿತಾ ಕೆ ವಹಿಸಿದ್ದರು.

ಪಂಚಾಯತು ಅಭಿವೃದ್ಧಿ ಅಧಿಕಾರಿ ರಶ್ಮಿ ಬಿ.ಪಿ ಸ್ವಾಗತ, ವರದಿ ಲೆಕ್ಕಪತ್ರ ಮಂಡಿಸಿದರು.

ಪ್ರಾರಂಭದಲ್ಲಿ ಮಲವಂತಿಗೆ ಗ್ರಾಮದ ಮಂಟಮೆ ಬಾಲಕೃಷ್ಣರವರು 8ನೇ ತರಗತಿ ವಿದ್ಯಾರ್ಥಿ ಮನೆಯಲ್ಲಿ ಆಟವಾಡುತ್ತಿದ್ದ ಸಂದರ್ಭ ಉಯ್ಯಾಲೆಯ ಹಗ್ಗ ಕುತ್ತಿಗೆ ಸಿಲುಕಿ ಸಾವನ್ನಪ್ಪಿದ ಶ್ರೀಶ ಇವರ ಆತ್ಮಶಾಂತಿಗಾಗಿ ಒಂದು ನಿಮಿಷ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.

ಮೆಸ್ಕಾಂ, ಕಂದಾಯ, ಮಹಿಳಾ ಮತ್ತು ಕಲ್ಯಾಣ ಇಲಾಖೆ, ಕೃಷಿ, ಆರೋಗ್ಯ, ಅರಣ್ಯ ಇಲಾಖೆ, ಪ್ರಾದೇಶಿಕ ಅರಣ್ಯ ಇಲಾಖೆ ಇವರು ತಮ್ಮ ತಮ್ಮ ಇಲಾಖಾ ಮಾಹಿತಿ ನೀಡಿದರು.

ಚರ್ಚಿತ ವಿಷಯಗಳು: ರಸ್ತೆ ದುರಸ್ತಿ, ದಾರಿದೀಪ ನಿರ್ವಹಣೆ, ಕಾಡು ಪ್ರಾಣಿಗಳಿಂದ ಬೆಳೆನಾಶ, ನವಿಲು, ಕೋತಿಗಳ ಉಪಟಲ, ಆರೋಗ್ಯ ಕೇಂದ್ರ, ಅಂಗನವಾಡಿ, ಪ್ರವಾಸಿಗರಿಂದ ಪರಿಸರ ಮಾಲಿನ್ಯ ವಿಷಯಗಳು ಪ್ರತಿಧ್ವನಿಸಿದವು.

ಉಪಾಧ್ಯಕ್ಷ ದಿನೇಶ್ ಗೌಡ, ಪಂಚಾಯತು ಸದಸ್ಯರು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ

Suddi Udaya

ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ನಾಮನಿರ್ದೇಶಿತ ಸದಸ್ಯರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ, ಅಭಿನಂದನೆ

Suddi Udaya

ಮಿತ್ತಬಾಗಿಲು ಸರಕಾರಿ ಪ್ರೌಢಶಾಲೆಗೆ ‘ಎ’ ಗ್ರೇಡ್ ನೊಂದಿಗೆ ಶೇ.100 ಫಲಿತಾಂಶ

Suddi Udaya

ಮೊಗ್ರು: ಕರಂಬಾರುವಿನಲ್ಲಿ ಕಾಡಾನೆ ಪ್ರತ್ಯಕ್ಷ: ನೇತ್ರಾವತಿ ನದಿಯಲ್ಲಿ ಜಳಕ

Suddi Udaya

ಉಜಿರೆ : ಅಲ್-ಅಮೀನ್ ಯಂಗ್-ಮೆನ್ಸ್ ವತಿಯಿಂದ ಮಕ್ಕಳ ಸುನ್ನತ್ ಕಾರ್ಯಕ್ರಮ

Suddi Udaya

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮತ್ತು ಸುಳ್ಳು ವದಂತಿ ಖಂಡಿಸಿ “ನಮ್ಮ ನಡೆ ಧರ್ಮಸ್ಥಳದ ಕಡೆ” : ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ನೇತೃತ್ವದಲ್ಲಿ “ಧರ್ಮಸ್ಥಳ ಚಲೊ ಅಭಿಯಾನ”ಧಮ೯ಸ್ಥಳಕ್ಕೆ 400 ಕಾರುಗಳಲ್ಲಿ ಬಂದ ಎರಡು ಸಾವಿರ ಭಕ್ತರು

Suddi Udaya
error: Content is protected !!