ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಲವಂತಿಗೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

ಮಲವಂತಿಗೆ : ಮಲವಂತಿಗೆ ಗ್ರಾಮ ಪಂಚಾಯತಿನ 2023-24 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಜು.19 ರಂದು ಮಲವಂತಿಗೆ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯಿತು.

ಅಕ್ಷರದಾಸೋಹ ಸಹಾಯಕ ನಿರ್ದೇಶಕಿ ತಾರಾಕೇಶ್ವರಿ ಮಾರ್ಗದರ್ಶಿ ಅಧಿಕಾರಿಯಾಗಿದ್ದರು.

ಅಧ್ಯಕ್ಷತೆಯನ್ನು ಗ್ರಾ.ಪಂ. ಅಧ್ಯಕ್ಷತೆ ಅನಿತಾ ಕೆ ವಹಿಸಿದ್ದರು.

ಪಂಚಾಯತು ಅಭಿವೃದ್ಧಿ ಅಧಿಕಾರಿ ರಶ್ಮಿ ಬಿ.ಪಿ ಸ್ವಾಗತ, ವರದಿ ಲೆಕ್ಕಪತ್ರ ಮಂಡಿಸಿದರು.

ಪ್ರಾರಂಭದಲ್ಲಿ ಮಲವಂತಿಗೆ ಗ್ರಾಮದ ಮಂಟಮೆ ಬಾಲಕೃಷ್ಣರವರು 8ನೇ ತರಗತಿ ವಿದ್ಯಾರ್ಥಿ ಮನೆಯಲ್ಲಿ ಆಟವಾಡುತ್ತಿದ್ದ ಸಂದರ್ಭ ಉಯ್ಯಾಲೆಯ ಹಗ್ಗ ಕುತ್ತಿಗೆ ಸಿಲುಕಿ ಸಾವನ್ನಪ್ಪಿದ ಶ್ರೀಶ ಇವರ ಆತ್ಮಶಾಂತಿಗಾಗಿ ಒಂದು ನಿಮಿಷ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.

ಮೆಸ್ಕಾಂ, ಕಂದಾಯ, ಮಹಿಳಾ ಮತ್ತು ಕಲ್ಯಾಣ ಇಲಾಖೆ, ಕೃಷಿ, ಆರೋಗ್ಯ, ಅರಣ್ಯ ಇಲಾಖೆ, ಪ್ರಾದೇಶಿಕ ಅರಣ್ಯ ಇಲಾಖೆ ಇವರು ತಮ್ಮ ತಮ್ಮ ಇಲಾಖಾ ಮಾಹಿತಿ ನೀಡಿದರು.

ಚರ್ಚಿತ ವಿಷಯಗಳು: ರಸ್ತೆ ದುರಸ್ತಿ, ದಾರಿದೀಪ ನಿರ್ವಹಣೆ, ಕಾಡು ಪ್ರಾಣಿಗಳಿಂದ ಬೆಳೆನಾಶ, ನವಿಲು, ಕೋತಿಗಳ ಉಪಟಲ, ಆರೋಗ್ಯ ಕೇಂದ್ರ, ಅಂಗನವಾಡಿ, ಪ್ರವಾಸಿಗರಿಂದ ಪರಿಸರ ಮಾಲಿನ್ಯ ವಿಷಯಗಳು ಪ್ರತಿಧ್ವನಿಸಿದವು.

ಉಪಾಧ್ಯಕ್ಷ ದಿನೇಶ್ ಗೌಡ, ಪಂಚಾಯತು ಸದಸ್ಯರು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಶಿಕ್ಷಣ ಕ್ಷೇತ್ರದ ಅಪೂರ್ವ ಸಾಧಕ, ಎಕ್ಸೆಲ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆಒಲಿದು ಬಂದ “ಭಾರತೀಯ ಶಿಕ್ಷಣ ರತ್ನ ಪ್ರಶಸ್ತಿ -2025”

Suddi Udaya

ಸವಣಾಲು: ಕೋಡಿಮುಗೇರು ಶ್ರೀ ಬ್ರಹ್ಮಮುಗೇರ ಗುಳಿಗ ಮತ್ತು ಸ್ವಾಮಿ ಕೊರಗಜ್ಜ ದೈವಗಳ ಪುನರ್ ಪ್ರತಿಷ್ಠಾಪನ : ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿಯ ರಥೋತ್ಸವ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಬಂಗಾಡಿ ರವಿರಾಜ ಬಳ್ಳಾಲ್ ಅವರ ನಿಧನಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಆರಂಬೋಡಿ 135 ನೇ ಬೂತ್ ನಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya
error: Content is protected !!