23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಲವಂತಿಗೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

ಮಲವಂತಿಗೆ : ಮಲವಂತಿಗೆ ಗ್ರಾಮ ಪಂಚಾಯತಿನ 2023-24 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಜು.19 ರಂದು ಮಲವಂತಿಗೆ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯಿತು.

ಅಕ್ಷರದಾಸೋಹ ಸಹಾಯಕ ನಿರ್ದೇಶಕಿ ತಾರಾಕೇಶ್ವರಿ ಮಾರ್ಗದರ್ಶಿ ಅಧಿಕಾರಿಯಾಗಿದ್ದರು.

ಅಧ್ಯಕ್ಷತೆಯನ್ನು ಗ್ರಾ.ಪಂ. ಅಧ್ಯಕ್ಷತೆ ಅನಿತಾ ಕೆ ವಹಿಸಿದ್ದರು.

ಪಂಚಾಯತು ಅಭಿವೃದ್ಧಿ ಅಧಿಕಾರಿ ರಶ್ಮಿ ಬಿ.ಪಿ ಸ್ವಾಗತ, ವರದಿ ಲೆಕ್ಕಪತ್ರ ಮಂಡಿಸಿದರು.

ಪ್ರಾರಂಭದಲ್ಲಿ ಮಲವಂತಿಗೆ ಗ್ರಾಮದ ಮಂಟಮೆ ಬಾಲಕೃಷ್ಣರವರು 8ನೇ ತರಗತಿ ವಿದ್ಯಾರ್ಥಿ ಮನೆಯಲ್ಲಿ ಆಟವಾಡುತ್ತಿದ್ದ ಸಂದರ್ಭ ಉಯ್ಯಾಲೆಯ ಹಗ್ಗ ಕುತ್ತಿಗೆ ಸಿಲುಕಿ ಸಾವನ್ನಪ್ಪಿದ ಶ್ರೀಶ ಇವರ ಆತ್ಮಶಾಂತಿಗಾಗಿ ಒಂದು ನಿಮಿಷ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.

ಮೆಸ್ಕಾಂ, ಕಂದಾಯ, ಮಹಿಳಾ ಮತ್ತು ಕಲ್ಯಾಣ ಇಲಾಖೆ, ಕೃಷಿ, ಆರೋಗ್ಯ, ಅರಣ್ಯ ಇಲಾಖೆ, ಪ್ರಾದೇಶಿಕ ಅರಣ್ಯ ಇಲಾಖೆ ಇವರು ತಮ್ಮ ತಮ್ಮ ಇಲಾಖಾ ಮಾಹಿತಿ ನೀಡಿದರು.

ಚರ್ಚಿತ ವಿಷಯಗಳು: ರಸ್ತೆ ದುರಸ್ತಿ, ದಾರಿದೀಪ ನಿರ್ವಹಣೆ, ಕಾಡು ಪ್ರಾಣಿಗಳಿಂದ ಬೆಳೆನಾಶ, ನವಿಲು, ಕೋತಿಗಳ ಉಪಟಲ, ಆರೋಗ್ಯ ಕೇಂದ್ರ, ಅಂಗನವಾಡಿ, ಪ್ರವಾಸಿಗರಿಂದ ಪರಿಸರ ಮಾಲಿನ್ಯ ವಿಷಯಗಳು ಪ್ರತಿಧ್ವನಿಸಿದವು.

ಉಪಾಧ್ಯಕ್ಷ ದಿನೇಶ್ ಗೌಡ, ಪಂಚಾಯತು ಸದಸ್ಯರು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ: ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಕಾಳಿ ರವರಿಗೆ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಶಿಶಿಲ: ಬರ್ಗುಳದಲ್ಲಿ ಹದಗೆಟ್ಟ ರಸ್ತೆ : ಅರಸಿನಮಕ್ಕಿ ಶಿಶಿಲ ಶೌರ್ಯ ಘಟಕ ಸ್ವಯಂಸೇವಕರಿಂದ ದುರಸ್ತಿ ಕಾರ್ಯ

Suddi Udaya

ಪೆರಿಂಜೆ ಪಡ್ಯಾರಬೆಟ್ಟ ಕ್ಷೇತ್ರದಿಂದ ಪುಸ್ತಕ ವಿತರಣೆ

Suddi Udaya

ಎಸ್‌ವೈಎಸ್‌ ಉರುವಾಲು ಪದವು ಸರ್ಕಲ್ ಸಮಿತಿ: ಅಧ್ಯಕ್ಷರಾಗಿ ಎಸ್‌.ಪಿ. ಮುಹಮ್ಮದ್ ಮುಸ್ತಫಾ ಮದನಿ, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಲತೀಫ್ ಕನ್ಯಾರಕೋಡಿ

Suddi Udaya

ಸೌತಡ್ಕ ಮಹಾಗಣಪತಿ ದೇವಸ್ಥಾನ: ವ್ಯವಸ್ಥಾಪನಾ ಸಮಿತಿಯ 9 ಸದಸ್ಯ ಸ್ಥಾನಕ್ಕೆ 28 ಮಂದಿ ಅರ್ಜಿ

Suddi Udaya

ಪಿಲ್ಯ ಶಾಲಾ ಹಳೇ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಆಮಂತ್ರಣ ವಿಜಯ ಕುಮಾರ್ ಜೈನ್ ಆಯ್ಕೆ

Suddi Udaya
error: Content is protected !!