25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ: ಇಂದಿರಾ ‘ಗಾಂಧಿ ವಸತಿ ಶಾಲೆಯಲ್ಲಿ ಔಷಧೀಯ ವನ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಹೊಸಂಗಡಿ: ಶಾಲೆ ವಠಾರದಲ್ಲಿ ಔಷಧೀಯ ಗಿಡಗಳನ್ನು ನೆಟ್ಟು ಬೆಳೆಸಬೇಕು ಎಂದು ಯೇನಪೊಯ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ಲಕ್ಷ್ಮೀಶ ಉಪಾದ್ಯಾಯ ಹೇಳಿದ್ದಾರೆ.

ಹೊಸಂಗಡಿಯಲ್ಲಿರುವ ಇಂದಿರಾ ‘ಗಾಂಧಿ ವಸತಿ ಶಾಲೆಯಲ್ಲಿ ನಡೆದ ಔಷಧೀಯ ವನ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ರಾಪಂ ಅಭಿವೃದ್ಧಿ ಅಧಿಕಾರಿ ಗಣೇಶ ಶೆಟ್ಟಿ ಔಷಧೀಯ ವನ ಮತ್ತು ಉಚಿತ ಆರೋಗ್ಯ ತಪಾಸಣ ಶಿಬಿರ ಉದ್ಘಾಟಿಸಿದರು.
ಮುಖ್ಯ ಅತಿಥಿಯಾಗಿ ಪೆರಿಂಜೆ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕ ಸೀತಾರಾಮ ರೈ ಉಪಸ್ಥಿತರಿದ್ದರು.

ಶಾಲೆಯಲ್ಲಿ ನೆಟ್ಟು ಬೆಳೆಸಲು ಅಗತ್ಯವಾದ ತೆಂಗಿನ ಗಿಡ ಮತ್ತು ಬಾಳೆ ಗಿಡಗಳನ್ನು ಉಚಿತವಾಗಿ ಒದಗಿಸುವುದಾಗಿ ತಿಳಿಸಿದರು.
ಪ್ರಾಂಶುಪಾಲ ಶ್ರೀಧರ ಶೆಟ್ಟಿ ಶುಭ ಹಾರೈಸಿದರು. ಯೇನೆಪೊಯ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಮೆಡಿಕಲ್ ಕ್ಯಾಂಪ್, ಸಂಯೋಜಕ ರಜಾಕ್ ಉಪಸ್ಥಿತರಿದ್ದರು. ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಡಾ| ಆಶಾ ಮಾರಡ್ಕ ಪ್ರಾಸ್ತಾವಿಕವಾಗಿ ಮಾತನಾಡಿ, ಔಷಧೀಯ ಗಿಡಗಳನ್ನು ಪರಿಚಯಿಸಿ. ಅವುಗಳನ್ನು ಬೆಳಸುವ ವಿಧಾನವನ್ನು ತಿಳಿಸಿದರು.

ಶಿಕ್ಷಕಿಯರಾದ ವಿದ್ಯಲತಾ ಸ್ವಾಗತಿಸಿ, ಕುಮುಜಾಕ್ಷಿ ವಂದಿಸಿದರು. ಶಿಕ್ಷಕ ಸುಧೀ‌ರ್ ಬಾಳೆಪುಣಿ ನಿರ್ವಹಿಸಿದರು.

Related posts

ಕಡಿರುದ್ಯಾವರ ಗ್ರಾ.ಪಂ. ಹಾಗೂ ಶ್ರೀ ಕ್ಷೇ.ಧ.ಗ್ರಾ.ಯೋಜನೆ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡ ರುದ್ರಭೂಮಿ ಲೋಕಾರ್ಪಣೆ

Suddi Udaya

ಶಿಶಿಲ ಸ.ಉ.ಹಿ.ಪ್ರಾ. ಶಾಲೆಗೆ ಯೂತ್ ಫಾರ್ ಸೇವಾ ಎನ್.ಜಿ ಒ ಸಂಸ್ಥೆಯ ವತಿಯಿಂದ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಅಳವಡಿಕೆ

Suddi Udaya

ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಅಧ್ಯಕ್ಷ ಜಯೇಶ್ ಭೇಟಿ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿನಿಧಿಯಿಂದ ಪುಸ್ತಕ ವಿತರಣೆ

Suddi Udaya

ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಭೇಟಿ

Suddi Udaya
error: Content is protected !!