July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ: ಇಂದಿರಾ ‘ಗಾಂಧಿ ವಸತಿ ಶಾಲೆಯಲ್ಲಿ ಔಷಧೀಯ ವನ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಹೊಸಂಗಡಿ: ಶಾಲೆ ವಠಾರದಲ್ಲಿ ಔಷಧೀಯ ಗಿಡಗಳನ್ನು ನೆಟ್ಟು ಬೆಳೆಸಬೇಕು ಎಂದು ಯೇನಪೊಯ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ಲಕ್ಷ್ಮೀಶ ಉಪಾದ್ಯಾಯ ಹೇಳಿದ್ದಾರೆ.

ಹೊಸಂಗಡಿಯಲ್ಲಿರುವ ಇಂದಿರಾ ‘ಗಾಂಧಿ ವಸತಿ ಶಾಲೆಯಲ್ಲಿ ನಡೆದ ಔಷಧೀಯ ವನ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ರಾಪಂ ಅಭಿವೃದ್ಧಿ ಅಧಿಕಾರಿ ಗಣೇಶ ಶೆಟ್ಟಿ ಔಷಧೀಯ ವನ ಮತ್ತು ಉಚಿತ ಆರೋಗ್ಯ ತಪಾಸಣ ಶಿಬಿರ ಉದ್ಘಾಟಿಸಿದರು.
ಮುಖ್ಯ ಅತಿಥಿಯಾಗಿ ಪೆರಿಂಜೆ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕ ಸೀತಾರಾಮ ರೈ ಉಪಸ್ಥಿತರಿದ್ದರು.

ಶಾಲೆಯಲ್ಲಿ ನೆಟ್ಟು ಬೆಳೆಸಲು ಅಗತ್ಯವಾದ ತೆಂಗಿನ ಗಿಡ ಮತ್ತು ಬಾಳೆ ಗಿಡಗಳನ್ನು ಉಚಿತವಾಗಿ ಒದಗಿಸುವುದಾಗಿ ತಿಳಿಸಿದರು.
ಪ್ರಾಂಶುಪಾಲ ಶ್ರೀಧರ ಶೆಟ್ಟಿ ಶುಭ ಹಾರೈಸಿದರು. ಯೇನೆಪೊಯ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಮೆಡಿಕಲ್ ಕ್ಯಾಂಪ್, ಸಂಯೋಜಕ ರಜಾಕ್ ಉಪಸ್ಥಿತರಿದ್ದರು. ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಡಾ| ಆಶಾ ಮಾರಡ್ಕ ಪ್ರಾಸ್ತಾವಿಕವಾಗಿ ಮಾತನಾಡಿ, ಔಷಧೀಯ ಗಿಡಗಳನ್ನು ಪರಿಚಯಿಸಿ. ಅವುಗಳನ್ನು ಬೆಳಸುವ ವಿಧಾನವನ್ನು ತಿಳಿಸಿದರು.

ಶಿಕ್ಷಕಿಯರಾದ ವಿದ್ಯಲತಾ ಸ್ವಾಗತಿಸಿ, ಕುಮುಜಾಕ್ಷಿ ವಂದಿಸಿದರು. ಶಿಕ್ಷಕ ಸುಧೀ‌ರ್ ಬಾಳೆಪುಣಿ ನಿರ್ವಹಿಸಿದರು.

Related posts

ಕುಕ್ಕೇಡಿ ಸ್ಫೋಟ ಪ್ರಕರಣ: ಮೃತ ಕುಟುಂಬಕ್ಕೆ ಬೆಳ್ತಂಗಡಿ ಕೆಎಸ್ಎಂಸಿಎ ಯಿಂದ ಸಹಾಯ ಹಸ್ತ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಆಯುಷ್ಮಾನ್ ಭವ ಆರೋಗ್ಯ ಸೇವೆಗೆ ಚಾಲನೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನಿಂದ ಮಕ್ಕಳ ರಜಾ ಶಿಬಿರ 2025: ಮಕ್ಕಳಿಗೆ ಉಚಿತ ಪುಸ್ತಕ ವಿತರಣೆಯೊಂದಿಗೆ ಮಾಹಿತಿ ಕಾರ್ಯಕ್ರಮ

Suddi Udaya

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ವಾಣಿಜ್ಯ ಸಂಘ ಉದ್ಘಾಟನೆ ಹಾಗೂ ಸಿಎ ದಿನಾಚರಣೆ

Suddi Udaya

ಜ. 20 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಸಭಾಂಗಣದಲ್ಲಿ ಯುವ ನಿಧಿ ನೋಂದಣಿ ಶಿಬಿರ

Suddi Udaya

ಇಂದಬೆಟ್ಟು: ಅತಿಕ್ರಮಣ ತೆರವುಗೊಳಿಸಲು ತಹಶೀಲ್ದಾರ್ ಮಾಡಿದ ಪ್ರಕ್ರಿಯೆಯನ್ನು ರದ್ದುಗೊಳಿಸಿದ ಹೈಕೋರ್ಟು

Suddi Udaya
error: Content is protected !!