28.6 C
ಪುತ್ತೂರು, ಬೆಳ್ತಂಗಡಿ
March 31, 2025
ಜಿಲ್ಲಾ ಸುದ್ದಿತಾಲೂಕು ಸುದ್ದಿಪುತ್ತೂರುಪ್ರಮುಖ ಸುದ್ದಿ

ರೈತರಿಗೆ ಬೆಳೆ ವಿಮೆ ಪಾವತಿಸಲು ಜು.31 ಅಂತಿಮ ದಿನ

2023 -24 ನೇ ಸಾಲಿನ ಮರುವಿನ್ಯಾಸ ಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಅಡಿಕೆ ಹಾಗೂ ಕಾಳುಮೆಣಸು, ಬೆಳೆಗಳಿಗೆ ಬೆಳೆ ವಿಮೆ ಪಾವತಿಸಲು ದಕ್ಷಿಣ ಕನ್ನಡ ರೈತರಿಗೆ ಜು.31 ಪ್ರೀಮಿಯಂ ಪಾವತಿಸಲು ಅಂತಿಮ ದಿನವಾಗಿದೆ. ಈ ಕುರಿತ ಆದೇಶವನ್ನು ರಾಜ್ಯ ಸರಕಾರ ಜು.19 ರಂದು ಹೊರಡಿಸಿದೆ.

ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಕಾರ್ಯ ರೂಪಕ್ಕೆ ಬಂದು 5 ವರ್ಷಗಳು ಸಂದಿದ್ದು, ಇಷ್ಟೂ ವರ್ಷಗಳಲ್ಲಿ ಜೂನ್‌ ತಿಂಗಳ ಆರಂಭದ ದಿನದಿಂದ ಜೂನ್‌ ತಿಂಗಳ ಅಂತ್ಯದವರೆಗೆ ಪ್ರೀಮಿಯಂ ಪಾವತಿಗೆ ಕಲ್ಪಿಸಿ ಸರಕಾರ ಅಧಿಸೂಚನೆ ಹೊರಡಿಸಿತ್ತು. ಆದರೆ ಈ ಬಾರಿ ಜುಲೈ ತಿಂಗಳ ಮಧ್ಯ ಭಾಗದವರೆಗೆ ಸರಕಾರ ಯಾವುದೇ ಅಧಿಸೂಚನೆ ಹೊರಡಿಸಿರಲಿಲ್ಲ . ಆದರೆ ಜೂನ್‌ ತಿಂಗಳಿನಲ್ಲಿ ಭತ್ತದ ಬೆಳೆ ಫಸಲ್‌ ಭಿಮಾ ಯೋಜನೆಯಡಿ ವಿಮಾ ಕಂತು ಪಾವತಿಸಲು ಸರಕಾರ ಆದೇಶ ಹೊರಡಿಸಿತ್ತು. ಇದರಿಂದ ಸಹಜವಾಗಿಯೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗರಿಷ್ಟ ಪ್ರಮಾಣದಲ್ಲಿರುವ ಅಡಿಕೆ ಬೆಳೆಗಾರರು ಆತಂಕಗೊಂಡಿದ್ದರು.

ನಿನ್ನೆ ಸರಕಾರ ದಕ್ಷಿಣ ಕನ್ನಡ ಜಿಲ್ಲೆ ಸಂಬಂಧಿಸಿದಂತೆ ಅಡಿಕೆ ಮತ್ತು ಕಾಳು ಮೆಣಸನ್ನು ಬೆಳೆ ವಿಮೆ ಯೋಜನೆಯಡಿ ಸೇರಿಸಿ ಆದೇಶಿಸಿದೆ.

ಅಡಿಕೆಗೆ ಗರಿಷ್ಟ ವಿಮಾ ಮೊತ್ತ ಹೆಕ್ಟರಿಗೆ 128000 ಎಂದು ನಿಗದಿ ಪಡಿಸಲಾಗಿದ್ದು ಇದರಲ್ಲಿ ರೈತ ಪಾವತಿಸಬೇಕಾದ ಮೊತ್ತ ರೂ 6400 ಇನ್ನೂ ಕಾಳು ಮೆಣಸಿಗೆ ಹೆಕ್ಟರ್‌ ವೊಂದಕ್ಕೆ ಗರಿಷ್ಟ ಪ್ರೀಮಿಯಂ ಮೊತ್ತ 47000 ರೂಪಾಯಿ ಎಂದು ನಿಗದಿಪಡಿಸಲಾಗಿದ್ದು, ಅದರಲ್ಲಿ ರೈತ ಪಾವತಿಸಬೇಕಾದ ಮೊತ್ತ ರೂ 2350 ಆಗಿರುತ್ತದೆ.

Related posts

ವಿಧಾನಪರಿಷತ್ತು ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕವನ ವಾಚನ ಸ್ಪರ್ಧೆ : ಕು | ನಿತ್ಯಶ್ರೀ ಖಂಡಿಗ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಸುಲ್ಕೇರಿಮೊಗ್ರು ಶಾಲಾಭಿವೃದ್ಧಿ ಸಮಿತಿಯಿಂದ ಅಳದಂಗಡಿ ಗ್ರಾ.ಪಂ. ನ ನೂತನ ಅಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಮಾ.10: ಶಿರ್ಲಾಲು ಶ್ರೀ ಸತ್ಯಸಾರಮುಪ್ಪಣ್ಯ ದೈವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ ಕ್ರೀಡಾಕೂಟ

Suddi Udaya

ನೋಡಿ ತಿಳಿ, ಮಾಡಿ ಕಲಿ: ಧರ್ಮಸ್ಥಳದಲ್ಲಿ ಎಸ್.ಡಿ.ಎಂ. ಆಂ.ಮಾ. ಶಾಲೆಯಲ್ಲಿ ವಿಶಿಷ್ಠ ರೀತಿಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ರಾಜ ಕೇಸರಿ ಟ್ರಸ್ಟಿನ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!