30.7 C
ಪುತ್ತೂರು, ಬೆಳ್ತಂಗಡಿ
May 17, 2025
ಜಿಲ್ಲಾ ಸುದ್ದಿತಾಲೂಕು ಸುದ್ದಿಪುತ್ತೂರುಪ್ರಮುಖ ಸುದ್ದಿ

ರೈತರಿಗೆ ಬೆಳೆ ವಿಮೆ ಪಾವತಿಸಲು ಜು.31 ಅಂತಿಮ ದಿನ

2023 -24 ನೇ ಸಾಲಿನ ಮರುವಿನ್ಯಾಸ ಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಅಡಿಕೆ ಹಾಗೂ ಕಾಳುಮೆಣಸು, ಬೆಳೆಗಳಿಗೆ ಬೆಳೆ ವಿಮೆ ಪಾವತಿಸಲು ದಕ್ಷಿಣ ಕನ್ನಡ ರೈತರಿಗೆ ಜು.31 ಪ್ರೀಮಿಯಂ ಪಾವತಿಸಲು ಅಂತಿಮ ದಿನವಾಗಿದೆ. ಈ ಕುರಿತ ಆದೇಶವನ್ನು ರಾಜ್ಯ ಸರಕಾರ ಜು.19 ರಂದು ಹೊರಡಿಸಿದೆ.

ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಕಾರ್ಯ ರೂಪಕ್ಕೆ ಬಂದು 5 ವರ್ಷಗಳು ಸಂದಿದ್ದು, ಇಷ್ಟೂ ವರ್ಷಗಳಲ್ಲಿ ಜೂನ್‌ ತಿಂಗಳ ಆರಂಭದ ದಿನದಿಂದ ಜೂನ್‌ ತಿಂಗಳ ಅಂತ್ಯದವರೆಗೆ ಪ್ರೀಮಿಯಂ ಪಾವತಿಗೆ ಕಲ್ಪಿಸಿ ಸರಕಾರ ಅಧಿಸೂಚನೆ ಹೊರಡಿಸಿತ್ತು. ಆದರೆ ಈ ಬಾರಿ ಜುಲೈ ತಿಂಗಳ ಮಧ್ಯ ಭಾಗದವರೆಗೆ ಸರಕಾರ ಯಾವುದೇ ಅಧಿಸೂಚನೆ ಹೊರಡಿಸಿರಲಿಲ್ಲ . ಆದರೆ ಜೂನ್‌ ತಿಂಗಳಿನಲ್ಲಿ ಭತ್ತದ ಬೆಳೆ ಫಸಲ್‌ ಭಿಮಾ ಯೋಜನೆಯಡಿ ವಿಮಾ ಕಂತು ಪಾವತಿಸಲು ಸರಕಾರ ಆದೇಶ ಹೊರಡಿಸಿತ್ತು. ಇದರಿಂದ ಸಹಜವಾಗಿಯೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗರಿಷ್ಟ ಪ್ರಮಾಣದಲ್ಲಿರುವ ಅಡಿಕೆ ಬೆಳೆಗಾರರು ಆತಂಕಗೊಂಡಿದ್ದರು.

ನಿನ್ನೆ ಸರಕಾರ ದಕ್ಷಿಣ ಕನ್ನಡ ಜಿಲ್ಲೆ ಸಂಬಂಧಿಸಿದಂತೆ ಅಡಿಕೆ ಮತ್ತು ಕಾಳು ಮೆಣಸನ್ನು ಬೆಳೆ ವಿಮೆ ಯೋಜನೆಯಡಿ ಸೇರಿಸಿ ಆದೇಶಿಸಿದೆ.

ಅಡಿಕೆಗೆ ಗರಿಷ್ಟ ವಿಮಾ ಮೊತ್ತ ಹೆಕ್ಟರಿಗೆ 128000 ಎಂದು ನಿಗದಿ ಪಡಿಸಲಾಗಿದ್ದು ಇದರಲ್ಲಿ ರೈತ ಪಾವತಿಸಬೇಕಾದ ಮೊತ್ತ ರೂ 6400 ಇನ್ನೂ ಕಾಳು ಮೆಣಸಿಗೆ ಹೆಕ್ಟರ್‌ ವೊಂದಕ್ಕೆ ಗರಿಷ್ಟ ಪ್ರೀಮಿಯಂ ಮೊತ್ತ 47000 ರೂಪಾಯಿ ಎಂದು ನಿಗದಿಪಡಿಸಲಾಗಿದ್ದು, ಅದರಲ್ಲಿ ರೈತ ಪಾವತಿಸಬೇಕಾದ ಮೊತ್ತ ರೂ 2350 ಆಗಿರುತ್ತದೆ.

Related posts

ಬಳಂಜ: ಶ್ರೀಗುರುಪೂಜೆ ಪ್ರಯುಕ್ತ ಬಿಲ್ಲವ ಸಂಘದಿಂದ ಕ್ರೀಡಾಕೂಟ

Suddi Udaya

ಮಿತ್ತಬಾಗಿಲು ಸ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಸುದ್ದಿ ಉದಯ ಫಲಶ್ರುತಿ: ಮದ್ದಡ್ಕ ಪೇಟೆಯಲ್ಲಿ ಸರ್ವಿಸ್ ವಯಾರು ತೆರವುಗೊಳಿಸಿದ ಮೆಸ್ಕಾಂ ಇಲಾಖೆ

Suddi Udaya

ಸರಕಾರಿ ಸೌಲಭ್ಯ ವಂಚಿತ ಕೊಕ್ಕಡ ಮಹಾವೀರ ಕಾಲನಿ: ಗ್ರಾ.ಪಂ ಉಪಾಧ್ಯಕ್ಷ ಪ್ರಭಾಕರ ಗೌಡರಿಂದ ಸಚಿವರಿಗೆ ಮನವಿ

Suddi Udaya

ವಿಶ್ವಕರ್ಮ ಸಮಾಜದ ಮಹಿಳಾ ರಾಜ್ಯಾಧ್ಯಕ್ಷೆ ವಸಂತ ಮುರುಳಿ ಆಚಾರ್ಯ ಧರ್ಮಸ್ಥಳಕ್ಕೆ ಭೇಟಿ

Suddi Udaya

ಜಿಲ್ಲಾಮಟ್ಟದ ಜನಪದ ಗೀತ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya
error: Content is protected !!