22.6 C
ಪುತ್ತೂರು, ಬೆಳ್ತಂಗಡಿ
July 23, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿಪುತ್ತೂರುಪ್ರಮುಖ ಸುದ್ದಿ

ರೈತರಿಗೆ ಬೆಳೆ ವಿಮೆ ಪಾವತಿಸಲು ಜು.31 ಅಂತಿಮ ದಿನ

2023 -24 ನೇ ಸಾಲಿನ ಮರುವಿನ್ಯಾಸ ಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಅಡಿಕೆ ಹಾಗೂ ಕಾಳುಮೆಣಸು, ಬೆಳೆಗಳಿಗೆ ಬೆಳೆ ವಿಮೆ ಪಾವತಿಸಲು ದಕ್ಷಿಣ ಕನ್ನಡ ರೈತರಿಗೆ ಜು.31 ಪ್ರೀಮಿಯಂ ಪಾವತಿಸಲು ಅಂತಿಮ ದಿನವಾಗಿದೆ. ಈ ಕುರಿತ ಆದೇಶವನ್ನು ರಾಜ್ಯ ಸರಕಾರ ಜು.19 ರಂದು ಹೊರಡಿಸಿದೆ.

ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಕಾರ್ಯ ರೂಪಕ್ಕೆ ಬಂದು 5 ವರ್ಷಗಳು ಸಂದಿದ್ದು, ಇಷ್ಟೂ ವರ್ಷಗಳಲ್ಲಿ ಜೂನ್‌ ತಿಂಗಳ ಆರಂಭದ ದಿನದಿಂದ ಜೂನ್‌ ತಿಂಗಳ ಅಂತ್ಯದವರೆಗೆ ಪ್ರೀಮಿಯಂ ಪಾವತಿಗೆ ಕಲ್ಪಿಸಿ ಸರಕಾರ ಅಧಿಸೂಚನೆ ಹೊರಡಿಸಿತ್ತು. ಆದರೆ ಈ ಬಾರಿ ಜುಲೈ ತಿಂಗಳ ಮಧ್ಯ ಭಾಗದವರೆಗೆ ಸರಕಾರ ಯಾವುದೇ ಅಧಿಸೂಚನೆ ಹೊರಡಿಸಿರಲಿಲ್ಲ . ಆದರೆ ಜೂನ್‌ ತಿಂಗಳಿನಲ್ಲಿ ಭತ್ತದ ಬೆಳೆ ಫಸಲ್‌ ಭಿಮಾ ಯೋಜನೆಯಡಿ ವಿಮಾ ಕಂತು ಪಾವತಿಸಲು ಸರಕಾರ ಆದೇಶ ಹೊರಡಿಸಿತ್ತು. ಇದರಿಂದ ಸಹಜವಾಗಿಯೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗರಿಷ್ಟ ಪ್ರಮಾಣದಲ್ಲಿರುವ ಅಡಿಕೆ ಬೆಳೆಗಾರರು ಆತಂಕಗೊಂಡಿದ್ದರು.

ನಿನ್ನೆ ಸರಕಾರ ದಕ್ಷಿಣ ಕನ್ನಡ ಜಿಲ್ಲೆ ಸಂಬಂಧಿಸಿದಂತೆ ಅಡಿಕೆ ಮತ್ತು ಕಾಳು ಮೆಣಸನ್ನು ಬೆಳೆ ವಿಮೆ ಯೋಜನೆಯಡಿ ಸೇರಿಸಿ ಆದೇಶಿಸಿದೆ.

ಅಡಿಕೆಗೆ ಗರಿಷ್ಟ ವಿಮಾ ಮೊತ್ತ ಹೆಕ್ಟರಿಗೆ 128000 ಎಂದು ನಿಗದಿ ಪಡಿಸಲಾಗಿದ್ದು ಇದರಲ್ಲಿ ರೈತ ಪಾವತಿಸಬೇಕಾದ ಮೊತ್ತ ರೂ 6400 ಇನ್ನೂ ಕಾಳು ಮೆಣಸಿಗೆ ಹೆಕ್ಟರ್‌ ವೊಂದಕ್ಕೆ ಗರಿಷ್ಟ ಪ್ರೀಮಿಯಂ ಮೊತ್ತ 47000 ರೂಪಾಯಿ ಎಂದು ನಿಗದಿಪಡಿಸಲಾಗಿದ್ದು, ಅದರಲ್ಲಿ ರೈತ ಪಾವತಿಸಬೇಕಾದ ಮೊತ್ತ ರೂ 2350 ಆಗಿರುತ್ತದೆ.

Related posts

ಅನುಗ್ರಹ ಟ್ರೈನಿಂಗ್ ಕಾಲೇಜು ಫೈರ್ ಅಂಡ್ ಸೇಫ್ಟಿ ವಿಭಾಗದ ವಿದ್ಯಾರ್ಥಿಗಳಿಂದ ಅಗ್ನಿಶಾಮಕ ಘಟಕಕ್ಕೆ ಶೈಕ್ಷಣಿಕ ಭೇಟಿ

Suddi Udaya

ನಿಡ್ಲೆ : ಕುದ್ರಾಯ ಓಡದಕೊಟ್ಯದಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಜೂ. 23ರಂದು ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳ ಮುಂದೆ ಪ್ರತಿಭಟನೆ

Suddi Udaya

ಧಾರಾಕಾರವಾಗಿ ಸುರಿದ ಗಾಳಿ ಮಳೆ: ಮೇಲಂತಬೆಟ್ಟು ಕೆಲವು ಮನೆಗಳ ಮೇಲ್ಛಾವಣಿ ಕುಸಿತ

Suddi Udaya

ಮರೋಡಿಯಲ್ಲಿ ಪ್ರಕಾಶಮಾನವಾಗಿ ಕಂಗೊಳಿಸುತ್ತಿರುವ ಕೂಕ್ರಬೆಟ್ಟು ಸರಕಾರಿ ಶಾಲೆ: ರೂ.1.10 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಶಾಲಾ ಕಟ್ಟಡ, ರಾಷ್ಟ್ರ ಧ್ವಜ ಕಟ್ಟೆ ಉದ್ಘಾಟನೆ,

Suddi Udaya

ಅಳದಂಗಡಿ ಒಕ್ಕೂಟದ ಪದಾಧಿಕಾರಿಗಳ ಸಭೆ

Suddi Udaya
error: Content is protected !!