25.5 C
ಪುತ್ತೂರು, ಬೆಳ್ತಂಗಡಿ
April 24, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿಪುತ್ತೂರುಪ್ರಮುಖ ಸುದ್ದಿ

ರೈತರಿಗೆ ಬೆಳೆ ವಿಮೆ ಪಾವತಿಸಲು ಜು.31 ಅಂತಿಮ ದಿನ

2023 -24 ನೇ ಸಾಲಿನ ಮರುವಿನ್ಯಾಸ ಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಅಡಿಕೆ ಹಾಗೂ ಕಾಳುಮೆಣಸು, ಬೆಳೆಗಳಿಗೆ ಬೆಳೆ ವಿಮೆ ಪಾವತಿಸಲು ದಕ್ಷಿಣ ಕನ್ನಡ ರೈತರಿಗೆ ಜು.31 ಪ್ರೀಮಿಯಂ ಪಾವತಿಸಲು ಅಂತಿಮ ದಿನವಾಗಿದೆ. ಈ ಕುರಿತ ಆದೇಶವನ್ನು ರಾಜ್ಯ ಸರಕಾರ ಜು.19 ರಂದು ಹೊರಡಿಸಿದೆ.

ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಕಾರ್ಯ ರೂಪಕ್ಕೆ ಬಂದು 5 ವರ್ಷಗಳು ಸಂದಿದ್ದು, ಇಷ್ಟೂ ವರ್ಷಗಳಲ್ಲಿ ಜೂನ್‌ ತಿಂಗಳ ಆರಂಭದ ದಿನದಿಂದ ಜೂನ್‌ ತಿಂಗಳ ಅಂತ್ಯದವರೆಗೆ ಪ್ರೀಮಿಯಂ ಪಾವತಿಗೆ ಕಲ್ಪಿಸಿ ಸರಕಾರ ಅಧಿಸೂಚನೆ ಹೊರಡಿಸಿತ್ತು. ಆದರೆ ಈ ಬಾರಿ ಜುಲೈ ತಿಂಗಳ ಮಧ್ಯ ಭಾಗದವರೆಗೆ ಸರಕಾರ ಯಾವುದೇ ಅಧಿಸೂಚನೆ ಹೊರಡಿಸಿರಲಿಲ್ಲ . ಆದರೆ ಜೂನ್‌ ತಿಂಗಳಿನಲ್ಲಿ ಭತ್ತದ ಬೆಳೆ ಫಸಲ್‌ ಭಿಮಾ ಯೋಜನೆಯಡಿ ವಿಮಾ ಕಂತು ಪಾವತಿಸಲು ಸರಕಾರ ಆದೇಶ ಹೊರಡಿಸಿತ್ತು. ಇದರಿಂದ ಸಹಜವಾಗಿಯೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗರಿಷ್ಟ ಪ್ರಮಾಣದಲ್ಲಿರುವ ಅಡಿಕೆ ಬೆಳೆಗಾರರು ಆತಂಕಗೊಂಡಿದ್ದರು.

ನಿನ್ನೆ ಸರಕಾರ ದಕ್ಷಿಣ ಕನ್ನಡ ಜಿಲ್ಲೆ ಸಂಬಂಧಿಸಿದಂತೆ ಅಡಿಕೆ ಮತ್ತು ಕಾಳು ಮೆಣಸನ್ನು ಬೆಳೆ ವಿಮೆ ಯೋಜನೆಯಡಿ ಸೇರಿಸಿ ಆದೇಶಿಸಿದೆ.

ಅಡಿಕೆಗೆ ಗರಿಷ್ಟ ವಿಮಾ ಮೊತ್ತ ಹೆಕ್ಟರಿಗೆ 128000 ಎಂದು ನಿಗದಿ ಪಡಿಸಲಾಗಿದ್ದು ಇದರಲ್ಲಿ ರೈತ ಪಾವತಿಸಬೇಕಾದ ಮೊತ್ತ ರೂ 6400 ಇನ್ನೂ ಕಾಳು ಮೆಣಸಿಗೆ ಹೆಕ್ಟರ್‌ ವೊಂದಕ್ಕೆ ಗರಿಷ್ಟ ಪ್ರೀಮಿಯಂ ಮೊತ್ತ 47000 ರೂಪಾಯಿ ಎಂದು ನಿಗದಿಪಡಿಸಲಾಗಿದ್ದು, ಅದರಲ್ಲಿ ರೈತ ಪಾವತಿಸಬೇಕಾದ ಮೊತ್ತ ರೂ 2350 ಆಗಿರುತ್ತದೆ.

Related posts

ಬೆಳ್ತಂಗಡಿ ಫೆಡರೇಷನ್ ಆಫ್ ಕರ್ನಾಟಕ ಆಟೋ ಡ್ರೈವರ್ಸ್ ಯೂನಿಯನ್ ವತಿಯಿಂದ ಬಿ.ಜಿ ಆಟೋ ಡ್ರೈವರ್ಸ್ ಯೂನಿಯನ್ ಮಹಾಸಭೆ,

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ “ಸುವರ್ಣ ಸಮ್ಮಿಲನ”: ಮೋಹನ್ ಕುಮಾರ್ ಹಾಗೂ ರವಿ ಕಟಪಾಡಿ ಯವರಿಗೆ ಸುವರ್ಣ ಸೇವಾ ರತ್ನ ಪ್ರಶಸ್ತಿ ಪ್ರದಾನ: ಸೇವಾ ಪಥ ಸ್ಮರಣ ಸಂಚಿಕೆ ಬಿಡುಗಡೆ

Suddi Udaya

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಮಡoತ್ಯಾರು ನೇಸರ ಸಂಜೀವಿನಿ ಮಹಿಳಾ ಒಕ್ಕೂಟ ಮಹಾಸಭೆ

Suddi Udaya

ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತ ದಿನೇಶ್ ನಾಯ್ಕ ನಿಂತಿಕಲ್ಲು ಭಾರತೀಯ ಜನತಾ ಪಾರ್ಟಿ ಸಿದ್ಧಾಂತ ಒಪ್ಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಪುದುವೆಟ್ಟು : ಸ್ವರಾಜ್ ನೇಣುಬಿಗಿದು ಆತ್ಮಹತ್ಯೆ

Suddi Udaya
error: Content is protected !!