25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ. ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಜರುಗಿತು, ಸಂಪನ್ಮೂಲ ವ್ಯಕ್ತಿಯಾಗಿ ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯ ಶಿಕ್ಷಕ ಬಿ ಸೋಮಶೇಖರ ಶೆಟ್ಟಿ ಯವರು ಅನೇಕ ಉದಾಹರಣೆ, ಕಥೆಗಳ ಮೂಲಕ ದುಶ್ಚಟಗಳಿಗೆ ಬಲಿ ಬೀಳದಂತೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಶಿಕ್ಷಣವೆಂದರೆ ಅಂಕ,ಸರ್ಟಿಫಿಕೇಟ್ ಮಾತ್ರವಲ್ಲ. ಅದು ವ್ಯಕ್ತಿಯ ನಡವಳಿಕೆಯಿಂದ ವ್ಯಕ್ತವಾಗಬೇಕು.


ಶಿಸ್ತು, ಶಿಕ್ಷಣದ ಅವಿಭಾಜ್ಯ ಅಂಗ . ಮನುಷ್ಯನ ಯಶಸ್ಸು ಆತನ ಆತ್ಮವಿಶ್ವಾಸವನ್ನು ಅವಲಂಬಿಸಿದೆ. ಎಲ್ಲಕ್ಕಿಂತ ಕಠಿಣವಾದದ್ದು ಸ್ವಯಂ ಬದಲಾವಣೆ. ಕ್ಷಣಿಕ ಸುಖಕಾಗಿ ಶಾಶ್ವತ ಸುಖವನ್ನು ನಾಶ ಮಾಡಿಕೊಳ್ಳಬೇಡಿ.ಉತ್ತಮ ಜೀವನ ಕೌಶಲ್ಯ ಹಾಗೂ ಜೀವನ ಮೌಲ್ಯಗಳನ್ನು ರೂಡಿಸಿಕೊಳ್ಳುವಂತೆ ವಿವರಿಸಿ ತಿಳಿಸಿದರು.


ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ವಿಭಾಗದ ಮುಖ್ಯಸ್ಥೆ ಯಾಗಿರುವ ಶ್ರೀಮತಿ ಮೇರಿಸ್ಮಿತ ವಹಿಸಿದ್ದರು. ಎಲೆಕ್ಟ್ರಾನಿಕ್ & ಕಮ್ಯುನಿಕೇಶನ್ ವಿಭಾಗದ ನಿಖಿತ್ ಡಿ ಆರ್ ನಿರೂಪಿಸಿ ನೆರವೇರಿಸಿದರು.

Related posts

ನಡ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ 12 ಕ್ಷೇತ್ರಗಳಲ್ಲೂ ಜಯಭೇರಿ, 1 ಕ್ಷೇತ್ರಕ್ಕೆ ಅವಿರೋಧ ಆಯ್ಕೆ

Suddi Udaya

ಎ.16-19: ಪುತ್ತೂರು-‘ಸುಬ್ಬಜ್ಜನ ಮನೆಯಲ್ಲಿ ವಸತಿಯುತ ಬೇಸಿಗೆ ಶಿಬಿರ’

Suddi Udaya

ಉಜಿರೆ ಶ್ರೀ ಧ.ಮಂ. ಸ್ವಾಯತ್ತ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥ ಹಾಗೂ ಕಲಾನಿಕಾಯದ ಡೀನ್ ಡಾ. ಶ್ರೀಧರ ಭಟ್ಟ ರವರಿಗೆ ಪ್ರಾಧ್ಯಾಪಕರಾಗಿ ವೃತ್ತಿ ಪದೋನ್ನತಿ

Suddi Udaya

ಶಿಬಾಜೆ ಭಂಡಿಹೊಳೆಯಲ್ಲಿ ಪ್ರಕೃತಿ ಪ್ರಿಯರಿಂದ ರಸ್ತೆ ಸ್ವಚ್ಛತಾ ಅಭಿಯಾನ

Suddi Udaya

ಘಾಟಿ ಪ್ರದೇಶದಲ್ಲಿ ಭಾರಿ ಮಳೆ ; ದಿಡುಪೆಯ ಹೊಳೆಗಳಲ್ಲಿ ನೀರಿನ ಆರ್ಭಟ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ವತಿಯಿಂದ ದೇಶಭಕ್ತಿ ಗೀತ ಗಾಯನ ಹಾಗೂ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ ಜನಪದ ಗೀತ ಗಾಯನ ಸ್ಪರ್ಧಾ ಕಾರ್ಯಕ್ರಮ

Suddi Udaya
error: Content is protected !!