March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಪ್ರಕರಣವನ್ನು ಮರು ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಈ ಮನವಿಯನ್ನು ಸಲ್ಲಿಸಿರುವ ಶಾಸಕರು, 2012 ಅಕ್ಟೋಬರ್ 9ರಂದುರಂದು ಬೆಳ್ತಂಗಡಿ ತಾಲೂಕಿನ ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಸೌಜನ್ಯ ಅತ್ಯಾಚಾರಕ್ಕೀಡಾಗಿ ಕೊಲೆಯಾಗಿದ್ದು ಅದರ ವಿಚಾರವಾಗಿ ಅದಕ್ಕೆ ಸಂಬಂಧಿಸಿದಂತೆ ಹಲವಾರು ಇಲಾಖೆಗಳಿಂದ ತನಿಖೆ ನಡೆದು ನಂತರ ತಮ್ಮ ನೇತೃತ್ವದ ಘನ ಸರ್ಕಾರ 2013 ರಲ್ಲಿ ಈ ಪ್ರಕರಣವನ್ನು ಸಿ.ಬಿ.ಐ. ಗೆ ಒಪ್ಪಿಸಿತ್ತು. ಅಲ್ಲಿಂದ 2023 ರವರೆಗೂ ನಡೆದ ಸಿ.ಬಿ.ಐ, ತನಿಖೆಯಲ್ಲಿ ಶಂಕಿತ ಆರೋಪಿಯನ್ನು ದೋಷಮುಕ್ತಗೊಳಿಸಿ ನ್ಯಾಯಾಲಯವು ಆದೇಶ ನೀಡಿದೆ.

ಈ ತನಿಖೆಯ ಫಲಶೃತಿಯ ಬಗ್ಗೆ ಅಪರಾಧಿಗಳನ್ನು ಕಾನೂನಿನ ಚೌಕಟ್ಟನೊಳಗೆ ತಂದು ಶಿಕ್ಷೆ ನೀಡಲು ಆಡಳತ ವ್ಯವಸ್ಥೆ ವಿಫಲವಾಗಿದೆ ಎಂಬ ದುಗುಡ ಬೆಳ್ತಂಗಡಿ ತಾಲ್ಲೂಕಿನ ನಾಗರೀಕ ಬಂಧುಗಳದ್ದಾಗಿದೆ. ಆದ್ದರಿಂದ ನಾಗರಿಕರ ಭಾವನೆಗಳನ್ನು ಗಂಭೀರವಾಗಿ ಪರಿಗಣಿಸಿ, ಸರ್ಕಾರವು ಕುಮಾರಿ ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರುತನಿಖೆಗೆ ಒಳಪಡಿಸಿ ಮೃತ ಸಹೋದರಿ ಸೌಜನ್ಯಳಗೆ ಮತ್ತು ಮೃತಳ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕನ ನೆಲೆಯಲ್ಲ ಹಾಗೂ ವೈಯಕ್ತಿಕವಾಗಿ ಆಗ್ರಹಿಸುವುದಾಗಿ ಮನವಿಯಲ್ಲಿ ತಿಳಿಸಿದ್ದಾರೆ.

ಮನವಿ ನೀಡುವ ಸಂದರ್ಭದಲ್ಲಿ ‌ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ಉಪಸ್ಥಿತರಿದ್ದರು.

Related posts

ಹದಗೆಟ್ಟ ಬಳ್ಳಮಂಜ ರಸ್ತೆ: ದುರಸ್ತಿಗೊಳಿಸುವಂತೆ ಮಡಂತ್ಯಾರು ಆಟೋ ಚಾಲಕ ಮಾಲಕರ ಸಂಘದಿಂದ ಒತ್ತಾಯ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆರ್ಥಿಕ ಸಾಕ್ಷರತೆ ಕಾರ್ಯಕ್ರಮ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ

Suddi Udaya

ಉಜಿರೆ : ಅತ್ತಾಜೆಯಲ್ಲಿರುವ ಎಮ್. ಆರ್. ಎಫ್ ಘಟಕದಲ್ಲಿ ಒಣ ಕಸ ವಿಲೇವಾರಿ ಕುರಿತು ಅರಸಿನಮಕ್ಕಿ, ಶಿಬಾಜೆ ಗ್ರಾಮ ಪಂಚಾಯತ್ ನಲ್ಲಿ ಮಾಹಿತಿ ಕಾರ್ಯ

Suddi Udaya

ಪಂಚಾಯಿತಿ ಪಂಪ್ ಶೆಡ್ ಗೆ ಕಿಡಿಗೇಡಿಗಳಿಂದ ಹಾನಿ

Suddi Udaya

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕೆ

Suddi Udaya
error: Content is protected !!