September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿ ಸಭೆ

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ ಗೆಜ್ಜೆಗಿರಿ ಇದರ ಮಾಸಿಕ ಸಭೆಯು ಗೆಜ್ಜೆ ಗಿರಿಯಲ್ಲಿ ಜು.20 ರಂದು ಜರಗಿತು.

ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್ ರವರು ಸ್ವಾಗತಿಸಿ ವರದಿ ವಾಚಿಸಿದರು. ಸಭೆಯಲ್ಲಿ ಶ್ರೀ ಕ್ಷೇತ್ರದ ಲೆಕ್ಕಪತ್ರವನ್ನು ಕೋಶಾಧಿಕಾರಿ ದೀಪಕ್ ಕೋಟ್ಯಾನ್ ಮಂಡಿಸಿದರು. ಕ್ಷೇತ್ರದ ಸಮಗ್ರ ಅಭಿವೃದ್ಧಿ ಚಟುವಟಿಕೆಗಳ ಬಗ್ಗೆ ವಿವರವಾಗಿ ಚರ್ಚಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಪೀತಾಂಬರ ಹೇರಾಜೆ ಅವರು ವಹಿಸಿ ಕ್ಷೇತ್ರದ ಅಭಿವೃದ್ಧಿಗೆ ಸರ್ವರ ಸಹಕಾರವನ್ನು ಕೋರಿದರು.

ಸಭೆಯಲ್ಲಿ ಕ್ಷೇತ್ರಾಡಳಿತ ಸಮಿತಿಯ ಗೌರವ್ಯಾಧ್ಯಕ್ಷರುಗಳಾದ ರಾಜಶೇಖರ್ ಕೋಟ್ಯಾನ್ ಮತ್ತು ಜಯಂತ ನಡು ಬೈಲು, ಉಪಾಧ್ಯಕ್ಷರುಳಾದ ರವಿ ಪೂಜಾರಿ ಚಿಲಿಂಬಿ ಮತ್ತು ನಿತ್ಯಾನಂದ ಕೋಟ್ಯಾನ್ ಮುಂಬೈ, ಜೊತೆ ಕಾರ್ಯದರ್ಶಿ ಚಂದ್ರಶೇಖರ ಉಚ್ಚಿಲ್, ಶೈಲೇಂದ್ರ ಸುವರ್ಣ ಎಸ್.ಆರ್.ಆರ್, ಡಿ ಆರ್ ರಾಜು ಪೂಜಾರಿ, ನವೀನ್ ಸುವರ್ಣ ಸಜಿಪ, ದಿನೇಶ್ ಅಮೀನ್ ಕುಂದಾಪುರ, ಹರಿಶ್ಚಂದ್ರ ಅಮೀನ್ ಕಟಪಾಡಿ, ಡಾ. ರಾಜಾರಾಮ್, ಅನುವಂಶಿಕ ಮುಕ್ತೇಸರ ಶ್ರೀಧರ ಪೂಜಾರಿ, ಮುಂಬೈಯಿಂದ ಸೂರ್ಯಕಾಂತ್ ಸುವರ್ಣ, ದಯಾನಂದ ಕಲ್ಯಾ, ಗೋವಾದ ಚಂದ್ರಹಾಸ್ ಅಮೀನ್, ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷರಾದ ಸತೀಶ್ ಕುಮಾರ್ ಕೆಡೆಂಜಿ,ಕಾನೂನು ಸಲಹೆ ಗಾರ ನವನೀತ್ ಹಿಂಗಾಣಿ, ಕ್ಷೇತ್ರದ ವಕ್ತಾರ ರಾಜೇಂದ್ರ ಚೆಲಿಂಬಿ, ಆಂತರಿಕ ಲೆಕ್ಕ ಪರಿಶೋಧಕ ಶೇಖರ ಬಂಗೇರ, ಜಯರಾಮ ಬಂಗೇರ, ಉದ್ಯಮಿ ಗೋಪಾಲ ಬಂಗೇರ ಉಡುಪಿ, ಸುರೇಶ್ ಕೋಟ್ಯಾನ್ ಮೂಡಬಿದ್ರೆ, ಕುಮಾರ್ ಇರುವೈಲ್,. ಹಿತೇಶ್ ಸಾವ್ಯ,. ಮುಂತಾದವರು ಉಪಸ್ಥಿತರಿದ್ದರು.

Related posts

ಪೆರಿಂಜೆಯಲ್ಲಿ ಶ್ರೀ ಧ.ಮಂ.ಪ್ರೌ.ಶಾಲೆಯ ಎನ್ನೆನ್ನೆಸ್ ವಾರ್ಷಿಕ ಶಿಬಿರದ ಶಿಬಿರಜ್ಯೋತಿ

Suddi Udaya

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಡಿ.17 : ಬೆಳ್ತಂಗಡಿ ತಾಲೂಕಿನ 18ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸುವರ್ಣ “ಕರ್ನಾಟಕ: ಭಾಷೆ ಸಾಹಿತ್ಯ ಸಂಸ್ಕೃತಿ” ಆಶಯದ ಹಿನ್ನೆಲೆಯಲ್ಲಿ ಸಮ್ಮೇಳನದ ರೂಪುರೇಷೆ: ಜ್ಞಾನಪೀಠ ಪುರಸ್ಕೃತರಾಗಿರುವ ಎಂಟು ಮಂದಿ ಸಾಹಿತ್ಯ ಲೋಕದ ದಿಗ್ಗಜರ ನೆನಪು

Suddi Udaya

ಕೊಕ್ಕಡ: ನೂತನ ಶ್ರೀ ಲಕ್ಷ್ಮೀ ಅಲ್ಯೂಮಿನಿಯಂ ಫ್ಯಾಬ್ರಿಕೇಷನ್ ಉದ್ಘಾಟನೆ

Suddi Udaya

ನಕ್ಸಲ್ ನಾಯಕ ರೂಪೇಶ್ ಪೊಲೀಸ್ ಕಸ್ಟಡಿ ಅಂತ್ಯ ಬೆಳ್ತಂಗಡಿ ನ್ಯಾಯಾಲಯಗೆ ಹಾಜರುಪಡಿಸಿ ಮತ್ತೆ ಕೇರಳ ಜೈಲಿಗೆ

Suddi Udaya

ಧರ್ಮಸ್ಥಳ ಮೇಳದ ತಿರುಗಾಟ ಪ್ರಾರಂಭ

Suddi Udaya
error: Content is protected !!