24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸರಕಾರಿ ಪ್ರೌಢ ಶಾಲೆಯಲ್ಲಿ ‘ಗಣಿತ ಸಂಘದ ಉದ್ಘಾಟನೆ’

ನಡ : ಸರಕಾರಿ ಪ್ರೌಢಶಾಲೆ ನಡ ಇಲ್ಲಿ 2013 – 24 ನೇ ಸಾಲಿನ ಗಣಿತ ಸಂಘದ ಉದ್ಘಾಟನೆಯನ್ನು ಜು. 22 ರಂದು ನಡೆಸಲಾಯಿತು.
ಉದ್ಘಾಟನೆ ನೆರವೇರಿಸಿ ಮಾತನಾಡಿದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಗಣಿತ ಶಿಕ್ಷಕರೂ ಆಗಿರುವ ಮುಖ್ಯ ಶಿಕ್ಷಕ ಯಾಕೂಬ್ ಎಸ್ ಇವರು ಈ ದಿನ ಜುಲಾಯಿ 22 ಪೈ ಬೆಲೆಯನ್ನು ಪ್ರತಿನಿಧಿಸುತ್ತದೆ. ಪೈ ಬೆಲೆ 22/ 7 ಆಗಿರುವುದರಿಂದ ಜು. 22 ರ ಈ ದಿನಕ್ಕೆ ಗಣಿತದಲ್ಲಿ ಮಹತ್ವವಿದೆ. ಆದ್ದರಿಂದ ಈ ದಿನ ಗಣಿತ ಸಂಘದ ಉದ್ಘಾಟನೆ ಮಾಡಿರುವುದು ಅರ್ಥಪೂರ್ಣವಾಗಿದೆ ಎಂದರು.


ನಡ ಸರಕಾರಿ ಪ್ರೌಢಶಾಲೆಯು ಈಗಾಗಲೇ ಗಣಿತಕ್ಕೆ ತನ್ನದೇ ಆದ ವಿಶಿಷ್ಠ ಕೊಡುಗೆ ನೀಡಿರುತ್ತದೆ. ಗಣಿತ ಪ್ರಯೋಗಾಲಯದ ಮೂಲಕ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿರುವ ಈ ಪ್ರೌಢಶಾಲೆಯು ವಿದ್ಯಾಥಿಗಳಿಗೆ ಅತೀ ಕ್ಲಿಷ್ಟವಾಗಿರುವ ಗಣಿತವನ್ನು ಸರಳಗೊಳಿಸಲು ಅನೇಕ ಯೋಜನೆಗಳನ್ನು ಹಮ್ಮಿಕೊಳ್ಳುತ್ತಿದೆ.


ಗಣಿತ ಸಂಘದ ಮೂಲಕ ಮಗ್ಗಿ ಕಂಠಪಾಠ, ಗಣಿತ ಸೂತ್ರ ಬರೆಯುವುದು, ಮಾದರಿ ತಯಾರಿಕೆ, ಗಣಿತಜ್ಞರ ಪರಿಚಯ, ಗಣಿತ ವಸ್ತು ಪ್ರದರ್ಶನ ಮುಂತಾದ ಕಾರ್ಯಕ್ರಮವನ್ನು ವರ್ಷಪೂರ್ತಿ ಹಮ್ಮಿಕೊಂಡಿದೆ.
ಇಂದು ನಡೆದ ಉದ್ಘಾಟನಾ ಸಮಾರಂಭದಲ್ಲಿ ಗಣಿತಕ್ಕೆ ಸಂಬಂಧಿಸಿದ ವಿವಿಧ ಚಟುವಟಿಕೆಗಳನ್ನು ನಡೆಸಲಾಯಿತು. ಗಣಿತ ಸಂಘದ ಅಧ್ಯಕ್ಷೆ ಕು. ಸಾನ್ವಿ ಹಾಗೂ ಕಾರ್ಯದರ್ಶಿ ಕು. ರಝ್ಮಿ ನಾ ಫಾತಿಮಾ ಗಣಿತ ಸಂಘದ ಚಟುವಟಿಕೆಗಳನ್ನು ರೂಪಿಸಿದ್ದು, ಇಂದಿನ ಕಾಯ೯ಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದರು.

Related posts

ಕೃಷಿ ಕ್ಷೇತ್ರ ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ವಿಶೇಷ ಸಾಧನೆ : ನಿವೃತ್ತ ಯೋಧ ಉಜಿರೆಯ ಗೋಪಾಲಕೃಷ್ಣ ಕಾಂಚೋಡು ಅವರಿಗೆ ಗೌರವ ಡಾಕ್ಟರೇಟ್ ಪದವಿ

Suddi Udaya

ಉಜಿರೆ: ಮಾಚಾರು ನಿವಾಸಿ ಕೃಷ್ಣ ಬೊಳ್ಮಿಣ್ಣಾಯ ನಿಧನ

Suddi Udaya

ಭರತನಾಟ್ಯ ವಿದ್ವತ್ ಪೂರ್ವ ದರ್ಜೆ ಪರೀಕ್ಷೆ: ಪುಂಜಾಲಕಟ್ಟೆಯ ಪಿ. ಬಿ ವೈಷ್ಣವಿ ಡಿಸ್ಟಿಂಕ್ಷನಲ್ಲಿ ತೇರ್ಗಡೆ

Suddi Udaya

ಓಡಿಲ್ನಾಳ ನಿವಾಸಿ ಲಕ್ಷ್ಮಿ ನಿಧನ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಮೇಲಂತಬೆಟ್ಟು ಗ್ರಾ.ಪಂ. ಸಹಭಾಗಿತ್ವದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ ಮತ್ತು ವನಮಹೋತ್ಸವ ದಿನಾಚರಣೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶದ ಪೂರ್ವಭಾವಿ ಸಭೆ

Suddi Udaya
error: Content is protected !!