July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸರಕಾರಿ ಪ್ರೌಢ ಶಾಲೆಯಲ್ಲಿ ‘ಗಣಿತ ಸಂಘದ ಉದ್ಘಾಟನೆ’

ನಡ : ಸರಕಾರಿ ಪ್ರೌಢಶಾಲೆ ನಡ ಇಲ್ಲಿ 2013 – 24 ನೇ ಸಾಲಿನ ಗಣಿತ ಸಂಘದ ಉದ್ಘಾಟನೆಯನ್ನು ಜು. 22 ರಂದು ನಡೆಸಲಾಯಿತು.
ಉದ್ಘಾಟನೆ ನೆರವೇರಿಸಿ ಮಾತನಾಡಿದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಗಣಿತ ಶಿಕ್ಷಕರೂ ಆಗಿರುವ ಮುಖ್ಯ ಶಿಕ್ಷಕ ಯಾಕೂಬ್ ಎಸ್ ಇವರು ಈ ದಿನ ಜುಲಾಯಿ 22 ಪೈ ಬೆಲೆಯನ್ನು ಪ್ರತಿನಿಧಿಸುತ್ತದೆ. ಪೈ ಬೆಲೆ 22/ 7 ಆಗಿರುವುದರಿಂದ ಜು. 22 ರ ಈ ದಿನಕ್ಕೆ ಗಣಿತದಲ್ಲಿ ಮಹತ್ವವಿದೆ. ಆದ್ದರಿಂದ ಈ ದಿನ ಗಣಿತ ಸಂಘದ ಉದ್ಘಾಟನೆ ಮಾಡಿರುವುದು ಅರ್ಥಪೂರ್ಣವಾಗಿದೆ ಎಂದರು.


ನಡ ಸರಕಾರಿ ಪ್ರೌಢಶಾಲೆಯು ಈಗಾಗಲೇ ಗಣಿತಕ್ಕೆ ತನ್ನದೇ ಆದ ವಿಶಿಷ್ಠ ಕೊಡುಗೆ ನೀಡಿರುತ್ತದೆ. ಗಣಿತ ಪ್ರಯೋಗಾಲಯದ ಮೂಲಕ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿರುವ ಈ ಪ್ರೌಢಶಾಲೆಯು ವಿದ್ಯಾಥಿಗಳಿಗೆ ಅತೀ ಕ್ಲಿಷ್ಟವಾಗಿರುವ ಗಣಿತವನ್ನು ಸರಳಗೊಳಿಸಲು ಅನೇಕ ಯೋಜನೆಗಳನ್ನು ಹಮ್ಮಿಕೊಳ್ಳುತ್ತಿದೆ.


ಗಣಿತ ಸಂಘದ ಮೂಲಕ ಮಗ್ಗಿ ಕಂಠಪಾಠ, ಗಣಿತ ಸೂತ್ರ ಬರೆಯುವುದು, ಮಾದರಿ ತಯಾರಿಕೆ, ಗಣಿತಜ್ಞರ ಪರಿಚಯ, ಗಣಿತ ವಸ್ತು ಪ್ರದರ್ಶನ ಮುಂತಾದ ಕಾರ್ಯಕ್ರಮವನ್ನು ವರ್ಷಪೂರ್ತಿ ಹಮ್ಮಿಕೊಂಡಿದೆ.
ಇಂದು ನಡೆದ ಉದ್ಘಾಟನಾ ಸಮಾರಂಭದಲ್ಲಿ ಗಣಿತಕ್ಕೆ ಸಂಬಂಧಿಸಿದ ವಿವಿಧ ಚಟುವಟಿಕೆಗಳನ್ನು ನಡೆಸಲಾಯಿತು. ಗಣಿತ ಸಂಘದ ಅಧ್ಯಕ್ಷೆ ಕು. ಸಾನ್ವಿ ಹಾಗೂ ಕಾರ್ಯದರ್ಶಿ ಕು. ರಝ್ಮಿ ನಾ ಫಾತಿಮಾ ಗಣಿತ ಸಂಘದ ಚಟುವಟಿಕೆಗಳನ್ನು ರೂಪಿಸಿದ್ದು, ಇಂದಿನ ಕಾಯ೯ಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದರು.

Related posts

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಸಂಸ್ಥೆಯ ಕಾರುಣ್ಯ ಸ್ಪರ್ಶ ಯೋಜನೆಯಡಿ ದೇಜಮ್ಮ ರವರಿಗೆ ಚಿಕಿತ್ಸಾ ನೆರವು

Suddi Udaya

ಸುಜಾತಾ ಭಟ್ ನೀಡಿದ ನಾಪತ್ತೆ ಪ್ರಕರಣ: ಎಸ್ಐಟಿ ಕಚೇರಿಗೆ ಹಾಜರಾದ ವಸಂತಿ ಸಹೋದರ ವಿಜಯ್

Suddi Udaya

ಜೂ.28: ಕಕ್ಕಿಂಜೆಯಲ್ಲಿ ಬ್ರಿಲಿಯಂಟ್ “ಕಿಡ್ಸ್ ವರ್ಲ್ಡ್” ಶುಭಾರಂಭ: ಮುದ್ದು ಕಂದಮ್ಮಗಳ ಆರೈಕೆ, ಬೆಳಿಗ್ಗೆಯಿಂದ-ಸಂಜೆಯ ತನಕ ಆಟ-ಪಾಠ

Suddi Udaya

ಟೀಚರ್ಸ್ ಬ್ಯಾಂಕ್ ಉಡುಪಿಗೆ ರಾಷ್ಟ್ರೀಯ ಪ್ರಶಸ್ತಿ

Suddi Udaya

ಮಾ.17 : ಬೆಳ್ತಂಗಡಿ, ಧರ್ಮಸ್ಥಳ,ಕಕ್ಕಿಂಜೆ ಹಾಗೂ ವೇಣೂರು ವಿದ್ಯುತ್ ಉಪಕೇಂದ್ರಗಳಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಮದ್ದಡ್ಕ ದಿನಸಿ ಅಂಗಡಿ ವ್ಯಾಪಾರಿ ವಿಶ್ವನಾಥ್ ಶೆಣೈ ನಿಧನ

Suddi Udaya
error: Content is protected !!