September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸರಕಾರಿ ಪ್ರೌಢ ಶಾಲೆಯಲ್ಲಿ ‘ಗಣಿತ ಸಂಘದ ಉದ್ಘಾಟನೆ’

ನಡ : ಸರಕಾರಿ ಪ್ರೌಢಶಾಲೆ ನಡ ಇಲ್ಲಿ 2013 – 24 ನೇ ಸಾಲಿನ ಗಣಿತ ಸಂಘದ ಉದ್ಘಾಟನೆಯನ್ನು ಜು. 22 ರಂದು ನಡೆಸಲಾಯಿತು.
ಉದ್ಘಾಟನೆ ನೆರವೇರಿಸಿ ಮಾತನಾಡಿದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಗಣಿತ ಶಿಕ್ಷಕರೂ ಆಗಿರುವ ಮುಖ್ಯ ಶಿಕ್ಷಕ ಯಾಕೂಬ್ ಎಸ್ ಇವರು ಈ ದಿನ ಜುಲಾಯಿ 22 ಪೈ ಬೆಲೆಯನ್ನು ಪ್ರತಿನಿಧಿಸುತ್ತದೆ. ಪೈ ಬೆಲೆ 22/ 7 ಆಗಿರುವುದರಿಂದ ಜು. 22 ರ ಈ ದಿನಕ್ಕೆ ಗಣಿತದಲ್ಲಿ ಮಹತ್ವವಿದೆ. ಆದ್ದರಿಂದ ಈ ದಿನ ಗಣಿತ ಸಂಘದ ಉದ್ಘಾಟನೆ ಮಾಡಿರುವುದು ಅರ್ಥಪೂರ್ಣವಾಗಿದೆ ಎಂದರು.


ನಡ ಸರಕಾರಿ ಪ್ರೌಢಶಾಲೆಯು ಈಗಾಗಲೇ ಗಣಿತಕ್ಕೆ ತನ್ನದೇ ಆದ ವಿಶಿಷ್ಠ ಕೊಡುಗೆ ನೀಡಿರುತ್ತದೆ. ಗಣಿತ ಪ್ರಯೋಗಾಲಯದ ಮೂಲಕ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿರುವ ಈ ಪ್ರೌಢಶಾಲೆಯು ವಿದ್ಯಾಥಿಗಳಿಗೆ ಅತೀ ಕ್ಲಿಷ್ಟವಾಗಿರುವ ಗಣಿತವನ್ನು ಸರಳಗೊಳಿಸಲು ಅನೇಕ ಯೋಜನೆಗಳನ್ನು ಹಮ್ಮಿಕೊಳ್ಳುತ್ತಿದೆ.


ಗಣಿತ ಸಂಘದ ಮೂಲಕ ಮಗ್ಗಿ ಕಂಠಪಾಠ, ಗಣಿತ ಸೂತ್ರ ಬರೆಯುವುದು, ಮಾದರಿ ತಯಾರಿಕೆ, ಗಣಿತಜ್ಞರ ಪರಿಚಯ, ಗಣಿತ ವಸ್ತು ಪ್ರದರ್ಶನ ಮುಂತಾದ ಕಾರ್ಯಕ್ರಮವನ್ನು ವರ್ಷಪೂರ್ತಿ ಹಮ್ಮಿಕೊಂಡಿದೆ.
ಇಂದು ನಡೆದ ಉದ್ಘಾಟನಾ ಸಮಾರಂಭದಲ್ಲಿ ಗಣಿತಕ್ಕೆ ಸಂಬಂಧಿಸಿದ ವಿವಿಧ ಚಟುವಟಿಕೆಗಳನ್ನು ನಡೆಸಲಾಯಿತು. ಗಣಿತ ಸಂಘದ ಅಧ್ಯಕ್ಷೆ ಕು. ಸಾನ್ವಿ ಹಾಗೂ ಕಾರ್ಯದರ್ಶಿ ಕು. ರಝ್ಮಿ ನಾ ಫಾತಿಮಾ ಗಣಿತ ಸಂಘದ ಚಟುವಟಿಕೆಗಳನ್ನು ರೂಪಿಸಿದ್ದು, ಇಂದಿನ ಕಾಯ೯ಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದರು.

Related posts

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಉಜಿರೆ: ಯಕ್ಷಬಿಂದು ಕಲಾರಾಧನಾ ಪ್ರತಿಷ್ಠಾನದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಎಕ್ಸೆಲ್ ಬೆಳಕು ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದಲ್ಲಿ ಶಿಕ್ಷಣ:ಎಕ್ಸೆಲ್ ಶಾಲೆಗಳಲ್ಲಿ ಆರನೆಯ ತರಗತಿಯ ಹಂತದಿಂದಲೇ ಮೆಡಿಕಲ್ ಹಾಗೂ ಐಐಟಿ ಫೌಂಡೇಶನ್ ಕೋರ್ಸ್:ಮಧ್ಯಾಹ್ನದ ಊಟದ ಜೊತೆಗೆ ತಾಲೂಕಿನ ಎಲ್ಲಾ ಭಾಗಗಳಿಂದ ಸ್ಕೂಲ್ ಬಸ್ ವ್ಯವಸ್ಥೆ: ಸುಮಂತ್ ಕುಮಾರ್ ಜೈನ್

Suddi Udaya

ಉಜಿರೆ: ವಿನೋದ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ

Suddi Udaya

ಪಡಂಗಡಿ: ನಿಶಾಂತ್ ಸೇವಾ ಬ್ರಿಗೇಡ್ ಹಾಗೂ ವೆನ್ಲಾಕ್ ಆಸ್ಪತ್ರೆಯ ರಕ್ತ ನಿಧಿ ಕೇಂದ್ರದ ವತಿಯಿಂದ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ನಿಗದಿ ಕಾರ್ಯಕ್ರಮ

Suddi Udaya
error: Content is protected !!