April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಪ್ರಕರಣವನ್ನು ಮರು ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಈ ಮನವಿಯನ್ನು ಸಲ್ಲಿಸಿರುವ ಶಾಸಕರು, 2012 ಅಕ್ಟೋಬರ್ 9ರಂದುರಂದು ಬೆಳ್ತಂಗಡಿ ತಾಲೂಕಿನ ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಸೌಜನ್ಯ ಅತ್ಯಾಚಾರಕ್ಕೀಡಾಗಿ ಕೊಲೆಯಾಗಿದ್ದು ಅದರ ವಿಚಾರವಾಗಿ ಅದಕ್ಕೆ ಸಂಬಂಧಿಸಿದಂತೆ ಹಲವಾರು ಇಲಾಖೆಗಳಿಂದ ತನಿಖೆ ನಡೆದು ನಂತರ ತಮ್ಮ ನೇತೃತ್ವದ ಘನ ಸರ್ಕಾರ 2013 ರಲ್ಲಿ ಈ ಪ್ರಕರಣವನ್ನು ಸಿ.ಬಿ.ಐ. ಗೆ ಒಪ್ಪಿಸಿತ್ತು. ಅಲ್ಲಿಂದ 2023 ರವರೆಗೂ ನಡೆದ ಸಿ.ಬಿ.ಐ, ತನಿಖೆಯಲ್ಲಿ ಶಂಕಿತ ಆರೋಪಿಯನ್ನು ದೋಷಮುಕ್ತಗೊಳಿಸಿ ನ್ಯಾಯಾಲಯವು ಆದೇಶ ನೀಡಿದೆ.

ಈ ತನಿಖೆಯ ಫಲಶೃತಿಯ ಬಗ್ಗೆ ಅಪರಾಧಿಗಳನ್ನು ಕಾನೂನಿನ ಚೌಕಟ್ಟನೊಳಗೆ ತಂದು ಶಿಕ್ಷೆ ನೀಡಲು ಆಡಳತ ವ್ಯವಸ್ಥೆ ವಿಫಲವಾಗಿದೆ ಎಂಬ ದುಗುಡ ಬೆಳ್ತಂಗಡಿ ತಾಲ್ಲೂಕಿನ ನಾಗರೀಕ ಬಂಧುಗಳದ್ದಾಗಿದೆ. ಆದ್ದರಿಂದ ನಾಗರಿಕರ ಭಾವನೆಗಳನ್ನು ಗಂಭೀರವಾಗಿ ಪರಿಗಣಿಸಿ, ಸರ್ಕಾರವು ಕುಮಾರಿ ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರುತನಿಖೆಗೆ ಒಳಪಡಿಸಿ ಮೃತ ಸಹೋದರಿ ಸೌಜನ್ಯಳಗೆ ಮತ್ತು ಮೃತಳ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕನ ನೆಲೆಯಲ್ಲ ಹಾಗೂ ವೈಯಕ್ತಿಕವಾಗಿ ಆಗ್ರಹಿಸುವುದಾಗಿ ಮನವಿಯಲ್ಲಿ ತಿಳಿಸಿದ್ದಾರೆ.

ಮನವಿ ನೀಡುವ ಸಂದರ್ಭದಲ್ಲಿ ‌ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ಉಪಸ್ಥಿತರಿದ್ದರು.

Related posts

ಕೊಕ್ಕಡ: ಸೌತಡ್ಕ ಶ್ರೀಮಹಾಗಣಪತಿ ದೇವಸ್ಥಾನದ ಸೇವಾ ಕೌಂಟರ್ ಉದ್ಘಾಟನೆ

Suddi Udaya

ಧರ್ಮಸ್ಥಳ ಶ್ರೀ ಧ ಮ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಲಾಯಿಲಗುತ್ತು ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ದೊಂಪದಬಲಿ ಉತ್ಸವ: ಶಾಸಕ ಹರಿಶ್ ಪೂಂಜರಿಂದ ದೈವಕ್ಕೆ ತಲೆಮುಡಿ ಅರ್ಪಣೆ

Suddi Udaya

ಕಕ್ಕಿಂಜೆ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಆಡಳಿತ ಸಮಿತಿಗೆ ಆಯ್ಕೆ

Suddi Udaya

ಪುದುವೆಟ್ಟು : ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya

ಕಾರ್ಯಕ್ರಮ ನಿರೂಪಕ ಅರುಣ್ ಗರ್ಡಾಡಿ ಅಸೌಖ್ಯದಿಂದ ನಿಧನ

Suddi Udaya
error: Content is protected !!