September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸರ್ಕಾರಿ ಪದವಿಪೂರ್ವ ಕಾಲೇಜು: ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

ನಡ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಜು.22 ರಂದು ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮುಂಡಾಜೆಯ ಕಲಾಕುಂಜ ಆರ್ಟ್ಸ್ ನ ಸಂಯೋಜಕರಾದ ಜಯರಾಮ್ ರವರು, “ವಿದ್ಯಾರ್ಥಿಗಳು ಮಾದಕ ವಸ್ತುಗಳ ಬಗ್ಗೆ ಜಾಗೃತಿಯನ್ನು ಹೆಚ್ಚಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಎ ಚ್ಚೆತ್ತರೆ ಸುದೃಢ ಸಮಾಜದ ನಿರ್ಮಾಣವಾಗುತ್ತದೆ” ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು, ಒಕ್ಕೂಟದ ಅಧ್ಯಕ್ಷರಾದ ಬಿಎ ರಝಕ್ ವಹಿಸಿಕೊಂಡಿದ್ದರು. ಸಂಸ್ಥೆಯ ಪ್ರಾಂಶುಪಾಲರಾದ ಚಂದ್ರಶೇಖರ್ ಮುಖ್ಯ ಅತಿಥಿ ಗಳಾಗಿ ಭಾಗವಹಿಸಿದ್ದರು.

ವೇದಿಕೆಯಲ್ಲಿ ಬೆಳ್ತಂಗಡಿ ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರಾದ ತನಿಯಪ್ಪ ಗೌಡ, ನಡ ಗ್ರಾಮದ ಸೇವಾಪ್ರತಿನಿಧಿ ಶ್ರೀಮತಿ ಶಕುಂತಲ , ವಲಯ ಮೇಲ್ವಿಚಾರಕಿ ಶ್ರೀಮತಿ ಶಶಿಕಲಾ ಉಪಸ್ಥಿತರಿದ್ದರು.

ಉಪನ್ಯಾಸಕರಾದ ಶ್ರೀಮತಿ ಲಿಲ್ಲಿ ಪಿ. ವಿ. ಮತ್ತು ಶ್ರೀಮತಿ ವಸಂತಿ ಪಿ. ಯವರು ಕಾರ್ಯಕ್ರಮಕ್ಕೆ ಸಹಕರಿಸಿದರು.
ವಿದ್ಯಾರ್ಥಿನಿಯರಾದ ಸವಿತಾ, ಪ್ರಾಪ್ತಿ, ಯಕ್ಷಿತಾ ಪ್ರಾರ್ಥನೆ ಗೈದರು. ಶ್ರೀ ಕ್ಷೇ. ಧ. ಗ್ರಾಮಾಭಿವೃದ್ಧಿ ಯೋಜನೆಯ ಲಾಯಿಲ ವಿಭಾಗದ ಮೇಲ್ವಿಚಾರಕರಾದ ವಂದಿಸಿದರು. ಉಪನ್ಯಾಸಕರಾದ ಮೋಹನ ಗೌಡ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.

Related posts

ಪ್ರತಿಭಾ ಪುರಸ್ಕಾರ ಮತ್ತು ಶೈಕ್ಷಣಿಕ ನಿಧಿ ವಿತರಣೆ ಕಾರ್ಯಕ್ರಮ

Suddi Udaya

ಹೊಸಂಗಡಿ-ಪುದುವೆಟ್ಟು ಗ್ರಾ.ಪಂ.ಗಳಲ್ಲಿ ತೆರವಾದ ತಲಾ ಒಂದು ಸ್ಥಾನಕ್ಕೆ ಉಪಚುನವಾಣೆ: ಹೊಸಂಗಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದ ಬಂಗೇರ ಜಯ: ಪುದುವೆಟ್ಟಿನಲ್ಲಿ ಬಿಜೆಪಿ ಅಭ್ಯರ್ಥಿ ಜಯಲಕ್ಷ್ಮೀ ಜಯ

Suddi Udaya

ಬೆಳ್ತಂಗಡಿ: ಡಾ. ಯೂಸುಫ್ ಕುಂಬ್ಲೆ ಅವರ ಫಾತಿಮಾ ಹೆಲ್ತ್ ಫೌಂಡೇಶನ್ ವತಿಯಿಂದ 35 ಕುಟುಂಬಕ್ಕೆ ಆಹಾರದ ಕಿಟ್ ವಿತರಣೆ

Suddi Udaya

ತೋಟತ್ತಾಡಿ: ಹಾಡು ಹಗಲೇ ಮನೆಯ ಬಾಗಿಲ ಬೀಗವನ್ನು ಮುರಿದು ಗಾದ್ರೇಜ್‌ನ ಲಾಕರ್ ನಲ್ಲಿಟ್ಟಿದ್ದ ರೂ. 1.30 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವಿತೀಯ

Suddi Udaya

ಬೆಳ್ತಂಗಡಿ ಲಯನ್ಸ್ ಝೋನ್ ಮಟ್ಟದ ಸೆಮಿನಾರ್

Suddi Udaya
error: Content is protected !!