30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸರಕಾರಿ ಪ್ರೌಢ ಶಾಲೆಯಲ್ಲಿ ‘ಗಣಿತ ಸಂಘದ ಉದ್ಘಾಟನೆ’

ನಡ : ಸರಕಾರಿ ಪ್ರೌಢಶಾಲೆ ನಡ ಇಲ್ಲಿ 2013 – 24 ನೇ ಸಾಲಿನ ಗಣಿತ ಸಂಘದ ಉದ್ಘಾಟನೆಯನ್ನು ಜು. 22 ರಂದು ನಡೆಸಲಾಯಿತು.
ಉದ್ಘಾಟನೆ ನೆರವೇರಿಸಿ ಮಾತನಾಡಿದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಗಣಿತ ಶಿಕ್ಷಕರೂ ಆಗಿರುವ ಮುಖ್ಯ ಶಿಕ್ಷಕ ಯಾಕೂಬ್ ಎಸ್ ಇವರು ಈ ದಿನ ಜುಲಾಯಿ 22 ಪೈ ಬೆಲೆಯನ್ನು ಪ್ರತಿನಿಧಿಸುತ್ತದೆ. ಪೈ ಬೆಲೆ 22/ 7 ಆಗಿರುವುದರಿಂದ ಜು. 22 ರ ಈ ದಿನಕ್ಕೆ ಗಣಿತದಲ್ಲಿ ಮಹತ್ವವಿದೆ. ಆದ್ದರಿಂದ ಈ ದಿನ ಗಣಿತ ಸಂಘದ ಉದ್ಘಾಟನೆ ಮಾಡಿರುವುದು ಅರ್ಥಪೂರ್ಣವಾಗಿದೆ ಎಂದರು.


ನಡ ಸರಕಾರಿ ಪ್ರೌಢಶಾಲೆಯು ಈಗಾಗಲೇ ಗಣಿತಕ್ಕೆ ತನ್ನದೇ ಆದ ವಿಶಿಷ್ಠ ಕೊಡುಗೆ ನೀಡಿರುತ್ತದೆ. ಗಣಿತ ಪ್ರಯೋಗಾಲಯದ ಮೂಲಕ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿರುವ ಈ ಪ್ರೌಢಶಾಲೆಯು ವಿದ್ಯಾಥಿಗಳಿಗೆ ಅತೀ ಕ್ಲಿಷ್ಟವಾಗಿರುವ ಗಣಿತವನ್ನು ಸರಳಗೊಳಿಸಲು ಅನೇಕ ಯೋಜನೆಗಳನ್ನು ಹಮ್ಮಿಕೊಳ್ಳುತ್ತಿದೆ.


ಗಣಿತ ಸಂಘದ ಮೂಲಕ ಮಗ್ಗಿ ಕಂಠಪಾಠ, ಗಣಿತ ಸೂತ್ರ ಬರೆಯುವುದು, ಮಾದರಿ ತಯಾರಿಕೆ, ಗಣಿತಜ್ಞರ ಪರಿಚಯ, ಗಣಿತ ವಸ್ತು ಪ್ರದರ್ಶನ ಮುಂತಾದ ಕಾರ್ಯಕ್ರಮವನ್ನು ವರ್ಷಪೂರ್ತಿ ಹಮ್ಮಿಕೊಂಡಿದೆ.
ಇಂದು ನಡೆದ ಉದ್ಘಾಟನಾ ಸಮಾರಂಭದಲ್ಲಿ ಗಣಿತಕ್ಕೆ ಸಂಬಂಧಿಸಿದ ವಿವಿಧ ಚಟುವಟಿಕೆಗಳನ್ನು ನಡೆಸಲಾಯಿತು. ಗಣಿತ ಸಂಘದ ಅಧ್ಯಕ್ಷೆ ಕು. ಸಾನ್ವಿ ಹಾಗೂ ಕಾರ್ಯದರ್ಶಿ ಕು. ರಝ್ಮಿ ನಾ ಫಾತಿಮಾ ಗಣಿತ ಸಂಘದ ಚಟುವಟಿಕೆಗಳನ್ನು ರೂಪಿಸಿದ್ದು, ಇಂದಿನ ಕಾಯ೯ಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದರು.

Related posts

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕವನ ವಾಚನ ಸ್ಪರ್ಧೆ : ಕು | ನಿತ್ಯಶ್ರೀ ಖಂಡಿಗ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಕರಾಟೆ ಪಂದ್ಯಾಟ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಪ್ರಥಮ್ ಮತ್ತು ಶಾನ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ವೇಣೂರು: ಸಾಯಿ ಈಶ್ವರ್ ಗುರೂಜಿಯವರ ದಿವ್ಯ ಸಂಕಲ್ಪದಂತೆ ಸನಾತನ ಹಿಂದೂ ಧರ್ಮದ 300 ಹೆಣ್ಣು ಮಕ್ಕಳಿಗೆ ಉಚಿತ ಮೂಗುತಿ ಧಾರಣೆ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆಯುವ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya
error: Content is protected !!