25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸರಕಾರಿ ಪ್ರೌಢ ಶಾಲೆಯಲ್ಲಿ ‘ಗಣಿತ ಸಂಘದ ಉದ್ಘಾಟನೆ’

ನಡ : ಸರಕಾರಿ ಪ್ರೌಢಶಾಲೆ ನಡ ಇಲ್ಲಿ 2013 – 24 ನೇ ಸಾಲಿನ ಗಣಿತ ಸಂಘದ ಉದ್ಘಾಟನೆಯನ್ನು ಜು. 22 ರಂದು ನಡೆಸಲಾಯಿತು.
ಉದ್ಘಾಟನೆ ನೆರವೇರಿಸಿ ಮಾತನಾಡಿದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಗಣಿತ ಶಿಕ್ಷಕರೂ ಆಗಿರುವ ಮುಖ್ಯ ಶಿಕ್ಷಕ ಯಾಕೂಬ್ ಎಸ್ ಇವರು ಈ ದಿನ ಜುಲಾಯಿ 22 ಪೈ ಬೆಲೆಯನ್ನು ಪ್ರತಿನಿಧಿಸುತ್ತದೆ. ಪೈ ಬೆಲೆ 22/ 7 ಆಗಿರುವುದರಿಂದ ಜು. 22 ರ ಈ ದಿನಕ್ಕೆ ಗಣಿತದಲ್ಲಿ ಮಹತ್ವವಿದೆ. ಆದ್ದರಿಂದ ಈ ದಿನ ಗಣಿತ ಸಂಘದ ಉದ್ಘಾಟನೆ ಮಾಡಿರುವುದು ಅರ್ಥಪೂರ್ಣವಾಗಿದೆ ಎಂದರು.


ನಡ ಸರಕಾರಿ ಪ್ರೌಢಶಾಲೆಯು ಈಗಾಗಲೇ ಗಣಿತಕ್ಕೆ ತನ್ನದೇ ಆದ ವಿಶಿಷ್ಠ ಕೊಡುಗೆ ನೀಡಿರುತ್ತದೆ. ಗಣಿತ ಪ್ರಯೋಗಾಲಯದ ಮೂಲಕ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿರುವ ಈ ಪ್ರೌಢಶಾಲೆಯು ವಿದ್ಯಾಥಿಗಳಿಗೆ ಅತೀ ಕ್ಲಿಷ್ಟವಾಗಿರುವ ಗಣಿತವನ್ನು ಸರಳಗೊಳಿಸಲು ಅನೇಕ ಯೋಜನೆಗಳನ್ನು ಹಮ್ಮಿಕೊಳ್ಳುತ್ತಿದೆ.


ಗಣಿತ ಸಂಘದ ಮೂಲಕ ಮಗ್ಗಿ ಕಂಠಪಾಠ, ಗಣಿತ ಸೂತ್ರ ಬರೆಯುವುದು, ಮಾದರಿ ತಯಾರಿಕೆ, ಗಣಿತಜ್ಞರ ಪರಿಚಯ, ಗಣಿತ ವಸ್ತು ಪ್ರದರ್ಶನ ಮುಂತಾದ ಕಾರ್ಯಕ್ರಮವನ್ನು ವರ್ಷಪೂರ್ತಿ ಹಮ್ಮಿಕೊಂಡಿದೆ.
ಇಂದು ನಡೆದ ಉದ್ಘಾಟನಾ ಸಮಾರಂಭದಲ್ಲಿ ಗಣಿತಕ್ಕೆ ಸಂಬಂಧಿಸಿದ ವಿವಿಧ ಚಟುವಟಿಕೆಗಳನ್ನು ನಡೆಸಲಾಯಿತು. ಗಣಿತ ಸಂಘದ ಅಧ್ಯಕ್ಷೆ ಕು. ಸಾನ್ವಿ ಹಾಗೂ ಕಾರ್ಯದರ್ಶಿ ಕು. ರಝ್ಮಿ ನಾ ಫಾತಿಮಾ ಗಣಿತ ಸಂಘದ ಚಟುವಟಿಕೆಗಳನ್ನು ರೂಪಿಸಿದ್ದು, ಇಂದಿನ ಕಾಯ೯ಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದರು.

Related posts

ನಡ ಸರ್ಕಾರಿ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಉಜಿರೆ: ಗುರಿಪಳ್ಳಕ್ಕೆ ಸಂಪರ್ಕ ಕಲ್ಪಿಸುವ ಅಂಬಡಬೆಟ್ಟು ಸೇತುವೆ ಶಿಥಿಲ: ಘನ ವಾಹನಗಳ ಸಂಚಾರ ನಿಷೇಧ: ಬದಲಿ ರಸ್ತೆಗಳನ್ನು ಬಳಸಿಕೊಂಡು ಸಂಚರಿಸುವಂತೆ ಸೂಚನೆ

Suddi Udaya

ಲಾಯಿಲ ಬಂಟರ ಗ್ರಾಮ ಸಮಿತಿ ವತಿಯಿಂದ ಆಟಿದ ಗಮ್ಮತ್ ಹಾಗೂ ವಿವಿಧ ಕ್ರೀಡಾಕೂಟ

Suddi Udaya

ಕಳೆಂಜ ಎಸ್ ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಂ.ಕೆ. ಪೋಕ್ಸೋ ಪ್ರಕರಣ: ಸರಿಯಾದ ತನಿಖೆಯನ್ನು ಮಾಡಿ ಸತ್ಯಾಂಶವನ್ನು ಹೊರ ತರುವ ಕೆಲಸವನ್ನು ಗೃಹ ಇಲಾಖೆ ಮಾಡಬೇಕು: ಕಳೆಂಜ ಗ್ರಾ.ಪಂ. ಮಾಜಿ ಅಧ್ಯಕ್ಷ ಪ್ರಸನ್ನ

Suddi Udaya

ತಾಲೂಕು ಮಟ್ಟದ ಮಾದರಿ ತಯಾರಿ ಸ್ಪರ್ಧೆ: ಬೆಳ್ತಂಗಡಿ ಎಸ್. ಡಿ. ಎಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಪ್ರತೀಕ್ ವಿ. ಶೆಟ್ಟಿ ಪ್ರಥಮ ಸ್ಥಾನ

Suddi Udaya

ರಾಜ್ಯಮಟ್ಟದ ಯೋಗ ಸ್ಪರ್ಧೆ: ಕಲ್ಮಂಜ ಶಾಲಾ ವಿದ್ಯಾರ್ಥಿ ಮೋಹಿತ್ ಗೌಡ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya
error: Content is protected !!