April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸರಕಾರಿ ಪ್ರೌಢ ಶಾಲೆಯಲ್ಲಿ ‘ಗಣಿತ ಸಂಘದ ಉದ್ಘಾಟನೆ’

ನಡ : ಸರಕಾರಿ ಪ್ರೌಢಶಾಲೆ ನಡ ಇಲ್ಲಿ 2013 – 24 ನೇ ಸಾಲಿನ ಗಣಿತ ಸಂಘದ ಉದ್ಘಾಟನೆಯನ್ನು ಜು. 22 ರಂದು ನಡೆಸಲಾಯಿತು.
ಉದ್ಘಾಟನೆ ನೆರವೇರಿಸಿ ಮಾತನಾಡಿದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಗಣಿತ ಶಿಕ್ಷಕರೂ ಆಗಿರುವ ಮುಖ್ಯ ಶಿಕ್ಷಕ ಯಾಕೂಬ್ ಎಸ್ ಇವರು ಈ ದಿನ ಜುಲಾಯಿ 22 ಪೈ ಬೆಲೆಯನ್ನು ಪ್ರತಿನಿಧಿಸುತ್ತದೆ. ಪೈ ಬೆಲೆ 22/ 7 ಆಗಿರುವುದರಿಂದ ಜು. 22 ರ ಈ ದಿನಕ್ಕೆ ಗಣಿತದಲ್ಲಿ ಮಹತ್ವವಿದೆ. ಆದ್ದರಿಂದ ಈ ದಿನ ಗಣಿತ ಸಂಘದ ಉದ್ಘಾಟನೆ ಮಾಡಿರುವುದು ಅರ್ಥಪೂರ್ಣವಾಗಿದೆ ಎಂದರು.


ನಡ ಸರಕಾರಿ ಪ್ರೌಢಶಾಲೆಯು ಈಗಾಗಲೇ ಗಣಿತಕ್ಕೆ ತನ್ನದೇ ಆದ ವಿಶಿಷ್ಠ ಕೊಡುಗೆ ನೀಡಿರುತ್ತದೆ. ಗಣಿತ ಪ್ರಯೋಗಾಲಯದ ಮೂಲಕ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿರುವ ಈ ಪ್ರೌಢಶಾಲೆಯು ವಿದ್ಯಾಥಿಗಳಿಗೆ ಅತೀ ಕ್ಲಿಷ್ಟವಾಗಿರುವ ಗಣಿತವನ್ನು ಸರಳಗೊಳಿಸಲು ಅನೇಕ ಯೋಜನೆಗಳನ್ನು ಹಮ್ಮಿಕೊಳ್ಳುತ್ತಿದೆ.


ಗಣಿತ ಸಂಘದ ಮೂಲಕ ಮಗ್ಗಿ ಕಂಠಪಾಠ, ಗಣಿತ ಸೂತ್ರ ಬರೆಯುವುದು, ಮಾದರಿ ತಯಾರಿಕೆ, ಗಣಿತಜ್ಞರ ಪರಿಚಯ, ಗಣಿತ ವಸ್ತು ಪ್ರದರ್ಶನ ಮುಂತಾದ ಕಾರ್ಯಕ್ರಮವನ್ನು ವರ್ಷಪೂರ್ತಿ ಹಮ್ಮಿಕೊಂಡಿದೆ.
ಇಂದು ನಡೆದ ಉದ್ಘಾಟನಾ ಸಮಾರಂಭದಲ್ಲಿ ಗಣಿತಕ್ಕೆ ಸಂಬಂಧಿಸಿದ ವಿವಿಧ ಚಟುವಟಿಕೆಗಳನ್ನು ನಡೆಸಲಾಯಿತು. ಗಣಿತ ಸಂಘದ ಅಧ್ಯಕ್ಷೆ ಕು. ಸಾನ್ವಿ ಹಾಗೂ ಕಾರ್ಯದರ್ಶಿ ಕು. ರಝ್ಮಿ ನಾ ಫಾತಿಮಾ ಗಣಿತ ಸಂಘದ ಚಟುವಟಿಕೆಗಳನ್ನು ರೂಪಿಸಿದ್ದು, ಇಂದಿನ ಕಾಯ೯ಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದರು.

Related posts

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ” ಹದಿಹರೆಯ ಮತ್ತು ಆರೋಗ್ಯ” ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದದಲ್ಲಿ ಜುಬಿಲಿ ವರ್ಷ ಉದ್ಘಾಟನೆ

Suddi Udaya

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ರುಪ್ಸಾ ನೀಡುವ ತಾಲೂಕು ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕಿ ರೇಷ್ಮಾ ಕೆ.ಎಸ್ ಆಯ್ಕೆ

Suddi Udaya

ಇಂದಬೆಟ್ಟು-ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ಯುವ ಸಂಘಟನೆಯಿಂದ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಶ್ರಮದಾನ

Suddi Udaya

ತೆಕ್ಕಾರು: ಬಾಜಾರು ನಲ್ಲಿ ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ: ಹಲವು ಮರಗಳು ಬೆಂಕಿಗಾಹುತಿ

Suddi Udaya
error: Content is protected !!