25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸರಕಾರಿ ಪ್ರೌಢ ಶಾಲೆಯಲ್ಲಿ ‘ಗಣಿತ ಸಂಘದ ಉದ್ಘಾಟನೆ’

ನಡ : ಸರಕಾರಿ ಪ್ರೌಢಶಾಲೆ ನಡ ಇಲ್ಲಿ 2013 – 24 ನೇ ಸಾಲಿನ ಗಣಿತ ಸಂಘದ ಉದ್ಘಾಟನೆಯನ್ನು ಜು. 22 ರಂದು ನಡೆಸಲಾಯಿತು.
ಉದ್ಘಾಟನೆ ನೆರವೇರಿಸಿ ಮಾತನಾಡಿದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಗಣಿತ ಶಿಕ್ಷಕರೂ ಆಗಿರುವ ಮುಖ್ಯ ಶಿಕ್ಷಕ ಯಾಕೂಬ್ ಎಸ್ ಇವರು ಈ ದಿನ ಜುಲಾಯಿ 22 ಪೈ ಬೆಲೆಯನ್ನು ಪ್ರತಿನಿಧಿಸುತ್ತದೆ. ಪೈ ಬೆಲೆ 22/ 7 ಆಗಿರುವುದರಿಂದ ಜು. 22 ರ ಈ ದಿನಕ್ಕೆ ಗಣಿತದಲ್ಲಿ ಮಹತ್ವವಿದೆ. ಆದ್ದರಿಂದ ಈ ದಿನ ಗಣಿತ ಸಂಘದ ಉದ್ಘಾಟನೆ ಮಾಡಿರುವುದು ಅರ್ಥಪೂರ್ಣವಾಗಿದೆ ಎಂದರು.


ನಡ ಸರಕಾರಿ ಪ್ರೌಢಶಾಲೆಯು ಈಗಾಗಲೇ ಗಣಿತಕ್ಕೆ ತನ್ನದೇ ಆದ ವಿಶಿಷ್ಠ ಕೊಡುಗೆ ನೀಡಿರುತ್ತದೆ. ಗಣಿತ ಪ್ರಯೋಗಾಲಯದ ಮೂಲಕ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿರುವ ಈ ಪ್ರೌಢಶಾಲೆಯು ವಿದ್ಯಾಥಿಗಳಿಗೆ ಅತೀ ಕ್ಲಿಷ್ಟವಾಗಿರುವ ಗಣಿತವನ್ನು ಸರಳಗೊಳಿಸಲು ಅನೇಕ ಯೋಜನೆಗಳನ್ನು ಹಮ್ಮಿಕೊಳ್ಳುತ್ತಿದೆ.


ಗಣಿತ ಸಂಘದ ಮೂಲಕ ಮಗ್ಗಿ ಕಂಠಪಾಠ, ಗಣಿತ ಸೂತ್ರ ಬರೆಯುವುದು, ಮಾದರಿ ತಯಾರಿಕೆ, ಗಣಿತಜ್ಞರ ಪರಿಚಯ, ಗಣಿತ ವಸ್ತು ಪ್ರದರ್ಶನ ಮುಂತಾದ ಕಾರ್ಯಕ್ರಮವನ್ನು ವರ್ಷಪೂರ್ತಿ ಹಮ್ಮಿಕೊಂಡಿದೆ.
ಇಂದು ನಡೆದ ಉದ್ಘಾಟನಾ ಸಮಾರಂಭದಲ್ಲಿ ಗಣಿತಕ್ಕೆ ಸಂಬಂಧಿಸಿದ ವಿವಿಧ ಚಟುವಟಿಕೆಗಳನ್ನು ನಡೆಸಲಾಯಿತು. ಗಣಿತ ಸಂಘದ ಅಧ್ಯಕ್ಷೆ ಕು. ಸಾನ್ವಿ ಹಾಗೂ ಕಾರ್ಯದರ್ಶಿ ಕು. ರಝ್ಮಿ ನಾ ಫಾತಿಮಾ ಗಣಿತ ಸಂಘದ ಚಟುವಟಿಕೆಗಳನ್ನು ರೂಪಿಸಿದ್ದು, ಇಂದಿನ ಕಾಯ೯ಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದರು.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ “ಸುವರ್ಣ ಸಮ್ಮಿಲನ”: ಮೋಹನ್ ಕುಮಾರ್ ಹಾಗೂ ರವಿ ಕಟಪಾಡಿ ಯವರಿಗೆ ಸುವರ್ಣ ಸೇವಾ ರತ್ನ ಪ್ರಶಸ್ತಿ ಪ್ರದಾನ: ಸೇವಾ ಪಥ ಸ್ಮರಣ ಸಂಚಿಕೆ ಬಿಡುಗಡೆ

Suddi Udaya

ಬಳಂಜ: ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಕ್ಲಬ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತುಂಬಿ ಹರಿಯುತ್ತಿರುವ ಶಿಶಿಲದ ಕಪಿಲ ನದಿ: ಕಿಂಡಿ ಅಣೆಕಟ್ಟಿನಲ್ಲಿ ನೀರಿನೊಂದಿಗೆ ತೇಲಿ ಬಂದ ಮರಗಳು: ಗ್ರಾಮಸ್ಥರಿಂದ ಮರ ತೆರವು

Suddi Udaya

ಶಾಸಕರ ಬಂಧನಕ್ಕೆ ಹೋದ ಪೊಲೀಸರು- ಸಂಜೆಯವರೆಗೆ ಬಿಗ್ ಹೈಡ್ರಾಮ;: ಶಾಸಕ ಹರೀಶ್ ಪೂಂಜರ ಬಂಧನ ಕೈ ಬಿಟ್ಟು ಹಿಂದಿರುಗಿದ ಪೊಲೀಸರು

Suddi Udaya

ರಾಜ್ಯಮಟ್ಟದ ನೆಟ್ ಬಾಲ್ ಚಾಂಪಿಯನ್ಶಿಪ್ : ಉಜಿರೆಯ ಎಸ್.ಡಿ.ಎಂ ಕಾಲೇಜಿಗೆ ಅವಳಿ ಪ್ರಶಸ್ತಿ

Suddi Udaya

ಬೆದ್ರಬೆಟ್ಟು ಮರಿಯಾoಬಿಕ ಆಂ.ಮಾ. ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ ಸ್ಪಾರ್ಕ್ -2024

Suddi Udaya
error: Content is protected !!