25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸರಕಾರಿ ಪ್ರೌಢ ಶಾಲೆಯಲ್ಲಿ ‘ಗಣಿತ ಸಂಘದ ಉದ್ಘಾಟನೆ’

ನಡ : ಸರಕಾರಿ ಪ್ರೌಢಶಾಲೆ ನಡ ಇಲ್ಲಿ 2013 – 24 ನೇ ಸಾಲಿನ ಗಣಿತ ಸಂಘದ ಉದ್ಘಾಟನೆಯನ್ನು ಜು. 22 ರಂದು ನಡೆಸಲಾಯಿತು.
ಉದ್ಘಾಟನೆ ನೆರವೇರಿಸಿ ಮಾತನಾಡಿದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಗಣಿತ ಶಿಕ್ಷಕರೂ ಆಗಿರುವ ಮುಖ್ಯ ಶಿಕ್ಷಕ ಯಾಕೂಬ್ ಎಸ್ ಇವರು ಈ ದಿನ ಜುಲಾಯಿ 22 ಪೈ ಬೆಲೆಯನ್ನು ಪ್ರತಿನಿಧಿಸುತ್ತದೆ. ಪೈ ಬೆಲೆ 22/ 7 ಆಗಿರುವುದರಿಂದ ಜು. 22 ರ ಈ ದಿನಕ್ಕೆ ಗಣಿತದಲ್ಲಿ ಮಹತ್ವವಿದೆ. ಆದ್ದರಿಂದ ಈ ದಿನ ಗಣಿತ ಸಂಘದ ಉದ್ಘಾಟನೆ ಮಾಡಿರುವುದು ಅರ್ಥಪೂರ್ಣವಾಗಿದೆ ಎಂದರು.


ನಡ ಸರಕಾರಿ ಪ್ರೌಢಶಾಲೆಯು ಈಗಾಗಲೇ ಗಣಿತಕ್ಕೆ ತನ್ನದೇ ಆದ ವಿಶಿಷ್ಠ ಕೊಡುಗೆ ನೀಡಿರುತ್ತದೆ. ಗಣಿತ ಪ್ರಯೋಗಾಲಯದ ಮೂಲಕ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿರುವ ಈ ಪ್ರೌಢಶಾಲೆಯು ವಿದ್ಯಾಥಿಗಳಿಗೆ ಅತೀ ಕ್ಲಿಷ್ಟವಾಗಿರುವ ಗಣಿತವನ್ನು ಸರಳಗೊಳಿಸಲು ಅನೇಕ ಯೋಜನೆಗಳನ್ನು ಹಮ್ಮಿಕೊಳ್ಳುತ್ತಿದೆ.


ಗಣಿತ ಸಂಘದ ಮೂಲಕ ಮಗ್ಗಿ ಕಂಠಪಾಠ, ಗಣಿತ ಸೂತ್ರ ಬರೆಯುವುದು, ಮಾದರಿ ತಯಾರಿಕೆ, ಗಣಿತಜ್ಞರ ಪರಿಚಯ, ಗಣಿತ ವಸ್ತು ಪ್ರದರ್ಶನ ಮುಂತಾದ ಕಾರ್ಯಕ್ರಮವನ್ನು ವರ್ಷಪೂರ್ತಿ ಹಮ್ಮಿಕೊಂಡಿದೆ.
ಇಂದು ನಡೆದ ಉದ್ಘಾಟನಾ ಸಮಾರಂಭದಲ್ಲಿ ಗಣಿತಕ್ಕೆ ಸಂಬಂಧಿಸಿದ ವಿವಿಧ ಚಟುವಟಿಕೆಗಳನ್ನು ನಡೆಸಲಾಯಿತು. ಗಣಿತ ಸಂಘದ ಅಧ್ಯಕ್ಷೆ ಕು. ಸಾನ್ವಿ ಹಾಗೂ ಕಾರ್ಯದರ್ಶಿ ಕು. ರಝ್ಮಿ ನಾ ಫಾತಿಮಾ ಗಣಿತ ಸಂಘದ ಚಟುವಟಿಕೆಗಳನ್ನು ರೂಪಿಸಿದ್ದು, ಇಂದಿನ ಕಾಯ೯ಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದರು.

Related posts

ಉಜಿರೆ‌: ಬೆನಕ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ತಜ್ಞ ವೈದ್ಯರ ಸೇವೆ ಆರಂಭ

Suddi Udaya

ಚಾತುರ್ಮಾಸ್ಯ ವೃತಾಚಾರಣೆ, ಬೆಳ್ತಂಗಡಿ ಪತ್ರಕರ್ತರ ಸಂಘದಿಂದ ಮಹಾಮಂಡಲೇಶ್ವರ ಕನ್ಯಾಡಿ ಶ್ರೀಗಳ ಭೇಟಿ

Suddi Udaya

ಹಳೆಕೋಟೆ ಮನೆಯಲ್ಲಿ ನಡೆದ ಬಂಗೇರರ ಅಂತಿಮ ವಿಧಿ-ವಿಧಾನ: ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶಕ್ಕೆ ಅವಕಾಶ: ವರ್ತಕರಿಂದ ಅಂಗಡಿ-ಮುಂಗಟ್ಟು ಬಂದ್ ಮಾಡಿ ಗೌರವ

Suddi Udaya

ಸರಕಾರಿ ಪ್ರೌಢಶಾಲೆ ನಡ: “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲೆ – 2024” ಪ್ರಶಸ್ತಿಗೆ ಆಯ್ಕೆ.

Suddi Udaya

ಕುವೆಟ್ಟು ಬೂತ್ 114ರಲ್ಲಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯಸ್ಮರಣೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾಗಿ ನಾರಾಯಣ ಪೂಜಾರಿ , ಕೆ.ಶ್ರೀಧರ್ ರಾವ್ ಆಯ್ಕೆ

Suddi Udaya
error: Content is protected !!