22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಲಾಯಿಲ ಗ್ರಾ.ಪಂ. ಗೆ ಕಸದ ಬುಟ್ಟಿ ವಿತರಣೆ

ಬೆಳ್ತಂಗಡಿ: ಪ್ರತಿಷ್ಠಿತ ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಸ್ವಚ್ಛ ಭಾರತ್ ಮಿಷನ್ ಕಾರ್ಯಕ್ರಮದಡಿಯಲ್ಲಿ ಸುಮಾರು 10 ಕಸದ ಬುಟ್ಟಿಗಳನ್ನು ವಿತರಿಸುವ ಕಾರ್ಯಕ್ರಮ ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಜು.21 ರಂದು ನಡೆಯಿತು.

ಲಾಯಿಲ ಗ್ರಾ.ಪಂ ಅಧ್ಯಕ್ಷೆ ಆಶಾ ಬೆನೆಡಿಕ್ಟ್ ಅವರಿಗೆ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷ ಶಂಕರ್ ರಾವ್ ಕಸದ ಬುಟ್ಟಿಗಳನ್ನು ಹಸ್ತಾಂತರಿಸಿದರು.

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಹಲವಾರು ಸಮಾಜಮುಖಿ ಕೆಲಸಕಾರ್ಯಗಳನ್ನು ಮಾಡುತ್ತಿರುವುದನ್ನು ಗಮನಿಸಿದ್ದೇನೆ. ಸದೃಢ ಭಾರತದ ಕಲ್ಪನೆಗೆಯುವ ಮನಸ್ಸುಗಳ ಕೊಡುಗೆ ಅಪಾರ. ಜೆಸಿಐ ನಡೆಸುತ್ತಿರುವ ಪ್ರತಿಯೊಂದು ಉತ್ತಮ ಕೆಲಸಕ್ಕೆ ಪಂಚಾಯತ್ ಸದಾ ಸಹಕರಿಸಲಿದೆ ಎಂದು ಗ್ರಾ.ಪಂ ಅಧ್ಯಕ್ಷೆ ಆಶಾ ಬೆನೆಡಿಕ್ಟ್ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ಶಂಕರ್ ರಾವ್ ವಹಿಸಿ ಮಾತನಾಡಿ ಮನಸ್ಸು ಸ್ವಚ್ಚವಾಗಿದ್ದರೆ ಇಡೀ ಸಮಾಜದ ಶುಚಿತ್ವವನ್ನು ಕಾಪಾಡಬಹುದು. ಸ್ವಚ್ಚ ಭಾರತ್ ನ‌ ಪರಿಕಲ್ಪನೆಯಲ್ಲಿ ನಾವು ಕಸದ ಬುಟ್ಟಿಗಳನ್ನು ವಿತರಿಸಿದ್ದೇವೆ ಎಂದರು.

ವೇದಿಕೆಯಲ್ಲಿ ಲಾಯಿಲ‌ ಗ್ರಾಮ ಪಂಚಾಯತ್ ಲೆಕ್ಕ ಪರಿಶೋಧಕಿ ಸುಪ್ರಿತಾ ಶೆಟ್ಟಿ, ಘಟಕದ ಕಮ್ಯೂನಿಟಿ ಡೆವಲಪ್ಮೆಂಟ್ ಉಪಾಧ್ಯಕ್ಷೆ ಆಶಾಲತಾ ಪ್ರಶಾಂತ್ ಉಪಸ್ಥಿತರಿದ್ದರು.

ಘಟಕದ ಪೂರ್ವಧ್ಯಕ್ಷ ಸ್ವರೂಪ್ ಶೇಖರ್ ವೇದಿಕೆಗೆ ಅತಿಥಿಗಳನ್ನು ಬರಮಾಡಿಕೊಂಡರು, ಜೂನಿಯರ್ ಜೆಸಿ ಅಧ್ಯಕ್ಷ ರಾಮಕೃಷ್ಣ ಶರ್ಮಾ ಜೆಸಿ ವಾಣಿ ಉದ್ಘೋಷಿಸಿದರು. ಕಾರ್ಯದರ್ಶಿ ಸುಧೀರ್ ಕೆ ಎನ್ ವಂದಿಸಿದರು.

ಕಾರ್ಯಕ್ರಮದಲ್ಲಿ ಘಟಕದ ಪೂರ್ವಧ್ಯಕ್ಷರುಗಳಾದ ನಾರಾಯಣ ಶೆಟ್ಟಿ, ವಸಂತ್ ಶೆಟ್ಟಿ ಶ್ರದ್ದಾ,ಕಿರಣ್ ಕುಮಾರ್ ಶೆಟ್ಟಿ,ಸದಸ್ಯರುಗಳಾದ ಶೀತಲ್ ಜೈನ್, ಪ್ರಮೋದ್, ಶೈಲೇಶ್ ವಿನಾಯಕ್ ಪ್ರಸಾದ್ ಮತ್ತು ರಶ್ಮಿ ಭಾಗವಹಿಸಿದ್ದರು.

Related posts

ತ್ಯಾಜ್ಯಗಳ ಡಂಪಿಂಗ್ ಯಾರ್ಡ್ ಆಗುತ್ತಿರುವ ಕೈಕಂಬ ಸೇತುವೆ…!!!

Suddi Udaya

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾದಿಂದ ಬೈಕ್ ಜಾಥದ ಮೂಲಕ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ:

Suddi Udaya

ಚಂದ್ರಹಾಸ ಬಳಂಜರಿಂದ ಸಂವಹನ ಕೌಶಲ್ಯದ ಬಗ್ಗೆ ತರಬೇತಿ

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಮಾನ್ಸೂನ್ ಸೇಲ್, ಪ್ರತಿ ಖರೀದಿಗೆ ಶೇ. 50 ರಷ್ಟು ರಿಯಾಯಿತಿ, ಗ್ರಾಹಕರಿಂದ ಉತ್ತಮ‌ ಪ್ರತಿಕ್ರಿಯೆ

Suddi Udaya

ಸತೀಶ್ ಕುರ್ಡುಮೆ ನಿಧನಕ್ಕೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದಿಂದ ಸಂತಾಪ

Suddi Udaya
error: Content is protected !!