23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್ ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ರವರಿಗೆ ‘ಸಹಕಾರ ಭೂಷಣ’ ಪ್ರಶಸ್ತಿ

ಬೆಳ್ತಂಗಡಿ: ಮುಂಬಯಿ ಮಹಾನಗರದಲ್ಲಿ ಕನ್ನಡಿಗರ ಸಾಂಸ್ಕೃತಿಕ ಕಲೆಗಳಿಗೆ ಸದಾ ಪ್ರೋತ್ಸಾಹ ನೀಡುತ್ತಾ ಕನ್ನಡಪರ ಚಟುವಟಿಕೆಗಳಲ್ಲಿ ಸಕ್ರಿಯವಾಗಿರುವ ಕರ್ನಾಟಕ ಸಂಘ ಅಂಧೇರಿ ಹಾಗೂ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕರ್ನಾಟಕ ಸರಕಾರದ ಸಹಯೋಗದಲ್ಲಿ ನೀಡುವ ‘ಸಹಕಾರ ಭೂಷಣ’ ಪ್ರಶಸ್ತಿಗೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಲ ಹಾಗೂ ಎಸ್ ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಆಯ್ಕೆಗೊಂಡಿದ್ದಾರೆ.

ಮು೦ಬಯಿಯ ವಿವಿಧ ಕನ್ನಡಪರ ಸಂಘಟನೆಗಳನ್ನು ಒಗ್ಗೂಡಿಸಿ ಜು. 29ರಂದು ಮುಂಬಯಿ ಕುರ್ಲಾ ಬಂಟರ ಭವನದಲ್ಲಿ ಹೊರನಾಡು ಕನ್ನಡ ಸಂಸ್ಕೃತಿ ಸಂಭ್ರಮ ಹಾಗೂ ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸವಿನೆನಪು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಕರ್ನಾಟಕ ಸಂಘವು ಸ್ಥಾಪಿಸಿದ ಪ್ರಥಮ ಸಹಕಾರ ಭೂಷಣ ಪ್ರಶಸ್ತಿಯನ್ನು ಡಾ|ಎಂ.ಎನ್. ರಾಜೇಂದ್ರ ಕುಮಾರ್ ಅವರು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಂದ ಸ್ವೀಕರಿಸಲಿದ್ದಾರೆ.

ಸಹಕಾರ ರಂಗದಲ್ಲಿ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮಾದರಿಯಾಗಿರುವ ಡಾ| ಎಂ.ಎನ್‌. ರಾಜೇಂದ್ರ ಕುಮಾರ್ ಅವರು ಎಸ್ ಸಿಡಿಸಿಸಿ ಬ್ಯಾಂಕನ್ನು 29 ವರ್ಷಗಳಿಂದ ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ. ಎಸ್‌ ಸಿಡಿಸಿಸಿ ಬ್ಯಾಂಕನ್ನು ರಾಷ್ಟ್ರೀಕೃತ ಬ್ಯಾಂಕುಗಳ ಸ್ಥಾನಮಾನಕ್ಕೇರಿಸಿದ ಹೆಗ್ಗಳಿಕೆ ಅವರದ್ದು, ವಿಶಿಷ್ಟ ಕಾರ್ಯ ವೈಖರಿಯಿಂದ ಎಸ್‌ ಸಿಡಿಸಿಸಿ ಬ್ಯಾಂಕ್‌ ಹೊಸಹೊಸ ಆವಿಷ್ಕಾರಗಳೊಂದಿಗೆ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ.

Related posts

ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಉಚಿತ ಯೋಗ ಶಿಬಿರಕ್ಕೆ ಚಾಲನೆ

Suddi Udaya

ಕಳಿಯ : ಕೊಜಪ್ಪಾಡಿ ಶ್ರೀ ನಾಗಬ್ರಹ್ಮ ಸ್ವಾಮಿ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ 198.74 ಕೋಟಿ ವ್ಯವಹಾರ,66.79 ಲಕ್ಷ ನಿವ್ವಳ ಲಾಭ,ಸದಸ್ಯರಿಗೆ 12 ಶೇ ಡಿವಿಡೆಂಟ್ ಘೋಷಣೆ

Suddi Udaya

ಕುಪ್ಪೆಟ್ಟಿ :ಕುಪ್ಪೆಟ್ಟಿ ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ(CRP)ಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಂಧ್ಯಾ ಬಿ. ಗೋಳಿತೊಟ್ಟು ಶಾಲೆಗೆ ವರ್ಗಾವಣೆ

Suddi Udaya

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಅಯೋದ್ಯೆ ಶ್ರವಣಧಾಮಕ್ಕೆ ಭೇಟಿ

Suddi Udaya

ನಾವೂರು ಜನಸ್ಪಂದನ ಸಭೆ: ಜೆಜೆಎಂ ಕಾಮಗಾರಿ ಸಮರ್ಪಕವಾಗಿಲ್ಲ , ಬೆಳೆ ವಿಮೆ ಜಮೆ ಕುರಿತು ಚರ್ಚೆ

Suddi Udaya
error: Content is protected !!