22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸರಕಾರಿ ಪ್ರೌಢ ಶಾಲೆಯಲ್ಲಿ ‘ಗಣಿತ ಸಂಘದ ಉದ್ಘಾಟನೆ’

ನಡ : ಸರಕಾರಿ ಪ್ರೌಢಶಾಲೆ ನಡ ಇಲ್ಲಿ 2013 – 24 ನೇ ಸಾಲಿನ ಗಣಿತ ಸಂಘದ ಉದ್ಘಾಟನೆಯನ್ನು ಜು. 22 ರಂದು ನಡೆಸಲಾಯಿತು.
ಉದ್ಘಾಟನೆ ನೆರವೇರಿಸಿ ಮಾತನಾಡಿದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಗಣಿತ ಶಿಕ್ಷಕರೂ ಆಗಿರುವ ಮುಖ್ಯ ಶಿಕ್ಷಕ ಯಾಕೂಬ್ ಎಸ್ ಇವರು ಈ ದಿನ ಜುಲಾಯಿ 22 ಪೈ ಬೆಲೆಯನ್ನು ಪ್ರತಿನಿಧಿಸುತ್ತದೆ. ಪೈ ಬೆಲೆ 22/ 7 ಆಗಿರುವುದರಿಂದ ಜು. 22 ರ ಈ ದಿನಕ್ಕೆ ಗಣಿತದಲ್ಲಿ ಮಹತ್ವವಿದೆ. ಆದ್ದರಿಂದ ಈ ದಿನ ಗಣಿತ ಸಂಘದ ಉದ್ಘಾಟನೆ ಮಾಡಿರುವುದು ಅರ್ಥಪೂರ್ಣವಾಗಿದೆ ಎಂದರು.


ನಡ ಸರಕಾರಿ ಪ್ರೌಢಶಾಲೆಯು ಈಗಾಗಲೇ ಗಣಿತಕ್ಕೆ ತನ್ನದೇ ಆದ ವಿಶಿಷ್ಠ ಕೊಡುಗೆ ನೀಡಿರುತ್ತದೆ. ಗಣಿತ ಪ್ರಯೋಗಾಲಯದ ಮೂಲಕ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿರುವ ಈ ಪ್ರೌಢಶಾಲೆಯು ವಿದ್ಯಾಥಿಗಳಿಗೆ ಅತೀ ಕ್ಲಿಷ್ಟವಾಗಿರುವ ಗಣಿತವನ್ನು ಸರಳಗೊಳಿಸಲು ಅನೇಕ ಯೋಜನೆಗಳನ್ನು ಹಮ್ಮಿಕೊಳ್ಳುತ್ತಿದೆ.


ಗಣಿತ ಸಂಘದ ಮೂಲಕ ಮಗ್ಗಿ ಕಂಠಪಾಠ, ಗಣಿತ ಸೂತ್ರ ಬರೆಯುವುದು, ಮಾದರಿ ತಯಾರಿಕೆ, ಗಣಿತಜ್ಞರ ಪರಿಚಯ, ಗಣಿತ ವಸ್ತು ಪ್ರದರ್ಶನ ಮುಂತಾದ ಕಾರ್ಯಕ್ರಮವನ್ನು ವರ್ಷಪೂರ್ತಿ ಹಮ್ಮಿಕೊಂಡಿದೆ.
ಇಂದು ನಡೆದ ಉದ್ಘಾಟನಾ ಸಮಾರಂಭದಲ್ಲಿ ಗಣಿತಕ್ಕೆ ಸಂಬಂಧಿಸಿದ ವಿವಿಧ ಚಟುವಟಿಕೆಗಳನ್ನು ನಡೆಸಲಾಯಿತು. ಗಣಿತ ಸಂಘದ ಅಧ್ಯಕ್ಷೆ ಕು. ಸಾನ್ವಿ ಹಾಗೂ ಕಾರ್ಯದರ್ಶಿ ಕು. ರಝ್ಮಿ ನಾ ಫಾತಿಮಾ ಗಣಿತ ಸಂಘದ ಚಟುವಟಿಕೆಗಳನ್ನು ರೂಪಿಸಿದ್ದು, ಇಂದಿನ ಕಾಯ೯ಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದರು.

Related posts

ಉಜಿರೆ: ಅನುಗ್ರಹ ಶಾಲಾ ವಿದ್ಯಾರ್ಥಿಗಳಿಂದ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya

ಕೊಕ್ಕಡದಲ್ಲಿ ಶ್ರೀ ಸೌತಡ್ಕ ರಸಗೊಬ್ಬರ ಮತ್ತು ಕೀಟನಾಶಕ ಮಳಿಗೆ” ಶುಭಾರಂಭ

Suddi Udaya

ದ.ಕ ಜಿಲ್ಲೆಯಲ್ಲಿ ಕಾಡಿದ ಕುಡಿಯುವ ನೀರಿನ ಸಮಸ್ಯೆ ಜಿಲ್ಲಾಡಳಿತ ಕೂಡಲೇ ಶಾಸಕರುಗಳ ಸಭೆ ಕರೆಯುವಂತೆ ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಮಹಾತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಂಚಮಿಯಂದು ಕೊಪ್ಪರಿಗೆ ಮುಹೂರ್ತ, ಅಂಗಪ್ರದಕ್ಷಣೆ

Suddi Udaya

ಉದ್ಯಮಿ ಶಶಿಧರ ಶೆಟ್ಟಿ- ಶ್ರೀಮತಿ ಪ್ರಮೀಳಾ ಎಸ್ ಶೆಟ್ಟಿ ಯವರಿಗೆ ವೈವಾಹಿಕ ದಾಂಪತ್ಯ ಜೀವನದ ಬೆಳ್ಳಿ ಹಬ್ಬದ ಸಂಭ್ರಮ: ಗೋಶಾಲೆಗೆ ರೂ. 1.50 ಲಕ್ಷ ಮೌಲ್ಯದ ಯಂತ್ರವನ್ನು ನೀಡುವುದಾಗಿ ಭರವಸೆ

Suddi Udaya

ಉಜಿರೆ: ಶ್ರೀ. ಧ.ಮಂ.ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವದ ಸಂಭ್ರಮ -ಮಕ್ಕಳಿಗೆ ಅದ್ದೂರಿಯ ಸ್ವಾಗತ

Suddi Udaya
error: Content is protected !!