July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸರಕಾರಿ ಪ್ರೌಢ ಶಾಲೆಯಲ್ಲಿ ‘ಗಣಿತ ಸಂಘದ ಉದ್ಘಾಟನೆ’

ನಡ : ಸರಕಾರಿ ಪ್ರೌಢಶಾಲೆ ನಡ ಇಲ್ಲಿ 2013 – 24 ನೇ ಸಾಲಿನ ಗಣಿತ ಸಂಘದ ಉದ್ಘಾಟನೆಯನ್ನು ಜು. 22 ರಂದು ನಡೆಸಲಾಯಿತು.
ಉದ್ಘಾಟನೆ ನೆರವೇರಿಸಿ ಮಾತನಾಡಿದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಗಣಿತ ಶಿಕ್ಷಕರೂ ಆಗಿರುವ ಮುಖ್ಯ ಶಿಕ್ಷಕ ಯಾಕೂಬ್ ಎಸ್ ಇವರು ಈ ದಿನ ಜುಲಾಯಿ 22 ಪೈ ಬೆಲೆಯನ್ನು ಪ್ರತಿನಿಧಿಸುತ್ತದೆ. ಪೈ ಬೆಲೆ 22/ 7 ಆಗಿರುವುದರಿಂದ ಜು. 22 ರ ಈ ದಿನಕ್ಕೆ ಗಣಿತದಲ್ಲಿ ಮಹತ್ವವಿದೆ. ಆದ್ದರಿಂದ ಈ ದಿನ ಗಣಿತ ಸಂಘದ ಉದ್ಘಾಟನೆ ಮಾಡಿರುವುದು ಅರ್ಥಪೂರ್ಣವಾಗಿದೆ ಎಂದರು.


ನಡ ಸರಕಾರಿ ಪ್ರೌಢಶಾಲೆಯು ಈಗಾಗಲೇ ಗಣಿತಕ್ಕೆ ತನ್ನದೇ ಆದ ವಿಶಿಷ್ಠ ಕೊಡುಗೆ ನೀಡಿರುತ್ತದೆ. ಗಣಿತ ಪ್ರಯೋಗಾಲಯದ ಮೂಲಕ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿರುವ ಈ ಪ್ರೌಢಶಾಲೆಯು ವಿದ್ಯಾಥಿಗಳಿಗೆ ಅತೀ ಕ್ಲಿಷ್ಟವಾಗಿರುವ ಗಣಿತವನ್ನು ಸರಳಗೊಳಿಸಲು ಅನೇಕ ಯೋಜನೆಗಳನ್ನು ಹಮ್ಮಿಕೊಳ್ಳುತ್ತಿದೆ.


ಗಣಿತ ಸಂಘದ ಮೂಲಕ ಮಗ್ಗಿ ಕಂಠಪಾಠ, ಗಣಿತ ಸೂತ್ರ ಬರೆಯುವುದು, ಮಾದರಿ ತಯಾರಿಕೆ, ಗಣಿತಜ್ಞರ ಪರಿಚಯ, ಗಣಿತ ವಸ್ತು ಪ್ರದರ್ಶನ ಮುಂತಾದ ಕಾರ್ಯಕ್ರಮವನ್ನು ವರ್ಷಪೂರ್ತಿ ಹಮ್ಮಿಕೊಂಡಿದೆ.
ಇಂದು ನಡೆದ ಉದ್ಘಾಟನಾ ಸಮಾರಂಭದಲ್ಲಿ ಗಣಿತಕ್ಕೆ ಸಂಬಂಧಿಸಿದ ವಿವಿಧ ಚಟುವಟಿಕೆಗಳನ್ನು ನಡೆಸಲಾಯಿತು. ಗಣಿತ ಸಂಘದ ಅಧ್ಯಕ್ಷೆ ಕು. ಸಾನ್ವಿ ಹಾಗೂ ಕಾರ್ಯದರ್ಶಿ ಕು. ರಝ್ಮಿ ನಾ ಫಾತಿಮಾ ಗಣಿತ ಸಂಘದ ಚಟುವಟಿಕೆಗಳನ್ನು ರೂಪಿಸಿದ್ದು, ಇಂದಿನ ಕಾಯ೯ಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದರು.

Related posts

ಬೆಳ್ತಂಗಡಿಯ ಪ್ರತಿಷ್ಠಿತ ಕೇದೆ ಗುತ್ತಿನ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ

Suddi Udaya

ವಾಣಿ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಪ.ಪೂ. ಕಾಲೇಜುಗಳ ಯೋಗಾಸನ ಸ್ಪರ್ಧೆ

Suddi Udaya

ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಇಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ ಮಾದರಿ ಮೂಲಕ ಶಾಲಾ ನಾಯಕ ಮತ್ತು ಉಪನಾಯಕ ಚುನಾವಣೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಹಿಂದುಳಿದ ವರ್ಗಗಳ ಮೊರ್ಚಾದ ಉಪಾಧ್ಯಕ್ಷರಾಗಿ ರಾಜೇಶ್ ಪೂಜಾರಿ ಮೂಡುಕೋಡಿ

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರಿಗೆ ಪ್ರಶಸ್ತಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಭೇಟಿ

Suddi Udaya
error: Content is protected !!