September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಉಪಾಧ್ಯಕ್ಷ, ಯುವ ಉದ್ಯಮಿ ಶೀತಲ್ ಜೈನ್ ರವರಿಗೆ ಉದ್ಯಮ ರತ್ನ ಪ್ರಶಸ್ತಿ: ಜೆಸಿಐ ಬೆಳ್ತಂಗಡಿ ಘಟಕಾಧ್ಯಕ್ಷ ಶಂಕರ್ ರಾವ್ ರವರಿಗೆ ಶೈನಿಂಗ್ ಸೂಪರ್ ಸ್ಟಾರ್ ಪ್ರೆಸಿಡೆಂಟ್ ಪ್ರಶಸ್ತಿ

ಬೆಳ್ತಂಗಡಿ : ಜೆಸಿಐ ಶಂಕರನಾರಾಯಣ ಆತಿಥ್ಯ ದಲ್ಲಿ ನಡೆದ ವಲಯದ ಬಿಸಿನೆಸ್ ಕಾನ್ಫರೆನ್ಸ್ ನಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಉಪಾಧ್ಯಕ್ಷ ಬೆಳ್ತಂಗಡಿ ಪವರ್ ಆನ್ ಬ್ಯಾಟರಿ ಮಾಲಕ, ಯುವ ಉದ್ಯಮಿ ಶೀತಲ್ ಜೈನ್ ರವರಿಗೆ ಜೆಸಿಐ ವಲಯ 15 ನೀಡುವ ಪ್ರತಿಷ್ಠಿತ ಉದ್ಯಮ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ, ಉಪನ್ಯಾಸಕ ಶಂಕರ್ ರಾವ್ ರವರಿಗೆ ವಲಯದ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದಿಂದ ಘಟಕದ 74% ಬೆಳವಣಿಗಾಗಿ ಶೈನಿಂಗ್ ಸೂಪರ್ ಸ್ಟಾರ್ ಪ್ರೆಸಿಡೆಂಟ್ ಪ್ರಶಸ್ತಿ ಲಭಿಸಿದೆ.ಜೆಸಿಐ ವಲಯ 15ರ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ ಮತ್ತು ಬೆಳವಣಿಗೆ ಮತ್ತು ಅಭಿವೃದ್ಧಿ ವಿಭಾಗದ ಅಧಿಕಾರಿ ಪ್ರಶಸ್ತಿ ನೀಡಿ ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಕಾರ್ಯದರ್ಶಿ ಸುಧೀರ್ ಕೆ. ಎನ್, ಉಪಾಧ್ಯಕ್ಷ ಪ್ರೀತಮ್ ಶೆಟ್ಟಿ, ಕೋಶಾಧಿಕಾರಿ ಸುಧೀರ್ ಜೈನ್, ಸೋಶಿಯಲ್ ಮೀಡಿಯಾ ನಿರ್ದೇಶಕ ಅರಿಹಂತ್ ಜೈನ್, ಸದಸ್ಯರುಗಳಾದ ಶೈಲೇಶ್ ಮತ್ತು ವಿನಾಯಕ್ ಪ್ರಸಾದ್ ಪಾಲ್ಗೊಂಡಿದ್ದರು.

Related posts

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆ ಎಸ್‌.ಡಿ.ಎಂ ಪಾಲಿಟೆಕ್ನಿಕ್‌ ನಲ್ಲಿ ಮಹಿಳೆಯರ ಆರೋಗ್ಯ ಮತ್ತು ನೈರ್ಮಲ್ಯ ಜಾಗೃತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರೌಢ ಶಾಲಾ ವಿದ್ಯಾರ್ಥಿನಿ: ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಶ್ರೀ ರಾಮ ಕ್ಷೇತ್ರಕ್ಕೆ ಮಾಜಿ ಸಚಿವರುಗಳಾದ ರಮಾನಾಥ ರೈ, ವಿನಯ ಕುಮಾರ್ ಸೊರಕೆ ಭೇಟಿ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಕೆಂಪೇಗೌಡ ಜಯಂತಿ ಆಚರಣೆ

Suddi Udaya

ಬಳಂಜ: ಕಾಪಿನಡ್ಕ ರಬ್ಬರ್ ತೋಟದಲ್ಲಿ ಚಿರತೆ ಪ್ರತ್ಯಕ್ಷ

Suddi Udaya
error: Content is protected !!