July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು: ಭಾರಿ ಗಾಳಿ ಮಳೆಗೆ ವಾಸ್ತವ್ಯದ ಮನೆಯ ಮೇಲ್ಛಾವಣಿ ಕುಸಿತ, ಪ್ರಾಣಾಪಾಯದಿಂದ ಪಾರು

ಇಂದಬೆಟ್ಟು: ಬಾರಿ ಗಾಳಿ ಮಳೆಗೆ ಇಂದಬೆಟ್ಟು ಗ್ರಾಮದ ಸೋಮಯ್ಯದಡ್ಡು ಪ್ರದೇಶದ ಜಾಕೋಬ್ ಮೊನಿಸ್ ರವರ ಮನೆಯ ಮೇಲ್ಛಾವಣಿ ಸಂಪೂರ್ಣ ಕುಸಿತಗೊಂಡು ಗೋಡೆ ಬಿರುಕು ಬಿಟ್ಟಿದ್ದು ಅಪಾರ ನಷ್ಟ ಉಂಟಾಗಿದೆ, ಅದೃಷ್ಟವಶಾತ್ ಮನೆಯಲ್ಲಿ ವಾಸ್ತವ್ಯವಿದ್ದ ಜಾಕೋಬ್ ಮೊನಿಸ್ ರವರು ಪ್ರಾಣಾಪಾಯದಿಂದ ಪಾರಾದ ಘಟನೆ ಜು.22ರಂದು ನಡೆದಿದೆ.

ಸ್ಥಳಕ್ಕೆ ಸ್ಥಳೀಯ ಪಂಚಾಯತ್ ಸದಸ್ಯರಾದ ಶ್ರೀಕಾಂತ್ ಎಸ್ ಇಂದಬೆಟ್ಟು, ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಇಂದಬೆಟ್ಟು ಸುಧರ್ಮ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರುಗಳು, ಸ್ಥಳೀಯ ಗ್ರಾಮಸ್ಥರು ಉಪಸ್ಥಿತರಿದ್ದು ಜಾಕೋಬ್ ಮೊನಿಸ್ ರವರಿಗೆ ಸಹಕಾರ ನೀಡಿದರು ಮತ್ತು ಆಗಿರುವ ನಷ್ಟಕ್ಕೆ ಸರ್ಕಾರದಿಂದ ಪರಿಹಾರ ದೊರಕಿಸಿಕೊಡುವಂತೆ ಪಂಚಾಯತ್ ಸದಸ್ಯರು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಲ್ಲಿ ವಿನಂತಿಸಿ ಕೊಂಡರು.

Related posts

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ನೋಟೀಸ್

Suddi Udaya

ಸುಲ್ಕೇರಿ: ಶ್ರೀ ನೇಮಿನಾಥಸ್ವಾಮಿ ಸಭಾಭವನ ಉದ್ಘಾಟನೆ

Suddi Udaya

ಫೆ11: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಳದಂಗಡಿ ಶಾಖೆಯಲ್ಲಿ ಉಚಿತ ವೈದ್ಯಕೀಯ, ದಂತ ಚಿಕಿತ್ಸೆ, ಕ್ಯಾನ್ಸರ್ ತಪಾಸಣೆ, ನೇತ್ರ ತಪಾಸಣೆ: ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರ

Suddi Udaya

ಪಿಯುಸಿ ವಿದ್ಯಾರ್ಥಿ ಸಾನ್ವಿ ಅಸೌಖ್ಯದಿಂದ ನಿಧನ

Suddi Udaya

ನಡ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿದ ಶ್ರೀಮತಿ ರಾಜೀವಿರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಮಲವಂತಿಗೆ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya
error: Content is protected !!