25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು: ಭಾರಿ ಗಾಳಿ ಮಳೆಗೆ ವಾಸ್ತವ್ಯದ ಮನೆಯ ಮೇಲ್ಛಾವಣಿ ಕುಸಿತ, ಪ್ರಾಣಾಪಾಯದಿಂದ ಪಾರು

ಇಂದಬೆಟ್ಟು: ಬಾರಿ ಗಾಳಿ ಮಳೆಗೆ ಇಂದಬೆಟ್ಟು ಗ್ರಾಮದ ಸೋಮಯ್ಯದಡ್ಡು ಪ್ರದೇಶದ ಜಾಕೋಬ್ ಮೊನಿಸ್ ರವರ ಮನೆಯ ಮೇಲ್ಛಾವಣಿ ಸಂಪೂರ್ಣ ಕುಸಿತಗೊಂಡು ಗೋಡೆ ಬಿರುಕು ಬಿಟ್ಟಿದ್ದು ಅಪಾರ ನಷ್ಟ ಉಂಟಾಗಿದೆ, ಅದೃಷ್ಟವಶಾತ್ ಮನೆಯಲ್ಲಿ ವಾಸ್ತವ್ಯವಿದ್ದ ಜಾಕೋಬ್ ಮೊನಿಸ್ ರವರು ಪ್ರಾಣಾಪಾಯದಿಂದ ಪಾರಾದ ಘಟನೆ ಜು.22ರಂದು ನಡೆದಿದೆ.

ಸ್ಥಳಕ್ಕೆ ಸ್ಥಳೀಯ ಪಂಚಾಯತ್ ಸದಸ್ಯರಾದ ಶ್ರೀಕಾಂತ್ ಎಸ್ ಇಂದಬೆಟ್ಟು, ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಇಂದಬೆಟ್ಟು ಸುಧರ್ಮ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರುಗಳು, ಸ್ಥಳೀಯ ಗ್ರಾಮಸ್ಥರು ಉಪಸ್ಥಿತರಿದ್ದು ಜಾಕೋಬ್ ಮೊನಿಸ್ ರವರಿಗೆ ಸಹಕಾರ ನೀಡಿದರು ಮತ್ತು ಆಗಿರುವ ನಷ್ಟಕ್ಕೆ ಸರ್ಕಾರದಿಂದ ಪರಿಹಾರ ದೊರಕಿಸಿಕೊಡುವಂತೆ ಪಂಚಾಯತ್ ಸದಸ್ಯರು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಲ್ಲಿ ವಿನಂತಿಸಿ ಕೊಂಡರು.

Related posts

ಇಂದಬೆಟ್ಟು: ಕೃಷಿ ಮತ್ತು ಕುಡಿಯುವ ನೀರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವ ಬಗ್ಗೆ ಮೆಸ್ಕಾಂ ಅಧಿಕಾರಿಗೆ ಗ್ರಾಮಸ್ಥರಿಂದ ಮನವಿ

Suddi Udaya

ಬೆಳ್ತಂಗಡಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಉಸ್ಮಾನ್ ಗರ್ಡಾಡಿ ರವರಿಗೆ ಮುಖ್ಯಮಂತ್ರಿ ಚಿನ್ನದ ಪದಕ

Suddi Udaya

ಮಲವಂತಿಗೆ: ಲಕ್ಷ್ಮಣ ಪೂಜಾರಿ ನಿಧನ

Suddi Udaya

ಎಸ್.ಡಿ.ಯಂ ಇಂಜಿನಿಯರಿಂಗ್ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ಕಬಡ್ಡಿಯಲ್ಲಿ ಗಮನೀಯ ಸಾಧನೆಯನ್ನು ಮಾಡಿದ್ದ ಕು. ಚಿನ್ಮಯಿ ರವರ ಪ್ರಾಯೋಜಕತ್ವದಲ್ಲಿ ಕ್ರೀಡಾ ಕಿಟ್ ವಿತರಣೆ

Suddi Udaya

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಗೂಡ್ಸ್ ಟೆಂಪೋ

Suddi Udaya

ಡಿ.17: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿ ಕಾಲೇಜಿನ ವಾರ್ಷಿಕ ದಿನಾಚರಣೆ

Suddi Udaya
error: Content is protected !!