23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು: ಭಾರಿ ಗಾಳಿ ಮಳೆಗೆ ವಾಸ್ತವ್ಯದ ಮನೆಯ ಮೇಲ್ಛಾವಣಿ ಕುಸಿತ, ಪ್ರಾಣಾಪಾಯದಿಂದ ಪಾರು

ಇಂದಬೆಟ್ಟು: ಬಾರಿ ಗಾಳಿ ಮಳೆಗೆ ಇಂದಬೆಟ್ಟು ಗ್ರಾಮದ ಸೋಮಯ್ಯದಡ್ಡು ಪ್ರದೇಶದ ಜಾಕೋಬ್ ಮೊನಿಸ್ ರವರ ಮನೆಯ ಮೇಲ್ಛಾವಣಿ ಸಂಪೂರ್ಣ ಕುಸಿತಗೊಂಡು ಗೋಡೆ ಬಿರುಕು ಬಿಟ್ಟಿದ್ದು ಅಪಾರ ನಷ್ಟ ಉಂಟಾಗಿದೆ, ಅದೃಷ್ಟವಶಾತ್ ಮನೆಯಲ್ಲಿ ವಾಸ್ತವ್ಯವಿದ್ದ ಜಾಕೋಬ್ ಮೊನಿಸ್ ರವರು ಪ್ರಾಣಾಪಾಯದಿಂದ ಪಾರಾದ ಘಟನೆ ಜು.22ರಂದು ನಡೆದಿದೆ.

ಸ್ಥಳಕ್ಕೆ ಸ್ಥಳೀಯ ಪಂಚಾಯತ್ ಸದಸ್ಯರಾದ ಶ್ರೀಕಾಂತ್ ಎಸ್ ಇಂದಬೆಟ್ಟು, ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಇಂದಬೆಟ್ಟು ಸುಧರ್ಮ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರುಗಳು, ಸ್ಥಳೀಯ ಗ್ರಾಮಸ್ಥರು ಉಪಸ್ಥಿತರಿದ್ದು ಜಾಕೋಬ್ ಮೊನಿಸ್ ರವರಿಗೆ ಸಹಕಾರ ನೀಡಿದರು ಮತ್ತು ಆಗಿರುವ ನಷ್ಟಕ್ಕೆ ಸರ್ಕಾರದಿಂದ ಪರಿಹಾರ ದೊರಕಿಸಿಕೊಡುವಂತೆ ಪಂಚಾಯತ್ ಸದಸ್ಯರು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಲ್ಲಿ ವಿನಂತಿಸಿ ಕೊಂಡರು.

Related posts

ಕುಣಿತಾ ಭಜನೆಯಲ್ಲಿ ಶ್ರೀ ವಿದ್ಯಾ ಸರಸ್ವತಿ ಭಜನಾ ಮಂಡಳಿ ಪಾರೆಂಕಿ ತಂಡಕ್ಕೆ ಪ್ರಥಮ ಸ್ಥಾನ

Suddi Udaya

ಕಾಶಿಬೆಟ್ಟು ಸ್ವಾಮಿ ಪ್ರಸಾದ್ ಅಸೋಸಿಯೇಟ್ಸ್ ನಲ್ಲಿ ಆಯುಧ ಪೂಜೆ

Suddi Udaya

ಚಾಲ್ತಿಯಲ್ಲಿ ಇಲ್ಲದ ಸಂಸ್ಥೆಯ ಹೆಸರಿನಲ್ಲಿ ದೇಣಿಗೆ ಸಂಗ್ರಹ: ಇಬ್ಬರು ಯುವಕರ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಪೊಲೀಸರ ನಿಯೋಜನೆ: ಪ್ರವಾಸಿಗರ ಮೋಜು ಮಸ್ತಿಗೆ ತಡೆ

Suddi Udaya

ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನ ಅನರ್ಹತೆಗೊಳಿಸಿರುವುದಕ್ಕೆ ಖಂಡನೆ: ಬೆಳ್ತಂಗಡಿ ಮೂರು ಮಾರ್ಗದ ಬಳಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಮೌನ ಪ್ರತಿಭಟನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಗುರುಮಿಠ್ಕಲ್ ಕ್ಷೇತ್ರದ ಶಾಸಕ ಶರಣ್ ಗೌಡ ಕಂದಕೂರ ಭೇಟಿ

Suddi Udaya
error: Content is protected !!