July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿಯ ವಾರ್ಷಿಕ ಮಹಾಸಭೆ

ಉಜಿರೆ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ(ರಿ.)ಗ್ರಾಮ ಸಮಿತಿ ಉಜಿರೆ ಇದರ ವಾರ್ಷಿಕ ಮಹಾಸಭೆಯು ಉಜಿರೆ ಶಾರದ ಮಂಟಪದಲ್ಲಿ ಉಜಿರೆ ಗ್ರಾಮ ಸಮಿತಿ ಅಧ್ಯಕ್ಷ ಧರ್ಣಪ್ಪ ಗೌಡ ಧರಣಿ, ಕಿರಿಯಾಡಿ ಅವರ ಅಧ್ಯಕ್ಷತೆಯಲ್ಲಿ ಜರಗಿತು.

ಕಾರ್ಯಕ್ರಮವನ್ನು ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಸುಳ್ಯದ ಉಪನ್ಯಾಸಕಿ ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರೆ ಡಾ. ಅನುರಾಧ ಕುರಿಂಜಿ ಭಾಗವಹಿಸಿದ್ದರು. ಉಜಿರೆ ಗ್ರಾಮ ಸಮಿತಿಯ ಉಸ್ತುವಾರಿ ಹಾಗೂ ತಾಲೂಕು ಸಂಘದ ಉಪಾಧ್ಯಕ್ಷ ಕೃಷ್ಣಪ್ಪ ಗೌಡ,ಉಜಿರೆ ಗ್ರಾಮ ಸಮಿತಿಯ ಗೌರವಾಧ್ಯಕ್ಷ ಪ್ರಕಾಶ್ ಗೌಡ’ಅಪ್ರಮೇಯ’ ಪ್ರಸ್ತಾವಿಕವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಸಾಧಕರಾದ ನಿವೃತ್ತ ಸೈನಿಕ ಡಿ. ಎಂ. ಗೌಡ, ನಿವೃತ್ತ ಶುತ್ತೂಷಕಿ ದೇವಮ್ಮ ನಿವೃತ್ತ ಭೂಸೇನೆ ಯೋಧ ತಿಮ್ಮಪ್ಪ ಗೌಡ ಇ. ಕೆ. ಹೀರ್ಯ ಇವರನ್ನು ಸನ್ಮಾನ ಮಾಡಲಾಯಿತು. ಗ್ರಾಮ ಸಮಿತಿಯ ರಮೇಶ್ ಪೈಲಾರ್,ಉಪಾಧ್ಯಕ್ಷ ಗೋಪಾಲಕೃಷ್ಣ ಜಿ. ಕೆ., ಕೋಶಾಧಿಕಾರಿ ಬಾಲಕೃಷ್ಣ ಗೌಡ ಕೋರಮೇರು, ಜೊತೆ ಕಾರ್ಯದರ್ಶಿ ಲಕ್ಷ್ಮಣ ಗೌಡ, ಯುವ ವೇದಿಕೆಯ ಅಧ್ಯಕ್ಷ ಸೋಮಶೇಖರ್ ಕೆ., ಕಾರ್ಯದರ್ಶಿ ಭರತ್, ಸಮಿತಿಯ ಪದಾಧಿಕಾರಿಗಳು, ಸದಸ್ಯರು,ತಾಲೂಕು ಸಮಿತಿಯ ಮಾಜಿ ಕಾರ್ಯದರ್ಶಿ ಉಪನ್ಯಾಸಕ ಮೋಹನ ಗೌಡ, ತಾಲೂಕು ವಾಣಿ ಸೌಹಾರ್ದ ಸಹಕಾರ ಸಂಘದ ನಿರ್ದೇಶಕ ಸುರೇಶ ಗೌಡ ಕೌಡಂಗೆ ಸ್ವಜಾತಿ ಭಾಂದವರು ಉಪಸ್ಥಿತರಿದ್ದರು.

ಗ್ರಾಮ ಸಮಿತಿಯ ಪ್ರಧಾನ ಕಾರ್ಯದರ್ಶಿ ಶೇಖರ ಗೌಡ ವರದಿ ವಾಚಿಸಿದರು. ಉಪಾಧ್ಯಕ್ಷ ರಮೇಶ್ ಪೈಲಾರ್ ಲೆಕ್ಕ ಪತ್ರ ಮಂಡಿಸಿದರು

ಶ್ರೀ ಧ. ಮ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಧರ್ಮೇ೦ದ್ರ ಕುಮಾರ್ ಬೆಳಾಲು ಕಾರ್ಯಕ್ರಮ ನಿರೂಪಿಸಿದರು

Related posts

ಮೇ 1ರಿಂದ ಕುದುರೆಮುಖ ವನ್ಯಜೀವಿ ವಿಭಾಗದ ಚಾರಣ ಪ್ರದೇಶ ಪ್ರವಾಸಿಗರಿಗೆ ಮುಕ್ತ

Suddi Udaya

ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 11 ಜೋಡಿಗಳಿಗೆ ಸಾಮೂಹಿಕ ವಿವಾಹ ನಿಶ್ವಿತಾರ್ಥ,

Suddi Udaya

ಮಹಿಳೆ ಮಗುವಿಗೆ ಮಾನಸಿಕ ಹಿಂಸೆ- ವರದಕ್ಷಿಣೆ ಕಿರುಕುಳ ಆರೋಪ: ಬೆಳಾಲಿನ ಮಹಿಳೆ ನೀಡಿದ ದೂರಿನಂತೆ ಪತಿ, ಮನೆಯವರ ಮೇಲೆ ಕೇಸು

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನದಲ್ಲಿ ಗ್ರಾಮ ಸುಭಿಕ್ಷೆಗಾಗಿ ಸೀಯಾಳ ಅಭಿಷೇಕ

Suddi Udaya

ಕಳೆಂಜ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಬದಿಯಡ್ಕದಲ್ಲಿ ಕಾರು ಅಪಘಾತ: ಬೆಳ್ತಂಗಡಿಯ ಇಬ್ಬರು ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!